'ಹಣ ಅಂದರೆ ಹೆಣವೂ ಬಾಯಿ ಬಿಡುತ್ತೆ'; ಗಾದೆ ಸುಳ್ಳಾಗಿಸಿದ ಮೈಸೂರು ಪ್ರಕರಣ
ಮೈಸೂರು, ಆಗಸ್ಟ್ 7; ಹಣ ಎಂದರೆ ಹೆಣವೂ ಬಾಯಿ ಬಿಡುತ್ತದೆ ಎಂಬುದು ಹಳೆಯ ಮಾತು. ಆದರೆ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಘಟನೆ ಹಾಗೂ ಅದರ ಮುಂದುವರಿದ ಭಾಗವಾಗಿ ನಡೆದ ಈ ಬೆಳವಣಿಗೆ ಈ ಗಾದೆ ಮಾತನ್ನು ಸುಳ್ಳಾಗಿಸಿದೆ.
ಆಗಸ್ಟ್ 4ರಂದು ರಸ್ತೆಯಲ್ಲಿ ಹೋಗುತ್ತಿದ್ದಾರೆ ವಿದ್ಯಾರ್ಥಿಯೊಬ್ಬರಿಗೆ ಸುಮಾರು 60 ಸಾವಿರ ರೂಪಾಯಿಗಳಿದ್ದ ನೋಟಿನ ಕಂತೆಯೊಂದು ಸಿಕ್ಕಿತ್ತು. ಅದರೊಳಗೆ ಒಂದು ದೂರವಾಣಿ ಸಂಖ್ಯೆಯನ್ನು ಬರೆದಿದ್ದ ನೋಟ್ ಕೂಡ ಸಿಕ್ಕಿತ್ತು. ಆದರೆ ಆ ನಂಬರ್ ಲಭ್ಯ ಇಲ್ಲದ ಕಾರಣ ಸಿಕ್ಕಿದ ಹಣದ ಜತೆಗೆ ವಿದ್ಯಾರ್ಥಿ ಸೀದಾ ದೇವರಾಜ ಠಾಣಾ ಪೊಲೀಸ್ ಠಾಣೆಗೆ ಹೋಗಿದ್ದರು. ವಾರಸುದಾರರನ್ನು ಪತ್ತೆ ಹಚ್ಚಿ ನೀವೇ ಹಣ ಹಿಂತಿರುಗಿಸಿ ಎಂದು ನೈತಿಕ ಹೊಣೆಗಾರಿಕೆಯನ್ನು ಪೊಲೀಸರಿಗೆ ವರ್ಗಾಯಿಸಿದ್ದರು. ಅದನ್ನು 'ಒನ್ ಇಂಡಿಯಾ ಕನ್ನಡ' ವರದಿ ಕೂಡ ಮಾಡಿತ್ತು.
ಎಸ್ಬಿಐ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಯಾಶಿಯರ್ ರಾಘವೇಂದ್ರ ಅವರ ಮಗ ಅನಿರುದ್ಧ ಅವರ ಈ ನಡೆತೆ ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿತ್ತು.
ಇದರ ಮುಂದುವರಿದ ಭಾಗವಾಗಿ ಮೈಸೂರು ದೇವರಾಜ ಠಾಣೆ ಪೊಲೀಸರು ಹಣದ ವಾರಸುದಾರರನ್ನು ಪತ್ತೆ ಮಾಡಿದ್ದಾರೆ. ಸಿಕ್ಕ ಹಣದ ಜೊತೆಯಲ್ಲಿದ್ದ ಭರ್ತಿ ಮಾಡಿದ ಬ್ಯಾಂಕಿನ ಚಾಲನ್ ಇದ್ದಿದ್ದರಿಂದ ಹಣದ ಮಾಲೀಕರನ್ನು ಹುಡುಕಲು ನೆರವಾಗಿದೆ. ಎಸ್ಬಿಐ ಬ್ಯಾಂಕ್ ವ್ಯವಸ್ಥಾಪಕರಾಗಿರುವ ಆರ್ಯನ್ ಎಂಬುವವರು ಹಣವನ್ನು ಕಳೆದುಕೊಂಡವರು ಎಂಬುದು ಗೊತ್ತಾಗಿದೆ. ಅವರನ್ನು ಸಂಪರ್ಕಿಸಿದ ಪೊಲೀಸರು ಇದೀಗ ಹಣವನ್ನು ಮರಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಯೊಬ್ಬರು ಹೊರಿಸಿದ್ದ ಗುರುತರವಾದ ಹೊಣೆಗಾರಿಕೆಯನ್ನು ಪೊಲೀಸರು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಇದನ್ನು ಸಾರ್ವಜನಿಕಗೊಳಿಸಲು ತೀರ್ಮಾನಿಸಿದ ಪೊಲೀಸರು ಹಣವನ್ನು ತಂದುಕೊಟ್ಟಿದ್ದ ರಾಘವೇಂದ್ರ ಹಾಗೂ ಅವರ ಮಗ ಅನಿರುದ್ಧ್ ಅವರನ್ನು ಠಾನೆಗೆ ಕರೆಸಿ, ಅವರ ಮೂಲಕವೇ ವಾರಸುದಾರರಿಗೆ ಹಣವನ್ನು ಹಿಂತಿರುಗಿಸಿದ್ದಾರೆ. ಪೊಲೀಸ್ ಆಯುಕ್ತ ಕೆ. ಟಿ. ಬಾಲಕೃಷ್ಣ, "ಇದೊಂದು ಮಾದರಿ ಬೆಳವಣಿಗೆ,'' ಎಂದಿದ್ದಾರೆ.
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications