ಮೈಸೂರು ಕೊರೊನಾ ಫ್ರೀ: ಚಾಮುಂಡಿ ದೇವಿಗೆ ನಮಿಸಿದ ಎಸ್.ಟಿ.ಸೋಮಶೇಖರ್
ಮೈಸೂರು, ಮೇ 16: ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಇಡೀ ಜಗತ್ತಿಗೆ ಮಾದರಿಯಾಗಿದೆ. ಮೈಸೂರಿನ ಎಲ್ಲಾ 90 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಮೈಸೂರು ಇದೀಗ 'ಕೊರೊನಾ ಫ್ರೀ' ಆಗಿದೆ.
ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಾಗ ಮೈಸೂರಿಗೆ ಆಗಮಿಸಿ, ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ್ದ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರನ್ನು ಕೊರೊನಾ ಸಂಕಷ್ಟದಿಂದ ಪಾರು ಮಾಡುವಂತೆ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದರು. ಇದೀಗ ಮೈಸೂರು ಕೊರೊನಾ ಮುಕ್ತವಾದ ಹಿನ್ನಲೆಯಲ್ಲಿ ಇವತ್ತು ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ಎಸ್.ಟಿ.ಸೋಮಶೇಖರ್ ದೇವಿಗೆ ನಮನ ಸಲ್ಲಿಸಿದರು.

ಆದಷ್ಟು ಬೇಗ ರಾಜ್ಯ, ದೇಶ ಮತ್ತು ವಿಶ್ವದ ಸಂಕಷ್ಟವನ್ನು ನಿವಾರಿಸುವಂತೆ ಸಚಿವ ಎಸ್.ಟಿ.ಸೋಮಶೇಖರ್ ಇಂದು ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ರಾಮ್ ದಾಸ್, ಡಿಸಿಪಿ ಪ್ರಕಾಶ್ಗೌಡ, ಡಿಹೆಚ್ಓ ವೆಂಕಟೇಶ್ ಸೇರಿ ಹಲವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಮೈಸೂರಿನಂತೆ ರಾಜ್ಯವನ್ನೂ ಕೊರೊನಾ ಮುಕ್ತ ಮಾಡುವಂತೆ ಬೇಡಿಕೊಂಡರು.

ಲಾಕ್ ಡೌನ್ ಇರುವ ಕಾರಣ ಎಲ್ಲರೂ, ದೇವಸ್ಥಾನದ ಹೊರಗೆ ನಿಂತು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
''90ಕ್ಕೆ 90 ಪ್ರಕರಣವನ್ನ ಮೈಸೂರು ಗೆದ್ದಿದೆ. ಜನ ಸದ್ಯ ನಿರಾಳ ಆಗಿದ್ದಾರೆ. ಲಾಕ್ ಡೌನ್ ನಿಯಮದಿಂದ ನಾವೂ ಕೂಡ ದೇವಾಲಯದ ಹೊರಗೆ ದರ್ಶನ ಮಾಡಬೇಕಾಗಿದೆ. ಜನಪ್ರತಿನಿಧಿಗಳಾದ ನಾವು ಆದೇಶಗಳನ್ನು ಪಾಲಿಸಬೇಕು. ಮುಂದಿನ ದಿನಗಳಲ್ಲಿ ದೇವಸ್ಥಾನದ ಪ್ರವೇಶದ ಬಗ್ಗೆ ತೀರ್ಮಾನ ಮಾಡಲಾಗುವುದು'' ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications