ಕೇವಲ 10 ರೂ.ಗೆ ಚಿಕಿತ್ಸೆ ನೀಡುವ ಮೈಸೂರಿನ ಮಾದರಿ ವೈದ್ಯ ಶ್ಯಾಮಸುಂದರ್
ಮೈಸೂರು, ಡಿಸೆಂಬರ್ 3: ಇತ್ತೀಚಿನ ದಿನಗಳಲ್ಲಿ ವೈದ್ಯರು, ಆಸ್ಪತ್ರೆ ಎಂದರೆ ಸಾಕು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಆಸ್ಪತ್ರೆಗಳಲ್ಲಿ ಬೆಡ್ ಮೇಲೆ ಮಲಗಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರೆ, ಇತ್ತ ಅವರ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿಗಳ ಬಳಿ ಹೋಗಿ ಬಿಲ್ ಎಷ್ಟಾಯ್ತು? ಎಂದು ಕೇಳಿಕೊಂಡು ಬರುತ್ತಿರುತ್ತಾರೆ.
ಅದಕ್ಕೆ ಕಾರಣವೂ ಇದೆ ಬಿಡಿ. ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ನಾವು ನೀರಿಕ್ಷಣೆಯೇ ಮಾಡಿರುವುದಿಲ್ಲ, ಅಷ್ಟೊಂದು ಮೊತ್ತದ ಬಿಲ್ ನಮ್ಮ ಮುಂದಿರುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಹೀಗೆ ನಡೆದುಕೊಳ್ಳುವುದಿಲ್ಲವಾದರೂ ಕೆಲ ಆಸ್ಪತ್ರೆಗಳಲ್ಲಿ ಇದು ಸಾಮಾನ್ಯವಾಗಿ ಕಂಡುಬರುವ ದೃಶ್ಯ.
ಆದರೆ ನಿಮಗೆ ಮುಖ್ಯವಾದ ವಿಚಾರವೊಂದು ಹೇಳುವುದಿದೆ. ಅದೇನೆಂದರೆ ಮೈಸೂರಿನಲ್ಲೊಬ್ಬರು ಡಾಕ್ಟರ್ ಇದ್ದಾರೆ. ಅವರು ಪಡೆಯುವ ವೈದ್ಯಕೀಯ ಸಲಹಾ ಚಿಕಿತ್ಸೆ ಶುಲ್ಕ (ಕನ್ಸಲ್ಟೆನ್ಸಿ ಫೀ) 10 ರೂ ಅಷ್ಟೇ. ಅರೇ 10 ರೂ.ಗೆ ಒಂದು ಪ್ಲೇಟ್ ತಿಂಡಿಯೂ ಬರಲ್ಲ. ಅಂತಹದ್ದರಲ್ಲಿ ಟ್ರೀಟ್ ಮೆಂಟ್! ಎಂದು ಚಕಿತರಾಗಬೇಡಿ.
ಚಿಕಿತ್ಸಾ ಉಪಕರಣಗಳ ವೆಚ್ಚ, ವೈದ್ಯರ ವೈದ್ಯಕೀಯ ಸಲಹಾ ಚಿಕಿತ್ಸೆ ಶುಲ್ಕ ಗಗನಕ್ಕೇರುತ್ತಿರುವ ಈ ಹೊತ್ತಿನಲ್ಲಿ ಇಲ್ಲೊಬ್ಬರು ವೈದ್ಯರು ಕೇವಲ 10ರೂ.ಗೆ ಚಿಕಿತ್ಸೆ ನೀಡುತ್ತಾ ಮಾದರಿ ವೈದ್ಯರೆನಿಸಿಕೊಂಡಿದ್ದಾರೆ.
ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಅಂಗರಚನಾ ವಿಜ್ಞಾನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಅವರ ಹೆಸರು ಎನ್.ಎಂ.ಶ್ಯಾಮಸುಂದರ್. ಬಡ ರೋಗಿಗಳ ಬಂಧು ಎಂದರೆ ತಪ್ಪಾಗಲಾರದು. ಅಂದ ಹಾಗೆ ವೈದ್ಯರ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ಓದಿ...

ಹಳ್ಳಿಗಳಿಂದ ಹುಡುಕಿಕೊಂಡು ಬರುತ್ತಾರೆ
ಮೈಸೂರು ನಗರದ ಸಿದ್ಧಾರ್ಥ ಬಡಾವಣೆಯ 14ನೇ ಮುಖ್ಯರಸ್ತೆಯಲ್ಲಿ ಶಾಂತಲಾ ವಿದ್ಯಾಪೀಠ ಹಿಂಭಾಗ ಮಿನಿ ಕ್ಲಿನಿಕ್ ಇಟ್ಟುಕೊಂಡು ನಿತ್ಯ ರಾತ್ರಿ 8 ರಿಂದ 10 ಗಂಟೆವರೆಗೆ ಚಿಕಿತ್ಸೆ ನೀಡುತ್ತಾರೆ ವೈದ್ಯ ಶ್ಯಾಮಸುಂದರ್. ಕಳೆದ 3 ದಶಕಗಳಿಂದ ಈ ಕಾಯಕದಲ್ಲಿ ತೊಡಗಿಸಿಕೊಂಡಿದ್ದು, ಲಕ್ಷಾಂತರ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲೆಯ ವಿವಿಧ ಹಳ್ಳಿಗಳಿಂದ ಜನರು ಈ ವೈದ್ಯರನ್ನು ಹುಡುಕಿಕೊಂಡು ಬರುತ್ತಾರೆ ಎಂದರೆ ಇವರ ಸಾಮರ್ಥ್ಯ ನೀವೇ ಊಹಿಸಿ.

10 ರೂ.ಗೆ ಚುಚ್ಚುಮದ್ದು, ಮಾತ್ರೆ
10 ರೂಪಾಯಿ ಡಾಕ್ಟರ್ ಎಂದೇ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಶ್ಯಾಮಸುಂದರ್ 10 ರೂ.ಗೆ ತಪಾಸಣೆ ಜೊತೆಗೆ ಚುಚ್ಚುಮದ್ದು ಹಾಗೂ ಮಾತ್ರೆ ನೀಡುತ್ತಾರೆ. ಮಕ್ಕಳಿಗೆ ಹರ್ನಿಯಾ ಸೇರಿದಂತೆ ಸಣ್ಣಪುಟ್ಟ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದಾರೆ.

ಪ್ರಾಧ್ಯಾಪಕರಾಗಿ ಕೆಲಸ
ಅಂಗರಚನಾ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ 16 ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಸುಂದರ್ ಗೆ 63 ವರ್ಷ. ಇವರು ಇದೇ ವಿಭಾಗದಲ್ಲಿ ಈಗ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಜೆಎಸ್ ಎಸ್ ದೇಹದಾನ ಸಂಸ್ಥೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ನಿತ್ಯ 25 ಮಂದಿಗೆ ಚಿಕಿತ್ಸೆ ನೀಡುವೆ
ಇನ್ನು ಈ ಕುರಿತಾಗಿ ಒನ್ ಇಂಡಿಯಾ ಜೊತೆ ಮಾತನಾಡಿದ ಡಾ. ಶ್ಯಾಮ್ ಸುಂದರ್, ನನಗೆ ಈ ಕೆಲಸ ಹೆಚ್ಚು ತೃಪ್ತಿ ತರಿಸಿದೆ. ನನಗೆ ಕಾಲೇಜಿನಲ್ಲಿ ತಿಂಗಳ ವೇತನ ಬರುತ್ತದೆ. ಹೀಗಾಗಿ, ಚಿಕಿತ್ಸೆಗೆ ಬರುವವರಿಂದ ಹೆಚ್ಚು ಹಣ ಪಡೆಯುವುದಿಲ್ಲ. ನಿತ್ಯ 25 ಮಂದಿಗೆ ಚಿಕಿತ್ಸೆ ನೀಡುತ್ತೇನೆ. ರಾತ್ರಿ ಟಿ.ವಿ ನೋಡಿ ಕಾಲ ಕಳೆಯುವ ಬದಲು ಕ್ಲಿನಿಕ್ ಇಟ್ಟುಕೊಂಡು ಚಿಕಿತ್ಸೆ ನೀಡುತ್ತಿದ್ದೇನೆ.
ಶಸ್ತ್ರಚಿಕಿತ್ಸೆ ನಡೆಸಿ ಇಂತಿಷ್ಟೇ ಹಣ ಕೊಡಿ ಎಂದು ನಾನು ಕೇಳುವುದಿಲ್ಲ. ಎಷ್ಟು ಕೊಡುತ್ತಾರೋ ಅಷ್ಟು ಪಡೆಯುತ್ತೇನೆ. ಹೀಗೆ, ಸುಮಾರು 3 ಸಾವಿರ ಶಸ್ತ್ರಚಿಕಿತ್ಸೆ ನಡೆಸಿದ್ದೇನೆ. ಚಿಕಿತ್ಸೆ ಪಡೆದ
ರೋಗಿಯು ನಾಳೆ ಬಂದು ಚೆನ್ನಾಗಿದ್ದೇನೆ ಎಂದು ಹೇಳಿದರೆ ಅದೇ ನನಗೆ ಸಮಾಧಾನ ಎಂದು ನಗುಮೊಗದಿಂದಲೇ ನುಡಿಯುತ್ತಾರೆ ವೈದ್ಯ ಶ್ಯಾಮ್ ಸುಂದರ್.
ಉನ್ನತ ಹುದ್ದೆಯಲ್ಲಿದ್ದರೆ ಸಾಕು ಎಲ್ಲವನ್ನೂ ವ್ಯವಹಾರಿಕವಾಗಿಯೇ ಕಾಣುವ ಅನೇಕರ ನಡುವೆ ಶ್ಯಾಮ್ ಸುಂದರ್ ಎಲ್ಲರಿಗೂ ಮಾದರಿಯಾಗಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications