ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಲ್ಲ, ಅಂಥದ್ದರಲ್ಲಿ...
ಮೈಸೂರು, ಜೂನ್ 5: ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರಲಿಲ್ಲ. ಹೀಗಿರುವಾಗ ಈ ಸಮಯದಲ್ಲಿ ಸರ್ಕಾರಿ ನಿವಾಸದಲ್ಲಿ ಈಜುಕೊಳ ಬೇಕಿತ್ತಾ? ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಜಿ ಸಚಿವ ಎ.ಮಂಜು ವಾಗ್ದಾಳಿ ನಡೆಸಿದರು.
Recommended Video

ಮೈಸೂರಿನಲ್ಲಿ ಮಾತಾಡಿದ ಮಾಜಿ ಸಚಿವ ಎ.ಮಂಜು, ಸರ್ಕಾರಿ ಅಧಿಕಾರಿಗಳು ಒಂದೇ ಕಡೆ ಇರುತ್ತಾರಾ? ಬೇರೆಡೆ ವರ್ಗಾವಣೆ ಆಗಿ ಹೋಗುತ್ತಾರೆ. ಇದು ಗುತ್ತಿಗೆದಾರನಿಗಾಗಿ ಮಾಡಿರುವ ಕೆಲಸವಷ್ಟೇ? ಇವತ್ತು ದನ ಕಾಯುವವರೂ ಐಎಎಸ್ ಮಾಡುತ್ತಾರೆ. ನಂತರ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ದನ ಕಾಯೋರು, ಅಡ್ಜಸ್ಟ್ಮೆಂಟ್ ಮಾಡಿಕೊಳ್ಳುವವರು ಸಹ ಐಎಎಸ್ ಪಾಸ್ ಮಾಡುತ್ತಾರೆ ಅಂತ ಕಿಡಿಕಾರಿದರು.
ಜಿಲ್ಲಾಧಿಕಾರಿ ಆಗಿದ್ದವರು ಜನಸೇವೆ ಹೇಗೆ ಮಾಡುತ್ತೇವೆ ಅನ್ನುವುದು ಮುಖ್ಯ. ದುರಹಂಕಾರದಿಂದ ವರ್ತಿಸುವುದು ತಪ್ಪು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮನೆಗೆ ಶಿಕ್ಷಕರು ಬಂದು ಅವರ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ ಎಂದು ಸಚಿವ ಎ.ಮಂಜು ಆರೋಪಿಸಿದರು.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ. ಡಿಸಿಗೆ ಒಂದು ರೂಲ್ಸ್, ಸಾಮಾನ್ಯ ಜನರಿಗೆ ಒಂದು ರೂಲ್ಸಾ? ಜನಸಾಮಾನ್ಯರ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಡಿಸಿ ಮಕ್ಕಳಿಗೆ ಮನೆಗೆ ಬಂದು ಶಿಕ್ಷಕರಿಂದ ಪಾಠ ಪ್ರವಚನ ನಡೆಸಲಾಗುತ್ತಿದೆ. ಈ ಇಬ್ಬಗೆ ನೀತಿಯನ್ನು ಕೇಳೋರು ಯಾರು ಎಂದು ಪ್ರಶ್ನಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications