ಮನಸಿನ ಮಾತು ಹಂಚಿಕೊಳ್ಳಲು ಯದುವೀರ್ ಹೊಸ ಬ್ಲಾಗ್!
ಮೈಸೂರು, ನವೆಂಬರ್ 15 : ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಬ್ಲಾಗ್ ಮೂಲಕ ಮನಸಿನ ಮಾತನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ವೆಬ್ ಸೈಟ್ ನಲ್ಲಿ ಭೇರುಂಡ ಹೆಸರಿನಲ್ಲಿ ಮೊದಲ ಸುದ್ದಿಪತ್ರವನ್ನು ಯದುವೀರ್ ಪ್ರಕಟಿಸಿದ್ದಾರೆ. ದಸರಾ ವಿಶೇಷಾಂಕದ ಸುದ್ದಿಪತ್ರವನ್ನು ಉದ್ಘಾಟನೆಯ ಸುದ್ದಿ ಪತ್ರ (ಇನಾಗರಲ್ ನ್ಯೂಸ್ ಲೇಟರ್) ಎಂಬ ಹೆಸರಿನಲ್ಲಿ ಮೊದಲ ಪತ್ರ ಬರೆದು ಪ್ರಕಟಿಸಿದ್ದಾರೆ.
ತಮ್ಮ ಮನಸಿನ ಮಾತನ್ನು ಹಂಚಿಕೊಂಡು, ಜನರ ಜೊತೆ ಬೆರೆಯಲು ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ 'ಭೇರುಂಡ' ಎಂಬ ಹೆಸರಿನ ಬ್ಲಾಗ್ ಆರಂಭಿಸಿದ್ದಾರೆ.

ಇಷ್ಟು ದಿನ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಫೋಟೋಗಳನ್ನು ಅಪ್ಲೋಡ್ ಮಾಡಿ ಜನರ ಜೊತೆ ಸಂಪರ್ಕದಲ್ಲಿದ್ದ ಮಹಾರಾಜರು ಈಗ ತಮ್ಮ ಬರವಣಿಗೆಯ ಮೂಲಕ ಜನರ ಜೊತೆ ಬೆರೆಯಲು ಮುಂದಾಗಿದ್ದು, ವೆಬ್ ಸೈಟ್ನಲ್ಲಿ ಬ್ಲಾಗ್ ಆರಂಭಿಸಿ ಇವತ್ತು ಮೊದಲ ಸುದ್ದಿಪತ್ರವನ್ನು ಪ್ರಕಟಿಸಿದ್ದಾರೆ.
ದಸರಾ ವಿಶೇಷಾಂಕದ ಸುದ್ದಿಪತ್ರ ಬಿಡುಗಡೆ ಮಾಡಿದ ಮಹಾರಾಜರು, ಇದು ಉದ್ಘಾಟನೆಯ ಸುದ್ದಿ ಪತ್ರ ಎಂದು ಬ್ಲಾಗ್ ನಲ್ಲಿ ಹೇಳಿದ್ದಾರೆ. ಉದ್ಘಾಟನಾ ಪತ್ರದ ಹೆಸರಿನಲ್ಲಿ ಮೊದಲ ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರ ನಿಮಗೆಲ್ಲ ನಮ್ಮ ಪ್ರಾಥಮಿಕ ಮಾಹಿತಿ ನೀಡಲಿದೆ. ರಾಜಮನೆತನದ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ತಿಳಿಸಲಿದೆ. ಈ ಬ್ಲಾಗ್ ಮೂಲಕ ನಮ್ಮ ಕಾರ್ಯಕ್ರಮಗಳು ನಿಮಗೆ ತಿಳಿಯಲಿದೆ ಎಂದು ಬರೆದಿದ್ದಾರೆ.

ರಾಜಮನೆತನದ ಕಾರ್ಯಕ್ರಮಗಳಲ್ಲಿ ಈ ಸೇವೆಯು ಒಂದು ಭಾಗ. ನಾವು ನೀವು ಪರಸ್ಪರ ಅರ್ಥ ಮಾಡಿಕೊಳ್ಳಲು ಈ ಪತ್ರ ನಾಂದಿಯಾಗಲಿದೆ. ನನಗೆ ಬರವಣಿಗೆ ಇಷ್ಟವಾಗಿದ್ದರಿಂದ ನನ್ನ ಆಲೋಚನೆಗಳನ್ನು ಈ ಮೂಲಕ ಹಂಚಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications