ಮೈಸೂರು ಪೊಲೀಸರು ನಡೆಸಿದ ಆಪರೇಷನ್ ಸಕ್ಸಸ್: ಕುಖ್ಯಾತ ಮನೆಗಳ್ಳರ ಬಂಧನ
ಮೈಸೂರು, ಫೆಬ್ರವರಿ 25: ಮನೆಗಳ್ಳರ ಪತ್ತೆಗಾಗಿ ಸಾಂಸ್ಕೃತಿಕ ನಗರಿ ಮೈಸೂರು ಪೊಲೀಸರು ನಡೆಸಿದ ಆಪರೇಷನ್ ಸಕ್ಸಸ್ ಆಗಿದೆ. ಖಾಕಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಕುಖ್ಯಾತ ಚೋರರು ಬಂಧಿತರಾಗಿದ್ದಾರೆ.
ತಡರಾತ್ರಿ ವೇಳೆ ಮನೆಗೆ ಕನ್ನಹಾಕುತ್ತಿದ್ದ ಖತರ್ನಾಕ್ಗಳು ಕಂಬಿ ಹಿಂದೆ ಬಿದ್ದಿದ್ದಾರೆ. ಮೈಸೂರಿನ ಕುವೆಂಪುನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಕುಖ್ಯಾತ ಮನೆಗಳ್ಳರನ್ನ ಬಂಧಿಸಿ ಚಿನ್ನಾಭರಣ, ಕಾರು ಮತ್ತು ರಿವಾಲ್ವಾರ್ ವಶಕ್ಕೆ ಪಡೆದಿದ್ದಾರೆ.
ದಿಲೀಪ್ ಕುಮಾರ್ (38), ಮಂಜ (35), ರಾಜೇಂದ್ರ (29) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 21,47,500 ಮೌಲ್ಯದ 391 ಗ್ರಾಂ ತೂಕದ ಚಿನ್ನಾಭರಣ, ಒಂದು ಕಾರು ಮತ್ತು ವಿದೇಶಿ ನಿರ್ಮಿತ ರಿವಾಲ್ವರ್ ಜೊತೆ 6 ಸಜೀವ ಗುಂಡುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಮ್ಮ ಬಳಿ ಇದ್ದ ರಿವಾಲ್ವರ್ ಮಾರಾಟ ಮಾಡುವ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಆರೋಪಿಗಳ ವಿಚಾರಣೆ ಬಳಿಕ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಮೈಸೂರಿನ ಕುವೆಂಪು ನಗರ, ವಿಜಯನಗರ, ಅಶೋಕಪುರಂ, ಬೆಂಗಳೂರಿನ ಬಾಣಸವಾಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಪೊಲೀಸರು ಖತರ್ನಾಕ್ ಕಳ್ಳರ ಬೇಟೆಗಾಗಿ ಬಲೆ ಬೀಸಿದರು. ನಿರಂತರವಾಗಿ ಬ್ಲೂ ಪ್ರಿಂಟ್ ಸಿದ್ಧಪಡಿಸಿ ಚೋರರ ಬಂಧನಕ್ಕೆ ಸಿದ್ಧತೆ ನಡೆಸಿದ್ದರು. ಇದೀಗ ಪೊಲೀಸರು ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮನೆಗಳ್ಳರು ಪೊಲೀಸ್ ಖೆಡ್ಡಾಗೆ ಬಿದ್ದಿದ್ದಾರೆ.
ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಮತ್ತಷ್ಟು ಸತ್ಯ ಹೊರಬೀಳುವ ಸಾಧ್ಯತೆ ಇದೆ. ಕಾರ್ಯಾಚರಣೆಯಲ್ಲಿ ಡಿಸಿಪಿ ಗೀತಾ ಪ್ರಸನ್ನ ಹಾಗೂ ಕೃಷ್ಣರಾಜ ವಿಭಾಗ ಎಸಿಪಿ ಎಂ. ಎಸ್.ಪೂರ್ಣಚಂದ್ರ ತೇಜಸ್ವಿ ಮಾರ್ಗದರ್ಶನದಲ್ಲಿ ಪತ್ತೆ ಕಾರ್ಯ ನಡೆದಿದ್ದು, ಕಾರ್ಯಾಚರಣೆಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಜಿ.ಸಿ.ರಾಜು, ಪಿಎಸ್ಐ ಮಹಾವೀರ್ ಬಿಳಗಿ, ಎಎಸ್ಐ ದೇವಯ್ಯ ಸೇರಿದಂತೆ ಠಾಣಾ ಸಿಬ್ಬಂದಿ ಭಾಗಿಯಾಗಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications