ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್: ದಿನಾಂಕ ಹಾಗೂ ಇತರ ವಿವರ ಇಲ್ಲಿದೆ
ಮೈಸೂರು, ಡಿಸೆಂಬರ್ 26: ಮೈಸೂರಿನ ಜೆ.ಕೆ. ಮೈದಾನದಲ್ಲಿ ಡಿಸೆಂಬರ್ 29ರಂದು ಬೆಳಗ್ಗೆ 9ರಿಂದ ರಾತ್ರಿ 10ರವರೆಗೂ ಮೇಕ್ ಸೊಸೈಟಿ ಸ್ಮೈಲ್ ಫೌಂಡೇಶನ್ ವತಿಯಿಂದ 4ನೇ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್- 2024 ಆಯೋಜಿಸಲಾಗಿದೆ. ಇದರ ಜೊತೆಗೆ ಮೊದಲ ಬಾರಿಗೆ ಚಿತ್ರ ಸಂತೆಯನ್ನು ಕೂಡ ಆಯೋಜಿಸಲಾಗುತ್ತಿದೆ.
ಚಿತ್ರ ಸಂತೆಯ ಪ್ರಚಾರದ ಪೋಸ್ಟರ್ಅನ್ನು ಕನ್ನಡ ಚಿತ್ರರಂಗದ ನಟ ಮತ್ತು ರಂಗಭೂಮಿ ಕಲಾವಿದ ಡಾಲಿ ಧನಂಜಯ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಲ್ಲದೇ ಚಿತ್ರ ಸಂತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವುದು ಹರ್ಷ ತಂದಿದ್ದು, ಕಲಾಭಿಮಾನಿಗಳು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಮೈಸೂರು ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಆಯೋಜಕರಾದ ರಂಜಿತಾ ಸುಬ್ರಮಣ್ಯ ಮಾತನಾಡಿ, 'ಕಳೆದ 4 ವರ್ಷದಿಂದ ಸಿನಿ ಸಂತೆ ಆಯೋಜಿಸುತ್ತಾ ಬಂದಿದೆ. ನೀವು ನಿಮ್ಮ ಪ್ರಾಜೆಕ್ಟ್ ಗಾಗಿ ಉತ್ಸಾಹದಿಂದಿರುವ ಉದಯೋನ್ಮುಖ ಚಲನಚಿತ್ರ ನಿರ್ಮಾಪಕರಾ? ಮೈಸೂರು ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವ ಮತ್ತು ಸಿನಿ ಸಂತೆ ಫಿಲ್ಮ್ ಕಾರ್ನಿವಲ್ ನಲ್ಲಿ ಪ್ರೇಕ್ಷಕರೊಂದಿಗೆ ನೇರವಾಗಿ ಸಂಪರ್ಕಿಸಿ ನಿಮ್ಮ ಮುದ್ರೆಯನ್ನು ಮೂಡಿಸುವ ಅವಕಾಶ ಇಲ್ಲಿದೆ' ಎಂದು ಹೇಳಿದರು.
'ಈ ವಿಶಿಷ್ಟ ವೇದಿಕೆ, ನಿಮ್ಮ ಕ್ರಿಯಾಶೀಲತೆಯನ್ನು ಪ್ರದರ್ಶಿಸಲು ಮತ್ತು ಚಲನಚಿತ್ರ ಪ್ರೇಮಿಗಳ, ಪ್ರಭಾವಶಾಲಿಗಳ ಮತ್ತು ಉದ್ಯಮ ವೃತ್ತಿಪರರ ಮುಂದೆ ನಿಮ್ಮ ಪ್ರಾಜೆಕ್ಟ್ ಅನ್ನು ಪ್ರಚಾರ ಮಾಡಲು ಸಹಾಯ ಮಾಡುತ್ತದೆ. ಈ ವರ್ಷ ವಿಶೇಷವಾಗಿ ಸಾರ್ವಜನಿಕರಿಗೆ ಗಾಯನ ಸ್ಪರ್ಧೆ, ಮಕ್ಕಳಿಗೆ ಅಲಂಕಾರಿಕ ಹುಡುಗಿ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸುತ್ತಿದ್ದು ಪ್ರತಿ ವಿಭಾಗದ ಮೂರು ಸ್ಪರ್ಧೆಯ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಹಾಗೂ ಸಿನಿ ಸಂತೆಯಲ್ಲಿ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಹೆಚ್ಚಿನ ಮಾಹಿತಿಗಾಗಿ 6360959871/6364632425 ನಂಬರಿಗೆ ಸಂಪರ್ಕಿಸಬಹುದು' ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಸಂಪರ್ಕಾಧಿಕಾರಿ ಶಂಕರ್ ಎಸ್ಎನ್, ಉದ್ಯಮಿ ಗಗನ್ ದೀಪ್, ಸಿನಿ ಸಂತೆ ನಿರ್ದೇಶಕಿ ಮತ್ತು ಸಂಸ್ಥಾಪಕಿ ಸಂಧ್ಯಾ ರಾಣಿ, ಐಶ್ವರ್ಯ ಜಿ ಪ್ರಸಾದ್, ಹರ್ಷ, ರೂಪ ಹಾಗೂ ಇನ್ನಿತರರು ಹಾಜರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications