Mysuru: ಮೈಸೂರಿನಲ್ಲಿ ಮತ್ತೆ ಅವಳಿ ಚಿತ್ರಮಂದಿರಗಳು ನೆಲಸಮ
ಮೈಸೂರು, ಮಾರ್ಚ್ 05: ಕೋವಿಡ್ ನಂತರ ಮೈಸೂರಿನ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಒಂದೊಂದಾಗಿ ನೆಲಸಮವಾಗುತ್ತಿದ್ದು, ಈ ಸಾಲಿಗೆ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಸೇರಿಕೊಂಡಂತಾಗಿದೆ. ಕನ್ನಡ ಚಿತ್ರಗಳು ಮಾತ್ರವಲ್ಲದೇ ಹಿಂದಿ, ತೆಲುಗು, ಇಂಗ್ಲೀಷ್, ತಮಿಳು ಸಹಿತ ನಾನಾ ಭಾಷೆಗಳ ಚಿತ್ರ ಪ್ರದರ್ಶನದ ಮೂಲಕ ಮನೆಮಾತಾಗಿದ್ದ ಸ್ಟರ್ಲಿಂಗ್ ಹಾಗೂ ಸ್ಕೈಲೈನ್ ಚಿತ್ರಮಂದಿರಗಳು ಕೋವಿಡ್ ಬಳಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕೆಲ ವರ್ಷಗಳ ಹಿಂದೆಯೇ ಬಂದ್ ಆಗಿದ್ದವು.
ದಿನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರಗಳನ್ನು ಇದೀಗ ನೆಲಸಮ ಮಾಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ರಣಜಿತ್, ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಚಿತ್ರಮಂದಿರಗಳು ನೆಲಸಮಗೊಂಡಿವೆ. ಇತ್ತೀಚೆಗೆ ಲಕ್ಷ್ಮೀ ಹಾಗೂ ಸರಸ್ವತಿ ಚಿತ್ರಮಂದಿರಗಳು ನೆಲಸಮಗೊಂಡಿದ್ದವು. ಅವುಗಳ ಸಾಲಿಗೆ ಇದೀಗ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ಸಿನಿಪ್ರಿಯರಿಗೆ ಬೇಸರ ತರಿಸಿದೆ.

ಮೈಸೂರಿನಲ್ಲೀಗ ಕೇವಲ ಬೆರಳೆಣಿಕೆಯಷ್ಟು ಚಿತ್ರಮಂದಿರಗಳು ಮಾತ್ರ ಇದ್ದು ಅವುಗಳನ್ನಾದರೂ ಉಳಿಸಿಕೊಳ್ಳಬೇಕು ಎಂಬುದು ಸಿನಿಮಾ ಪ್ರೇಕ್ಷಕರ ಆಶಯವಾಗಿದೆ.
ಬಾಂಬೆಯ ಗಂಗಾ ಜಮುನ, ಬೆಂಗಳೂರಿನ ಬ್ಲೂಮೂನ್ ಮತ್ತು ಬ್ಲೂ ಡೈಮಂಡ್ ಮಾದರಿಯಲ್ಲೇ ಮೈಸೂರಿನಲ್ಲಿ ಸ್ಟರ್ಲಿಂಗ್ ಹಾಗೂ ಸ್ಕೈಲೇನ್ ಚಿತ್ರಮಂದಿರ ನಿರ್ಮಿಸಲಾಗಿತ್ತು. 1974ರಲ್ಲಿ ಸ್ಟರ್ಲಿಂಗ್ ಆರಂಭವಾದರೆ, 1978ರಲ್ಲಿ ಸ್ಕೈಲೇನ್ ಆರಂಭವಾಯಿತು. ಆರಂಭದಲ್ಲಿ ಹೆಚ್ಚು ಪ್ರೇಕ್ಷಕರಿಲ್ಲದೆ ಹೊರೆಯಾಗಿ ಪರಿಣಮಿಸಿತು. ಕ್ರಮೇಣ ಇಂಗ್ಲಿಷ್ ಚಿತ್ರಗಳನ್ನು ಪ್ರದರ್ಶನ ಮಾಡಲು ಆರಂಭಿಸಿದ ನಂತರ ಚಿತ್ರಮಂದಿರದ ಅದೃಷ್ಟ ಬದಲಾಯಿತು. ನಂತರ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಲಾರಂಭಿಸಿದರು.
ಹಿಂದಿ ಚಿತ್ರಗಳೂ ಮಾಲೀಕರ ಕೈ ಹಿಡಿದವು. ಅಮಿತಾಬ್ ಬಚ್ಚನ್ ನಟನೆಯ ಡಾನ್, ಸಿಲ್ವೆಸ್ಟರ್ ಸ್ಟಲ್ಲೋನ್ ಅಭಿನಯದ ಸ್ಪೆಷಲಿಸ್ಟ್, ಕೋಬ್ರಾ, ಲಿಯೊನಾರ್ಡ್ ಡಿಕಾಪ್ರಿಯೊ ಅವರ ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್ ಸಿನಿಮಾಗಳು ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿವೆ.
ಹೆಚ್ಚಾದ ಆಸ್ತಿ ತೆರಿಗೆ ಮತ್ತು ನಿರ್ವಾಹಣ ವೆಚ್ಚ, ಸಿನಿ ರಸಿಕರ ಕೊರತೆ, ಮಲ್ಟಿಫೆಕ್ಸ್ ಅಬ್ಬರ ಸೇರಿದಂತೆ ಹತ್ತಾರು ಕಾರಣಗಳಿಂದ ಮೈಸೂರಿನಲ್ಲಿ 10ಕ್ಕೂ ಹೆಚ್ಚು ಚಿತ್ರಮಂದಿಗಳು ನೆಲಸಮಗೊಂಡಿದ್ದವು. ಕಳೆದ 2024ರ ನವೆಂಬರ್ನಲ್ಲಿ ಸರಸ್ವತಿ ಚಿತ್ರಮಂದಿರವೂ ಇದೇ ಕಾರಣಕ್ಕೆ ನೆಲಸಮವಾಗಿತ್ತು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾವಿರಾರು ಚಲನಚಿತ್ರಗಳನ್ನು ಪ್ರದರ್ಶಿಸುತ್ತಿದ್ದ 20ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 10ಕ್ಕೂ ಹೆಚ್ಚು ಚಿತ್ರಮಂದಿರಗಳು ಈಗಾಗಲೇ ನೆಲಸಮಗೊಂಡಿದ್ದು, ಬೆರಳೆಣಿಕೆಯಷ್ಟು ಮಾತ್ರ ಇಂದಿಗೂ ತಮ್ಮ ಅಸ್ತಿತ್ವ ಉಳಿಸಿಕೊಂಡಿವೆ. ಹೀಗೆ ಕಾಲದ ಹೊಡೆತಕ್ಕೆ ಕಣ್ಮರೆಯಾದ ಚಿತ್ರಮಂದಿರಗಳ ಪಟ್ಟಿಯೂ ದೊಡ್ಡದಿದೆ. ರಣಜಿ, ಅಪೆರಾ, ಶಾಲಿಮಾರ್, ಶ್ರೀನಾಗರಾಜ, ರತ್ನ, ಶಾಂತಲಾ, ಲಕ್ಷ್ಮೀ, ಗೋಕುಲ, ಗಣೇಶ, ಓಲಂಪಿಯಾ, ರಿಜೆನ್ಸಿ, ವಿದ್ಯಾರಣ್ಯ, ಚಾಮುಂಡೇಶ್ವರಿ, ಉಮಾ ಚಿತ್ರಮಂದಿರಗಳು ಈಗಾಗಲೇ ಕಣ್ಮರೆಯಾಗಿವೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications