ಮೈಸೂರು ಈಗ ಬಯಲು ಶೌಚಮುಕ್ತ ನಗರಿ
ಮೈಸೂರು, ಸೆಪ್ಟೆಂಬರ್ 25: ಸ್ವಚ್ಛತೆಯಲ್ಲಿ ಎರಡನೇ ಬಾರಿಗೆ ನಂ 1 ಪಟ್ಟ ಗಿಟ್ಟಿಸಿಕೊಂಡಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೊಂದು ಗರಿ ಮೂಡಿದೆ. ಇದೀಗ ಬಯಲು ಶೌಚಮುಕ್ತ ನಗರಿ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದೆ.
ಸ್ವಚ್ಛತಾ ಸಪ್ತಾಹದ ಅಂಗವಾಗಿ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾವು ಮೈಸೂರು ನಗರವನ್ನು ಬಯಲು ಶೌಚಮುಕ್ತ ನಗರ ಎಂದು ಘೋಷಿಸಿದೆ. ದೇಶದ 75 ನಗರಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆಯುವಲ್ಲಿ ಪಾಲಿಕೆಯ ಮೇಯರ್, ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರ ಪರಿಶ್ರಮ ಇರುವುದನ್ನು ತಳ್ಳಿ ಹಾಕುವಂತಿಲ್ಲ.[ನ.1ರಂದು ಬಯಲು ಶೌಚ ಮುಕ್ತ ರಾಜ್ಯಕ್ಕೆ ಮೋದಿ]

ಸ್ವಚ್ಛತೆ ಮತ್ತು ನೈರ್ಮಲ್ಯ ಮಟ್ಟವನ್ನು ಸುಧಾರಿಸುವ ಸಲುವಾಗಿ ನಗರಾಭಿವೃದ್ಧಿ ಮಂತ್ರಾಲಯವು ಸಮೀಕ್ಷೆ ನಡೆಸಿತ್ತು. ಕೌನ್ಸಿಲ್ ನ ಎಲ್ಲ ಮಾನದಂಡಗಳನ್ನು ಮೈಸೂರು ನಗರ ಪಾಲಿಸಿರುವುದರಿಂದ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆಯು ಕೇಂದ್ರ ಸರ್ಕಾರದ ಅಧಿಕೃತ ಆದೇಶದೊಂದಿಗೆ ಬಯಲು ಶೌಚಮುಕ್ತ ನಗರ ಎಂದು ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನವನ್ನು 2014ರ ಅಕ್ಟೋಬರ್ ನಲ್ಲಿ ಪ್ರಾರಂಭಿಸಿದ್ದು, ಇದು 2019ರ ವರೆಗೆ ನಡೆಯುತ್ತದೆ. ಇಷ್ಟಕ್ಕೂ ಮೈಸೂರು ಬಯಲು ಶೌಚ ಮುಕ್ತ ನಗರವಾಗಿ ಘೋಷಣೆ ಆಗಬೇಕಾದರೆ ಪಾಲಿಕೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿದೆ.[ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗೆ ಸಿಂಧು ರಾಯಭಾರಿ?]
ನಗರದಲ್ಲಿ ಶೇ 99 ಶೌಚಾಲಯಗಳಿದ್ದು, 425 ಮನೆಗಳು ವೈಯಕ್ತಿಕ ಶೌಚಾಲಯ ಹೊಂದಿಲ್ಲ. ಈ ಕುಟುಂಬಗಳಿಗೆ ನಗರ ಪಾಲಿಕೆಯು ಪ್ರೋತ್ಸಾಹಧನ ನೀಡಿ, ಶೌಚಾಲಯ ನಿರ್ಮಿಸಿಕೊಡಲು ಮುಂದಾಗಿದೆ.
ಸಂಸ್ಥೆಯ ಅಧಿಕಾರಿಗಳು ಮೊದಲೇ ನಗರಗಳಲ್ಲಿ ಸಮೀಕ್ಷೆ ನಡೆಸಿ, ರೈಲ್ವೆ ಹಳಿ, ಕೊಳಚೆ ಪ್ರದೇಶ ಸೇರಿದಂತೆ ಹಲವು ಸ್ಥಳಗಳ ಛಾಯಾಚಿತ್ರವನ್ನು ತೆಗೆದು ಅಪ್ ಲೋಡ್ ಮಾಡುತ್ತಾರೆ. ಬಳಿಕ ಆಯುಕ್ತರು, ಸ್ವಸಹಾಯ ಸಂಘದ ಸದಸ್ಯರು, ಪಾಲಿಕೆ ಸದಸ್ಯರು, ಅಧಿಕಾರಿಗಳು, ಆಯಾ ವ್ಯಾಪ್ತಿಯ ನಿವಾಸಿಗಳಿಂದ ಮಾಹಿತಿ ಪಡೆದು, ಆ ಮೂಲಕ ಆಯ್ಕೆ ಮಾಡಲಾಗುತ್ತದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications