ಸ್ವಚ್ಛನಗರಿ ಮೈಸೂರಿನಲ್ಲಿ ಸೀಮೆಎಣ್ಣೆಗೆ ಭಾವಪೂರ್ಣ ಶ್ರದ್ಧಾಂಜಲಿ!
ಮೈಸೂರು, ಡಿಸೆಂಬರ್ 17 : ಸಾಂಸ್ಕೃತಿಕ ನಗರ ಮೈಸೂರು ಈಗಾಗಲೇ ಸ್ವಚ್ಛ ನಗರಿ ಎಂಬ ಹೆಸರಿಗೆ ಪಾತ್ರವಾಗಿರೋದು ನಮಗೆ ಅರಿವಿದೆ. ಇದೇ ನಿಟ್ಟಿನಲ್ಲಿ ಧೂಮಮುಕ್ತ ನಗರವನ್ನಾಗಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇದಕ್ಕೆಂದೇ ಸೀಮೆಎಣ್ಣೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಜಿಲ್ಲಾಡಳಿತ ಮುಂದಾಗಿದೆ.
ಧೂಮ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಕಳೆದ 3 ತಿಂಗಳಿನಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೀಮೆ ಎಣ್ಣೆ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕವನ್ನು ಧೂಮಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಮನೆಗಳಿಗೂ ಅಡುಗೆ ಅನಿಲ ಸಂಪರ್ಕ ಅಳವಡಿಸಿಕೊಳ್ಳಲು ಸೂಚನೆ ನೀಡಿಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸಿದೆ.[ತೈಲ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ]

ಸೀಮೆಎಣ್ಣೆ ಬಳಕೆ ಮಾಡುತ್ತಿರುವವರು ತಮಗೆ ಸೀಮೆಎಣ್ಣೆ ಅಗತ್ಯ ಇದೆ ಎನ್ನುವುದನ್ನು ಸಾಬೀತುಪಡಿಸಿ ದಾಖಲೆ ನೀಡಿದರೆ ಅಂತಹವರಿಗೆ ಸೀಮೆಎಣ್ಣೆ ಬಿಡುಗಡೆ ಮಾಡಲಾಗುವುದು. ಆದರೆ ಕಳೆದ 3 ತಿಂಗಳಿನಿಂದ ಸೀಮೆಎಣ್ಣೆ ಬೇಕೆಂದು ನಗರ ಪ್ರದೇಶದವರ್ಯಾರೂ ಅರ್ಜಿ ಸಲ್ಲಿಸಿಲ್ಲ.
ನಗರದಲ್ಲಿ ಸೀಮೆಎಣ್ಣೆ ಪಡೆಯುತ್ತಿದ್ದ ಕಾರ್ಡ್ದಾರರ ಸಂಖ್ಯೆ 40 ಸಾವಿರವಿದೆ. ಇವರ ಕಾರ್ಡ್ ಮಾಹಿತಿಯನ್ನು ತೈಲ ಕಂಪನಿಗಳ ಡಾಟಾಗೆ ಹೊಂದಾಣಿಕೆ ಮಾಡಲಾಗಿ 17 ಸಾವಿರ ಕಾರ್ಡ್ಗಳು ಅನರ್ಹಗೊಂಡಿವೆ. ಉಳಿದ 23 ಸಾವಿರ ಪಡಿತರ ಕಾರ್ಡ್ದಾರರಿಗೂ ಅಡುಗೆ ಅನಿಲ ಸಿಲಿಂಡರ್ ಪಡೆದುಕೊಳ್ಳುವುದಕ್ಕೂ ಹಾಗೂ ಸೀಮೆಎಣ್ಣೆ ಬೇಕೇಬೇಕು ಎನ್ನುವುದಕ್ಕೆ ಸೂಕ್ತ ಮಾಹಿತಿ ನೀಡುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ.
ಇದೇ ರೀತಿ ಗ್ರಾಮೀಣ ಪ್ರದೇಶದಲ್ಲಿದ್ದ 1,79,000 ಕಾರ್ಡ್ದಾರರಿಗೂ ಸೀಮೆಎಣ್ಣೆ ವಿತರಣೆ ನಿಲ್ಲಿಸಲಾಗಿದೆ. ತೈಲ ಸಂಸ್ಥೆಗಳಾದ ಐಒಸಿ, ಬಿಪಿಸಿ, ಹಾಗೂ ಎಚ್ಬಿಸಿಗಳು ಮಾರ್ಕೆಟಿಂಗ್ ಅಧಿಕಾರಿಗಳು, ವಿತರಕರರ ಸಭೆ ನಡೆಸಿ ಸಿಲಿಂಡರ್ ವಿತರಣೆ ಮಾಡುವ ಮನೆಗಳ ಸಮೀಕ್ಷೆ ಮಾಡಿ ವರದಿ ಪಡೆದುಕೊಳ್ಳುತ್ತಿದ್ದಾರೆ.
ಸೀಮೆಎಣ್ಣೆ ಬೇಕೇ ಬೇಕು ಎನ್ನುವವರು ತಮ್ಮ ಅಗತ್ಯತೆಯನ್ನು ದೃಢೀಕರಿಸುವ ದಾಖಲಾತಿ ನೀಡಿ ಸೀಮೆಎಣ್ಣೆ ಪಡೆಯಬಹುದು. ಸ್ಥಗಿತಗೊಳಿಸಿ 3 ತಿಂಗಳು ಕಳೆಯುತ್ತಾ ಬಂದಿದೆ ಈವರೆಗೂ ಯಾರೂ ಸೀಮೆಎಣ್ಣೆ ಬೇಕೆಂದು ಅರ್ಜಿ ಸಲ್ಲಿಸಿಲ್ಲ ಎನ್ನುತ್ತಾರೆ ಆಹಾರ ಇಲಾಖೆ ಉಪನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ. ಒಟ್ಟಾರೆ ಈ ಯೋಜನೆಯ ಜಾರಿಯಾದಾಗಿನಿಂದ ಮೈಸೂರು ಕೂಡ ಮುಂದಿನ ದಿನಗಳಲ್ಲಿ ಧೂಮಮುಕ್ತ ಜಿಲ್ಲೆಯ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications