ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್
ಮೈಸೂರು, ನವೆಂಬರ್ 14:- ಪ್ರತಿ ಬಾರಿಯೂ ಮಕ್ಕಳ ಕಾರ್ಯಕ್ರಮದಲ್ಲಿಯೇ ಹೆಚ್ಚು ತೊಡಗಿಸಿಕೊಳ್ಳುವ ಮೈಸೂರು ರಾಜ ವಂಶಸ್ಥ ಯದುವೀರ ಒಡೆಯರ್ ಇಂದು ಸಹ ನಗುಮೊಗದಿಂದಲೇ ಇದ್ದರು. ಕಾರಣ ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ಮಕ್ಕಳ ಜೊತೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂವಾದ ನಡೆಸಿದರು.
ಈಗಾಗಲೇ ಕಲಿಸು ಫೌಂಡೇಷನ್ನ ರಾಯಭಾರಿಯಾಗಿರುವ ಇವರು ಮಕ್ಕಳ ದಿನಾಚರಣೆಯ ಅಂಗವಾಗಿ ಅರಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಯದುವೀರ್ ಮಕ್ಕಳೊಡನೆ ಮಾತುಕತೆ ನಡೆಸಿದರು. ಸರ್ಕಾರಿ ಶಾಲೆಯ ಒಟ್ಟು 34 ಮಕ್ಕಳ ಜೊತೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ರಾಜವಂಶಸ್ಥರ ಇತಿಹಾಸ, ಅರಮನೆಯ ಇತಿಹಾಸ,ವಿಸ್ತೀರ್ಣ, ವಿಶೇಷತೆಗಳ ಬಗೆ ಹಲವು ಪ್ರಶ್ನೆಗಳನ್ನು ಪುಟಾಣಿಗಳು ಕೇಳಿದರು. ಯದುವೀರ್ ಮಕ್ಕಳಿಗೆ ವಿಸ್ತಾರವಾಗಿ ಉತ್ತರ ನೀಡಿದರು. ಬಳಿಕ ಮಾತನಾಡಿದ ಅವರು ಮಕ್ಕಳ ಜೊತೆ ಸಂವಾದ ಮಾಡಿದ್ದು ತುಂಬಾ ಖುಷಿ ತಂದಿದೆ. ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ನನ್ನ ಶಾಲಾ ದಿನಗಳು ನೆನಪಿಗೆ ಬರುತ್ತಿದೆ. ನಾನು ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ತುಂಬಾ ಎಂಜಾಯ್ ಮಾಡುತ್ತಿದ್ದೆ. ಮಕ್ಕಳ ಜೊತೆ ಸಂವಾದ ನಡೆಸಿದ್ದು ಖುಷಿ ನೀಡಿದೆ ಎಂದರು.
ಉಪ್ಪಿಯ ಪ್ರಜಾಕೀಯ ಪಕ್ಷಕ್ಕಿದೆ ನನ್ನ ಬೆಂಬಲ :
ಇತ್ತೀಚೆಗಷ್ಟೆ ನಟ ರಿಯಲ್ ಸ್ಟಾರ್ ಉಪೇಂದ್ರ ಸ್ಥಾಪಿಸಿದ ಪ್ರಜಾಕೀಯ ಪಕ್ಷಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಬೆಂಬಲ ಸೂಚಿಸಿದ್ದಾರೆ. ನಟ ಉಪೇಂದ್ರ ಅವರು ಹೊಸ ಆಲೋಚನೆ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಅವರು ಸ್ವತಂತ್ರವಾಗಿ ಮಾಡುತ್ತಿರುವುದು ಒಳ್ಳೆಯದು ಎಂದು ರಾಜವಂಶಸ್ಥ ಯದುವೀರ್ ತಿಳಿಸಿದ್ದಾರೆ.
ಕರ್ನಾಟಕಕ್ಕೆ ಹೊಸ ಆಲೋಚನೆ ಬೇಕಿತ್ತು. ಈ ಹೊಸ ಆಲೋಚನೆ ನಟ ಉಪೇಂದ್ರ ಅವರು ಮಾಡಿದ್ದಾರೆ. ಪ್ರಜಾಕೀಯ ಪಕ್ಷ ಕಟ್ಟಿರುವುದರ ಈ ಮೂಲಕ ಒಳ್ಳೆಯದನ್ನು ಮಾಡಲಿ ಎಂದು ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications