ಸುಪಾರಿ ನೀಡಿದ್ದ ಮೈಸೂರು ಯುವತಿ ಪೊಲೀಸರ ಅತಿಥಿ
ಮೈಸೂರು, ಅಕ್ಟೋಬರ್ 27: ಮದುವೆಗೆ ವಿರೋಧ ಮಾಡಿದರು ಎಂಬ ಕಾರಣಕ್ಕೆ ತಂದೆ-ಮಗನ ಮೇಲೆ ಹಲ್ಲೆ ಮಾಡಿಸಿದ್ದ ಪ್ರಕರಣದಲ್ಲಿ ಇಲ್ಲಿನ ನರಸಿಂಹರಾಜ ಪೊಲೀಸ್ ಠಾಣೆ ಪೊಲೀಸರು ಯುವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಚಾಮರಾಜಪುರಂನ ಮಂಜುನಾಥ ಅವರ ಮಗಳು ಮೋನಿಶಾ, ಆಕೆ ಸ್ನೇಹಿತರಾದ ಗೌರವ್, ರಾಘವೇಂದ್ರ ಬಂಧಿತರು.
ಇನ್ನು ಮೋನಿಶಾಳ ಪ್ರಿಯಕರ ಸಿರಾಜ್ ನ ಬಂಧನಕ್ಕಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ನರಸಿಂಹರಾಜ ಮೊಹಲ್ಲಾದ ಮನೆಗೆ ನುಗ್ಗಿ ಮುಕ್ತಾರ್ ಹಾಗೂ ಅವರ ಮಗ ಮೋಹಿನ್ ಅಹಮ್ಮದ್ ಅವರ ಮೇಲೆ ಭಾನುವಾರ ರಾತ್ರಿ ಹಲ್ಲೆ ನಡೆಸಲಾಗಿತ್ತು. ಮೋಹಿನ್ ಭಾವಮೈದುನ ಸಿರಾಜ್ ಮಾಡೆಲಿಂಗ್ ನಲ್ಲಿ ಇದ್ದಾರೆ. ಆತ ಮೋನಿಶಾಳಾನ್ನು ಪ್ರೀತಿಸುತ್ತಿದ್ದ. ಇಬ್ಬರೂ ಮದುವೆಯಾಗಬೇಕು ಎಂದಿದ್ದರು.[ಮದುವೆಗೆ ಅಡ್ಡಿಯಾದರೆಂದು ಜನ ಬಿಟ್ಟು ಹೊಡೆಸಿದಳೆ ಯುವತಿ?]

ಆದರೆ, ಇದಕ್ಕೆ ಮೋಹಿನ್ ವಿರೋಧ ಮಾಡಿದ್ದರು. ಇದೇ ವಿಚಾರವಾಗಿ ಮೋಹಿನ್ ಹಾಗೂ ಮೋನಿಶಾ ಮಧ್ಯೆ ಜಗಳವಾಗಿತ್ತು. ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಯುವತಿಯು ತನ್ನ ಸ್ನೇಹಿತರಿಗೆ ಸುಪಾರಿ ನೀಡಿ, ಹಲ್ಲೆ ಮಾಡಿಸಿದ್ದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications