Get Updates
Get notified of breaking news, exclusive insights, and must-see stories!

Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ಗೆ ಶಾಕ್ ಕೊಟ್ಟ ಒಕ್ಕಲಿಗರು!

ಮೈಸೂರು, ಏಪ್ರಿಲ್. 19: ಸದ್ಯ ಕರ್ನಾಟಕದ ಹೈ ಪ್ರೊಫೈಲ್ ಕ್ಷೇತ್ರವಾಗಿರುವ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಯಾರ ಬೆಂಬಲಕ್ಕೆ ನಿಲ್ಲುತ್ತಾರೊ ಅವರಿಗೆ ಗೆಲುವು ಖಚಿತ ಎನ್ನುವಂತಿದೆ. ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎಂ.ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದೆ.

ತಮ್ಮ ತವರು ಜಿಲ್ಲೆಯಾದ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂಬ ಹಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಇದೇ ಕಾರಣಕ್ಕೆ ವಾರಗಟ್ಟಲೆ ಅಲ್ಲೇ ಇದ್ದು ಅಭ್ಯರ್ಥಿ ಪರ ಮತಬೇಟೆಗೆ ಇಳಿದಿದ್ದಾರೆ. ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದು ಬಿಜೆಪಿಗೆ ತಲೆ ನೋವಾಗಿದೆ. ಇದರ ನಡುವೆ ಒಕ್ಕಲಿಗ ಸಮುದಾಯ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಅವರಿಗೆ ದೊಡ್ಡ ಶಾಕ್ ನೀಡಿದೆ.

Mysuru-Kodagu Lok Sabha Big shock for Yaduveer Wadiyar Vokkaligas to support Congress candidate

ಒಕ್ಕಲಿಗರಿಂದ ಯದುವೀರ್ ಒಡೆಯರ್‌ಗೆ ಶಾಕ್!

ಮೈಸೂರು- ಕೊಡಗು ಹಾಲಿ ಸಂಸದ, ಒಕ್ಕಲಿಗ ಸಮುದಾಯದ ನಾಯಕ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಈಗಾಗಲೇ ಮೈಸೂರಿನಲ್ಲಿ ಮತ್ತು ಒಕ್ಕಲಿಗ ಸಮುದಾಯದಲ್ಲಿ ಅಸಮಾಧಾನ ಇತ್ತು ಇದನ್ನು ಕಾಂಗ್ರೆಸ್ ತನ್ನ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದರ ಪರಿಣಾಮವಾಗಿಯೇ ಒಕ್ಕಲಿಗ ಸಮುದಾಯ ಪಕ್ಷದ ವಿರುದ್ಧ ತಿರುಗಿಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರ ಬದಲಿಗೆ ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಒಕ್ಕಗಲೊಗ ಅಭ್ಯರ್ಥಿಯನ್ನು ಕಡೆಗಣಿಸಿದ ಬಿಜೆಪಿಯ ವಿರುದ್ಧ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಒಕ್ಕಲಿಗ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿ ಎಂ ಲಕ್ಷ್ಮಣ್ ಅವರನ್ನು ಕಣಕ್ಕೆ ಇಳಿಸಿ ಆಟವಾಡುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ ಒಕ್ಕಲಿಗರು!

ಮೈಸೂರು ಒಕ್ಕಲಿಗ ಸಂಘದ ಅಧ್ಯಕ್ಷ ಮರಿ ಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರನ್ನು ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ. 'ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಒಕ್ಕಲಿಗ ಸಮುದಾಯದಿಂದ ಬಂದಿದ್ದರಿಂದ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಒಕ್ಕಲಿಗರನ್ನು ವ್ಯವಸ್ಥಿತವಾಗಿ ಬದಿಗೊತ್ತಲಾಗಿದೆ ಮತ್ತು ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.

Mysuru-Kodagu Lok Sabha Big shock for Yaduveer Wadiyar Vokkaligas to support Congress candidate

ಇನ್ನು, "ಎಂ ಲಕ್ಷ್ಮಣ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ನಾವು ಅವರನ್ನು ಬೆಂಬಲಿಸುತ್ತಿಲ್ಲ. ಲಕ್ಷ್ಮಣ್ ಅವರು ಒಕ್ಕಲಿಗರು, ಅವರು ಒಕ್ಕಲಿಗರ ಸಂಘದಿಂದಲು ಸ್ಪರ್ಧೆ ಮಾಡಿದ್ದಾರೆ. ಹೀಗಾಗಿ ಪಕ್ಷಾತೀತವಾಗಿ ಒಕ್ಕಲಿಗ ಅಭ್ಯರ್ಥಿಗೆ ಮತ ನೀಡುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.

ಲಕ್ಷ್ಮಣ್ ಒಕ್ಕಲಿಗರಲ್ಲ: ವಿವಾದ

ಇತ್ತೀಚೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲಕ್ಷ್ಮಣ್ ಒಕ್ಕಲಿಗ ಸಮುದಾಯದವರು ಎಂದು ಒತ್ತಿ ಹೇಳಿದ್ದರು. ಇದಕ್ಕೆ ಬಿಜೆಪಿ ಅವರು ಒಕ್ಕಲಿಗರಲ್ಲ ಎಂದು ಆರೋಪಿಸಿತ್ತು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಸಿದ್ದರಾಮಯ್ಯ, ಲಕ್ಷ್ಮಣ್ ಒಕ್ಕಲಿಗರಾಗಿ ಹುಟ್ಟಿ ಕುವೆಂಪು ಆಶಯ ಪಾಲಿಸುತ್ತಿದ್ದಾರೆ ಎಂದಿದ್ದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸುಮಾರು 15 ಲಕ್ಷ ಮತದಾರರು ಇದ್ದಾರೆ. ಅವರಲ್ಲಿ 4 ಲಕ್ಷಕ್ಕೂ ಹೆಚ್ಚು ಒಕ್ಕಲಿಗರು ಬಳಿಕ ಲಿಂಗಾಯತರು, ದಲಿತರು ಮತ್ತು ಒಬಿಸಿಗಳು ಇದದ್ದಾರೆ. ಅಲ್ಲದೆ, 1.5 ಲಕ್ಷ ಮುಸ್ಲಿಂ ಸಮುದಾಯದ ಮತಗಳು ಮತ್ತು 1 ಲಕ್ಷ ಬ್ರಾಹ್ಮಣ ಮತದಾರರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+