ಮೈಸೂರು ದಸರಾ:ಕಾವಾಡಿ-ಮಾವುತರಿಗೆ ಭೂರಿ ಬೋಜನ
ಮೈಸೂರು, ಸೆ. 28 ;: ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಕಾವಾಡಿಗರು ಹಾಗೂ ಮಾವುತರ ಕುಟುಂಬಕ್ಕೆ ನಗರದ ಅರಮನೆಯ ಆವರಣದಲ್ಲಿ ಜಿಲ್ಲಾಡಳಿತದಿಂದ ಭೋಜನ ಕೂಟ ಏರ್ಪಡಿಸಲಾಗಿತ್ತು.
ಮಂಗಳವಾರ ಜಿಲ್ಲಾಡಳಿತ ಏರ್ಪಡಿಸಿದ್ದ ಭೋಜನಕೂಟದಲ್ಲಿ ಮಾವುತರು, ಕಾವಾಡಿಗರು ಮತ್ತು ಕುಟುಂಬದವರು ಭೋಜನ ಸವಿದರು. ಮಾವುತರಿಗಾಗಿ ತಟ್ಟೆ ಇಡ್ಲಿ, ಕೆಂಪು ಚಟ್ನಿ, ಸಿಹಿ ಪೊಂಗಲ್, ಅಲಸಂದೆ ವಡೆ, ಪಾಲಕ್ ಅವರೇಬೇಳೆ ಕರಿ, ನವಣೆ ಖಾರ ಪೊಂಗಲ್, ನವಣೆ ಪಾಯಸ, ಕೊತ್ತಂಬರಿ ಕಷಾಯ, ಚಪಾತಿಯನ್ನು ತಯಾರಿಸಲಾಗಿತ್ತು. [ಮೈಸೂರು ದಸರಾ: ಅ.1ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ]

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮಾವುತ, ಕಾವಾಡಿಗರಿಗೆ ಊಟ ಬಡಿಸಿ ಅವರು ಸಹ ಅವರೊಂದಿಗೆ ಕುಳಿತು ಊಟ ಮಾಡಿದರು.
ಇದೇ ವೇಳೆ ಸಹಕಾರ ಸಚಿವ ಎಚ್.ಎಸ್.ಮಹದೇವ್ ಪ್ರಸಾದ್ ಮಾತನಾಡಿ, ಕಾವೇರಿ ವಿಷಯದ ಬಗ್ಗೆ ವಿಧಾನ ಮಂಡಲದಲ್ಲಿ ಕೈಗೊಂಡಿರುವ ನಿರ್ಣಯಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇವೆ. ಕಾವೇರಿ ಸಮಸ್ಯೆ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಟಸ್ಥ ತಂಡವನ್ನು ರಾಜ್ಯಕ್ಕೆ ಕಳುಹಿಸಿ ಅವರಿಂದ ವಸ್ತು ಸ್ಥಿತಿ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವುದು ಎಂದರು.[ಮೈಸೂರು ದಸರಾ ಪೂಜಾ ವಿಧಿವಿಧಾನಗಳ ಸಂಪೂರ್ಣ ವಿವರಣೆ ಇಲ್ಲಿದೆ!]

ಕಾರ್ಯಕ್ರಮದಲ್ಲಿ ಶಾಸಕ ಎಂ.ಕೆ.ಸೋಮಶೇಖರ್, ಮೇಯರ್ ಭೈರಪ್ಪ, ಜಿಲ್ಲಾಧಿಕಾರಿ ರಂದೀಪ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications