ಮೈಸೂರು ಈಗ ಬಯಲು ಶೌಚಮುಕ್ತ ನಗರಿ
ಮೈಸೂರು, ಸೆಪ್ಟೆಂಬರ್ 25: ಸ್ವಚ್ಛತೆಯಲ್ಲಿ ಎರಡನೇ ಬಾರಿಗೆ ನಂ 1 ಪಟ್ಟ ಗಿಟ್ಟಿಸಿಕೊಂಡಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೊಂದು ಗರಿ ಮೂಡಿದೆ. ಇದೀಗ ಬಯಲು ಶೌಚಮುಕ್ತ ನಗರಿ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದೆ.
ಸ್ವಚ್ಛತಾ ಸಪ್ತಾಹದ ಅಂಗವಾಗಿ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾವು ಮೈಸೂರು ನಗರವನ್ನು ಬಯಲು ಶೌಚಮುಕ್ತ ನಗರ ಎಂದು ಘೋಷಿಸಿದೆ. ದೇಶದ 75 ನಗರಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆಯುವಲ್ಲಿ ಪಾಲಿಕೆಯ ಮೇಯರ್, ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರ ಪರಿಶ್ರಮ ಇರುವುದನ್ನು ತಳ್ಳಿ ಹಾಕುವಂತಿಲ್ಲ.[ನ.1ರಂದು ಬಯಲು ಶೌಚ ಮುಕ್ತ ರಾಜ್ಯಕ್ಕೆ ಮೋದಿ]

ಸ್ವಚ್ಛತೆ ಮತ್ತು ನೈರ್ಮಲ್ಯ ಮಟ್ಟವನ್ನು ಸುಧಾರಿಸುವ ಸಲುವಾಗಿ ನಗರಾಭಿವೃದ್ಧಿ ಮಂತ್ರಾಲಯವು ಸಮೀಕ್ಷೆ ನಡೆಸಿತ್ತು. ಕೌನ್ಸಿಲ್ ನ ಎಲ್ಲ ಮಾನದಂಡಗಳನ್ನು ಮೈಸೂರು ನಗರ ಪಾಲಿಸಿರುವುದರಿಂದ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆಯು ಕೇಂದ್ರ ಸರ್ಕಾರದ ಅಧಿಕೃತ ಆದೇಶದೊಂದಿಗೆ ಬಯಲು ಶೌಚಮುಕ್ತ ನಗರ ಎಂದು ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನವನ್ನು 2014ರ ಅಕ್ಟೋಬರ್ ನಲ್ಲಿ ಪ್ರಾರಂಭಿಸಿದ್ದು, ಇದು 2019ರ ವರೆಗೆ ನಡೆಯುತ್ತದೆ. ಇಷ್ಟಕ್ಕೂ ಮೈಸೂರು ಬಯಲು ಶೌಚ ಮುಕ್ತ ನಗರವಾಗಿ ಘೋಷಣೆ ಆಗಬೇಕಾದರೆ ಪಾಲಿಕೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿದೆ.[ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗೆ ಸಿಂಧು ರಾಯಭಾರಿ?]
ನಗರದಲ್ಲಿ ಶೇ 99 ಶೌಚಾಲಯಗಳಿದ್ದು, 425 ಮನೆಗಳು ವೈಯಕ್ತಿಕ ಶೌಚಾಲಯ ಹೊಂದಿಲ್ಲ. ಈ ಕುಟುಂಬಗಳಿಗೆ ನಗರ ಪಾಲಿಕೆಯು ಪ್ರೋತ್ಸಾಹಧನ ನೀಡಿ, ಶೌಚಾಲಯ ನಿರ್ಮಿಸಿಕೊಡಲು ಮುಂದಾಗಿದೆ.
ಸಂಸ್ಥೆಯ ಅಧಿಕಾರಿಗಳು ಮೊದಲೇ ನಗರಗಳಲ್ಲಿ ಸಮೀಕ್ಷೆ ನಡೆಸಿ, ರೈಲ್ವೆ ಹಳಿ, ಕೊಳಚೆ ಪ್ರದೇಶ ಸೇರಿದಂತೆ ಹಲವು ಸ್ಥಳಗಳ ಛಾಯಾಚಿತ್ರವನ್ನು ತೆಗೆದು ಅಪ್ ಲೋಡ್ ಮಾಡುತ್ತಾರೆ. ಬಳಿಕ ಆಯುಕ್ತರು, ಸ್ವಸಹಾಯ ಸಂಘದ ಸದಸ್ಯರು, ಪಾಲಿಕೆ ಸದಸ್ಯರು, ಅಧಿಕಾರಿಗಳು, ಆಯಾ ವ್ಯಾಪ್ತಿಯ ನಿವಾಸಿಗಳಿಂದ ಮಾಹಿತಿ ಪಡೆದು, ಆ ಮೂಲಕ ಆಯ್ಕೆ ಮಾಡಲಾಗುತ್ತದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications