ಮೈಸೂರಿನ ಹಲವೆಡೆ ಡಾ. ರಾಜ್ ಸ್ಮರಣೆ:ಅಣ್ಣಾವ್ರನ್ನು ನೆನೆದ ಯದುವೀರ್
ಮೈಸೂರು, ಏಪ್ರಿಲ್ 24:ವರ ನಟ ಡಾ.ರಾಜ್ ಕುಮಾರ್ ಹುಟ್ಟುಹುಬ್ಬದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಲವು ಸಂಘ -ಸಂಸ್ಥೆಗಳು ಹಾಗೂ ಗಣ್ಯರು ಶುಭಕೋರುತ್ತಿದ್ದಾರೆ. ಇದರೊಟ್ಟಿಗೆ ಡಾ. ರಾಜ್ ರ ಹಳೆ ಚಿತ್ರವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ರಾಜವಂಶಸ್ಥ ಯದುವೀರ್ ಶುಭಾಶಯ ತಿಳಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಾತ ಜಯಚಾಮರಾಜ ಒಡೆಯರ್ ಅವರು ಡಾ.ರಾಜ್ ಸನ್ಮಾನಿಸುತ್ತಿರುವ ಫೋಟೋ ಹಾಕುವ ಮೂಲಕ ಹಳೆಯ ನೆನಪು ಮೆಲಕು ಹಾಕಿದ್ದಾರೆ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್. ಇದೇ ವೇಳೆ ನಟ ಸಾರ್ವಭೌಮ, ಕನ್ನಡ ಚಿತ್ರ ರಂಗದ ಧ್ರುವತಾರೆ ಎಂದು ಯದುವೀರ್ ಪೋಸ್ಟ್ ಮಾಡಿದ್ದಾರೆ.

"ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರ 90ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಡಾ. ರಾಜ್ ಕುಮಾರ್ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರಿಂದ ಗೌರವಿಸಲ್ಪಡುತ್ತಿರುವುದು" ಎಂದು ಬರೆದು ತಿಳಿಸಿದ್ದಾರೆ.

ಡಾ. ರಾಜ್ ಸ್ಮರಣೆ
ಇಂದು ರಾಜ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾ.ರಾಜ್ ಕುಮಾರ್ ಅವರ ಜನ್ಮದಿನವನ್ನು ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ವರನಟ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿಕ ರಾಜ್ ಕುಮಾರ್ ಪಾರ್ಕ್ ನಲ್ಲಿ ಮೈಸೂರು ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ರಾಜ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಇನ್ನು ಡಾ.ರಾಜ್ ಅವರ ನೂರಾರು ಅಭಿಮಾನಿಗಳು ಬೆಳಗ್ಗೆಯಿಂದಲೂ ಡಾ.ರಾಜ್ ಪ್ರತಿಮೆ ಬಳಿ ಆಗಮಿಸಿ ಪುಷ್ಪಾರ್ಚನೆ ಮಾಡುತ್ತಿದ್ದು, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications