ನಾಲೆಗಳಿಗೆ ನೀರು, 4ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪ್ರತಿಭಟನೆ
ಮೈಸೂರು, ಜುಲೈ 27 : ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕೆಆರ್ ನಗರ ಶಾಸಕ ಸಾ.ರಾ ಮಹೇಶ್ ನೇತೃತ್ವದಲ್ಲಿ ಮೈಸೂರಿನ ಕಾಡಾಕಚೇರಿ ಆವರಣದಲ್ಲಿ ನಡೆಯುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸಿ ಹಾರಂಗಿ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಶಾಸಕ ಸಾ.ರಾ ಮಹೇಶ್ ಅವರ ನೇತೃತ್ವದಲ್ಲಿ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಚಿತ್ರನಟ ಸಾಧುಕೋಕಿಲ ಬುಧವಾರ ರಾತ್ರಿ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಶಾಸಕರ ಹೋರಾಟಕ್ಕೆ ಕೆ.ಆರ್.ನಗರ ಪತ್ರಕರ್ತರೂ ಬೆಂಬಲ ನೀಡಿದ್ದು, ಹೋರಾಟದಲ್ಲಿ ಪತ್ರಕರ್ತರು ಪಾಲ್ಗೊಂಡಿದ್ದಾರೆ.
ಜಿಲ್ಲಾಧಿಕಾರಿಗಳಿಂದ ಮನವೊಲಿಕೆಗೆ ಯತ್ನ : ಜಿಲ್ಲಾಧಿಕಾರಿ ಡಿ.ರಂದೀಪ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಶಾಸಕ ಸಾ.ರಾ ಮಹೇಶ್ ಜೊತೆ ಮಾತುಕತೆ ನಡೆಸಿದರಲ್ಲದೇ, ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಕೆಗೆ ಮುಂದಾದರು.
ಆದರೆ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಅನುವಾಗುವಂತೆ ಮೊದಲು ನಾಲೆಗಳಿಗೆ ನೀರು ಹರಿಸುವಂತೆ ಶಾಸಕ ಸಾ.ರಾ ಮಹೇಶ್ ಆಗ್ರಹಿಸಿದರು.
ಶಾಸಕ ಸಾ.ರಾ ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ಡಿ. ರಂದೀಪ್ ನಡುವಿನ ಮಾತುಕತೆ ವಿಫಲಗೊಂಡಿದ್ದು, ಕಾಡಾ ಕಚೇರಿ ಆವರಣದಲ್ಲಿ ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ಮುಂದುವರಿದಿದೆ.
ನಾಳೆ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ನಿರ್ಧಾರ ಕೈಗೊಳ್ಳುವ ಬಗ್ಗೆ ಡಿ. ರಂದೀಪ್ ಭರವಸೆ ನೀಡಿದರು.
ನಾಳೆ ರಾಜ್ಯ ಸರ್ಕಾರ ಕೈಗೊಳ್ಳುವ ನಿಲುವಿನ ನಂತರ ಮುಂದಿನ ಹಂತದ ಹೋರಾಟ ರೂಪಿಸಲು ಶಾಸಕ ಸಾ.ರಾ ಮಹೇಶ್ ನಿರ್ಧರಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications