83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದ ವತಿಯಿಂದ ಮುಕ್ತ ಆಹ್ವಾನ

ಮೈಸೂರು, ನವೆಂಬರ್ 2 : ಮೈಸೂರಿನಲ್ಲಿ ನವೆಂಬರ್ 24 ರಿಂದ ಮೂರು ದಿನಗಳ ಕಾಲ ನಡೆಯುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವರೂ ಭಾಗವಹಿಸುವಂತೆ ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹೇವಪ್ಪ ಅವರು ಮನವಿ ಮಾಡಿದರು.

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಅವರು ಗುರುವಾರ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ನಡೆಸಿದರು. ಈ ಸಂದರ್ಭ ಸಾಹಿತ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ನವೆಂಬರ್ 24,25,26 ರಂದು ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮೂರ್ನಾಲ್ಕು ಸಭೆ ನಡೆದಿದೆ. 15 ಉಪ ಸಮಿತಿ ರಚನೆ ಯಾಗಿದೆ. ನವೆಂಬರ್ 4ನೇ ತಾರೀಖಿನೊಳಗೆ ಕ್ರಿಯಾಯೋಜನೆ ಸಲ್ಲಿಸಲು ಗಡುವು ನೀಡಲಾಗಿದೆ ಎಂದರು.

Mysuru: District incharge HC Mahadevappa invites all people to 83rd Kannada Sahitya Sammelana

ಸಮ್ಮೇಳನಕ್ಕಾಗಿ ಸಂಘಟಕರು 10ಕೋಟಿ ರೂ. ಅನುದಾನ ಕೇಳಿದ್ದಾರೆ. ಸರ್ಕಾರ ಈಗ 6 ಕೋಟಿ ರೂ. ಒದಗಿಸಿದೆ. ಹೆಚ್ಚುವರಿ ಅನುದಾನ ಕೊಡಿಸಲಿ ಕ್ರಮ ವಹಿಸುತ್ತೇನೆ ಎಂದರು. ಹಿಂದಿನ ಎಲ್ಲಾ ಸಮ್ಮೇಳನಕ್ಕಿಂತ ಹೆಚ್ಚು ವಿಜೃಂಭಣೆಯಿಂದ ಮೈಸೂರಿನ ಸಮ್ಮೇಳನ ನಡೆಯಬೇಕು.ಲಕ್ಷಾಂತರ ಕನ್ನಡಿಗರು ಭಾಗವಹಿಸುತ್ತಾರೆ. ಚಂಪಾ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅವರು ಎಡಪಂಥೀಯವಾದಿ ಮತ್ತು ಬಂಡಾಯ ಸಾಹಿತಿಗಳಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳುವ ಬದ್ಧತೆ ಅವರಿಗೆ ಇದೆ ಎಂದರು. ಲಕ್ಷಾಂತರ ಜನರು ಕನ್ನಡದ ತೇರು ಎಳೆಯಲು ಬರುತ್ತಾರೆ. ಅವರನ್ನು ಮುಕ್ತವಾಗಿ, ಹೃದಯಪೂರ್ವಕವಾಗಿ ಅಹ್ವಾನಿಸುತ್ತೇನೆ ಎಂದರು.

ಹಿಂದಿನ ಎಲ್ಲಾ ಸಮ್ಮೇಳನಕ್ಕಿಂತ ಹೆಚ್ಚು ವಿಜೃಂಭಣೆಯಿಂದ ಮೈಸೂರಿನ ಸಮ್ಮೇಳನ ನಡೆಯಬೇಕು.ಲಕ್ಷಾಂತರ ಕನ್ನಡಿಗರು ಭಾಗವಹಿಸುತ್ತಾರೆ. ಚಂಪಾ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅವರು ಎಡಪಂಥೀಯವಾದಿ ಮತ್ತು ಬಂಡಾಯ ಸಾಹಿತಿಗಳಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳುವ ಬದ್ಧತೆ ಅವರಿಗೆ ಇದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+