ಮೈಸೂರು: ವರದಕ್ಷಿಣೆಗಾಗಿ ಬಲಿಯಾಯ್ತು ಮುಗ್ಧ ಮಹಿಳೆಯ ಜೀವ
ಮೈಸೂರು, ಅಕ್ಟೋಬರ್ 6: ವರದಕ್ಷಿಣೆ ದಾಹ ಎನ್ನುವುದು ನಮ್ಮ ನಡುವೆ ತನ್ನ ಕಬಂಧ ಬಾಹುವನ್ನು ವ್ಯಾಪಕವಾಗಿ ಚಾಚಿಕೊಂಡಿದೆ ಎನ್ನುವುದಕ್ಕೆ ಈ ಘಟನೆ ಪ್ರತ್ಯಕ್ಷ ಉದಾಹರಣೆ. ಕೇವಲ ಕಾರು ತರುವಂತೆ ಒತ್ತಾಯಿಸದ್ದಷ್ಟೇ ಅಲ್ಲದೇ ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ಆಕೆಯ ಪತಿಯೇ ಕೊಲೆಗೈದ ಘಟನೆ ಮೈಸೂರು ಜಿಲ್ಲೆ ರಂಗಯ್ಯನ ಕೊಪ್ಪಲಿನಲ್ಲಿ ನಡೆದಿದೆ.
ಮೃತಳನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. 11 ತಿಂಗಳ ಹಿಂದಷ್ಟೇ ಹೆಚ್.ಡಿ.ಕೋಟೆ ತಾಲೂಕಿನ ತೇಜಸ್ವಿನಿಗೆ ಹುಣಸೂರು ತಾಲೂಕು ರಂಗಯ್ಯನ ಕೊಪ್ಪಲು ರಾಘವೇಂದ್ರ ಜೊತೆ ವಿವಾಹ ಮಾಡಲಾಗಿತ್ತು. ಮದುವೆ ಸಂದರ್ಭದಲ್ಲಿ ಸಾಕಷ್ಟು ಹಣ ನೀಡಿದ್ದರೂ ರಾಘವೇಂದ್ರ ನಿಗೆ ವರದಕ್ಷಿಣೆ ದಾಹ ತೀರಿರಲಿಲ್ಲ. ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ವರದಕ್ಷಿಣೆ ತರದಿರುವುದರಿಂದ ತೇಜಸ್ವಿನಿ ಮೇಲೆ ಹಲ್ಲೆ ನಡೆಸಿದ್ದಾನೆ.

ತೀವ್ರ ಗಾಯಗೊಂಡಿದ್ದ ತೇಜಸ್ವಿನಿಯನ್ನು ಮೈಸೂರಿನ ಬೃಂದಾವನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ತೇಜಸ್ವಿನಿ ಗುರುವಾರ ಸಾವನ್ನಪ್ಪಿದ್ದಾರೆ. ತೇಜಸ್ವಿನಿ ಪೋಷಕರು ಆಕೆಯ ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದು, ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಘವೇಂದ್ರ ವಿರುದ್ಧ ದೂರು ದಾಖಲಿಸಲಾಗಿದೆ.

ತೇಜಸ್ವಿನಿ ಪತಿ ರಾಘವೇಂದ್ರಗೆ ಹುಣಸೂರು ಎಂ ಎಲ್ ಎ ಶ್ರೀರಕ್ಷೆ ನೀಡಿದ್ದಾರೆ ಎಂದು ತೇಜಸ್ವಿನಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗ್ರಾ.ಪಂ.ಉಪಾಧ್ಯಕ್ಷ ನರಸಿಂಹೇಗೌಡ ತಮ್ಮ ಮಗಳನ್ನು 20 ಲಕ್ಷ ಖರ್ಚು ಮಾಡಿ ಹನ್ನೊಂದು ತಿಂಗಳ ಹಿಂದಷ್ಟೇ ವಿವಾಹ ಮಾಡಿಕೊಟ್ಟಿದ್ದರು. ವ್ಯವಸಾಯ ಮಾಡುವ ವ್ಯಕ್ತಿಯನ್ನೇ ಮದುವೆಯಾಗೋದಾಗಿ ಹೇಳಿ ತೇಜಸ್ವಿನಿ ರಾಘವೇಂದ್ರನ ಕೈ ಹಿಡಿದಿದ್ದರು. ನ್ಯಾಯ ಸಿಗುವವರೆಗೂ ಶವ ಕೊಂಡೊಯ್ಯಲ್ಲ ಎಂದು ತೇಜಸ್ವಿನಿ ಪೋಷಕರು ಪಟ್ಟು ಹಿಡಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications