ಕ್ಷಯ ಮುಕ್ತ ಜಿಲ್ಲೆ ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರು ಆಯ್ಕೆ
ಮೈಸೂರು, ಮೇ. 14:ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಭಾರತದ ಹತ್ತು ಜಿಲ್ಲೆಗಳನ್ನು ಕ್ಷಯ ಮುಕ್ತ ಜಿಲ್ಲೆ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಜಿಲ್ಲೆಯೂ ಕೂಡ ಆಯ್ಕೆಯಾಗಿದೆ.
2035ರೊಳಗ ದೇಶವನ್ನು ಕ್ಷಯ ಮುಕ್ತ ಮಾಡಲು ಕೇಂದ್ರ ಸರ್ಕಾರ ಹಲವು ಕ್ರಮಕೈಗೊಂಡಿದ್ದು, ಹತ್ತು ಜಿಲ್ಲೆಗಳು ಪ್ರಯೋಗಾಲಯ ಮಾದರಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಕ್ಷಯ ಪರೀಕ್ಷೆ ಮಾಡಲಾಗುವುದು. ರೋಗಿಗಳಿಂದ ಮಾದರಿ ಸಂಗ್ರಹಿಸಿ ನಿಖರ ಕಾರಣ ಪತ್ತೆ ಹಚ್ಚಲಾಗುವುದು. ಜೊತೆಗೆ ರೋಗಿಗಳಿಗೆ ಮಾಸಿಕ 500 ಸಹಾಯಧನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕ್ಷಯದ ಬಗ್ಗೆ ಜಾಗೃತಿ ಮೂಡಿಸಲು ಮೇ.18ರಿಂದ 20 ರವರೆಗೆ 3ನೇ ಆವೃತ್ತಿಯ ಕ್ರಿಕೆಟ್ ಟೂರ್ನಿ ನಡೆಯಲಿದ್ದು, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಈ ಟೂರ್ನಿ ನಡೆಯುವುದು. ನಗರದ ಜೆ.ಕೆ.ಮೈದಾನದಲ್ಲಿ 10 ಜಿಲ್ಲೆಗಳ 12 ತಂಡಗಳು ಭಾಗವಹಿಸಲಿವೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಹಾಸನ, ಉಡುಪಿ, ಶಿವಮೊಗ್ಗ, ದಾವಣಗೆರೆ, ಮಂಡ್ಯ, ಚಾಮರಾಜನಗರ ಜಿಲ್ಲಾ ತಂಡ, ಬಿಬಿಎಂಪಿ ಆರ್ಎನ್ಟಿಸಿಪಿ ಬೆಂಗಳೂರು ತಂಡ, ಎನ್ಯುಎಚ್ಎಂ ಬೆಂಗಳೂರು ತಂಡ, ಮೈಸೂರು ಆರ್ಎನ್ಟಿಸಿಪಿ ತಂಡ, ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ತಂಡ, ನಂಜನಗೂಡು ತಾಲ್ಲೂಕು ತಂಡ ಹಾಗೂ ಎಚ್.ಡಿ.ಕೋಟೆ ತಾಲ್ಲೂಕು ತಂಡ ಭಾಗವಹಿಸಲಿವೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕ್ಷಯ ರೋಗಕ್ಕೆ ಔಷಧಿ ದೊರೆಯುತ್ತಿದೆ. ಪಿಕೆಟಿಬಿ ಮತ್ತು ಕೆಆರ್ಎಸ್ ಆಸ್ಪತ್ರೆಯಲ್ಲಿ ಉಚಿವಾಗಿ ಕಫ ಪರೀಕ್ಷೆ ಮತ್ತು ಎಕ್ಸ್ ರೇ ಮಾಡಲಾಗುತ್ತದೆ. 2 ವಾರಕ್ಕಿಂತ ಹೆಚ್ಚು ಕೆಮ್ಮು ಇದ್ದವರು ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವ ಮೂಲಕ ಕ್ಷಯ ಮುಕ್ತ ಜಿಲ್ಲೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications