ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇ 15 ರಂದು ಏಷ್ಯನ್ ಪೇಂಟ್ಸ್ ವಿರುದ್ಧ ರೈತರ ಪ್ರತಿಭಟನೆ

|
Google Oneindia Kannada News

ಮೈಸೂರು, ಮೇ 14:ನಂಜನಗೂಡು ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯನ್ ಪೇಂಟ್ಸ್ ಕಂಪನಿಯ ರೈತ ವಿರೋಧಿ ನಿಲುವಿನಿಂದ ಭೂಮಿ ಕಳೆದುಕೊಂಡಿರುವ ರೈತರು ಮೇ 15ರಂದು ನಾಳೆ ಕಂಪನಿ ಎದುರು ಧರಣಿ ನಡೆಸುವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ರಾಮೇಗೌಡ ವಿದ್ಯಾಸಾಗರ್ ತಿಳಿಸಿದರು.

ನಿಜವಾದ ಮುನ್ಸೂಚನೆ, ಕಾಗ್ನಿಜೆಂಟ್ ಹಿರಿಯ ಅಧಿಕಾರಿ ಹೊರಕ್ಕೆನಿಜವಾದ ಮುನ್ಸೂಚನೆ, ಕಾಗ್ನಿಜೆಂಟ್ ಹಿರಿಯ ಅಧಿಕಾರಿ ಹೊರಕ್ಕೆ

ಇಮ್ಮಾವು ಗ್ರಾಮದ ರೈತರಿಗೆ ಕಾಯಂ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಏಷ್ಯನ್ ಪೇಂಟ್ಸ್ ಅತಿ ಕಡಿಮೆ ದರದಲ್ಲಿ ರೈತರಿಂದ ಭೂಮಿ ಪಡೆದುಕೊಂಡಿದೆ. ಆದರೆ, ಈಗ ರೈತರಿಗೆ ಉದ್ಯೋಗವನ್ನು ನೀಡದೆ ವಂಚಿಸುತ್ತಿದೆ. ರೈತರು ಶಿಕ್ಷಣ ಪಡೆದಿಲ್ಲ ಎಂದು ಕೆಳ ದರ್ಜೆಯ ಕೆಲಸಗಳನ್ನು ನೀಡುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.

Mysuru farmers are going to protest against Asian paints company

ಉದ್ಯೋಗ ನೀಡದೆ ಇದ್ದುದನ್ನು ಖಂಡಿಸಿ ಹಲವಾರು ಪ್ರತಿಭಟನೆಗಳು ನಡೆದಿವೆ. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸುಮಾರು 20 ಸಭೆಗಳು ನಡೆದರೂ ಕಂಪನಿಯು ರೈತರಿಗೆ ಕಾಯಂ ಉದ್ಯೋಗ ನೀಡಲಿಲ್ಲ. ಮೇ 15ರಂದು ಬೆಳಗ್ಗೆ 10ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳುತ್ತಿದೆ. ರೈತರೊಂದಿಗೆ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಯುವ ಸೇನೆ, ಮಹಿಳಾ ಸಂಘಟನೆಗಳು ವಿವಿಧ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು ಹೋರಾಟದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.

English summary
Nanjangudu, Himmavu Farmers will protest against Asian Paints on May 15. They want best jobs for their families by this company.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X