ವಿಡಿಯೋ; ಕ್ಯಾನ್ಸರ್ ಪೀಡಿತರಿಗಾಗಿ ಕೂದಲು ದಾನ ಮಾಡಿದ ಮೈಸೂರಿನ ಯುವತಿ
ಮೈಸೂರು, ಡಿಸೆಂಬರ್ 22; ಹೆಣ್ಣಿಗೆ ಕೂದಲು ಅಂದ ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನೂ ಇವತ್ತಿನ ಫ್ಯಾಷನ್ ಯುಗದಲ್ಲಿ ಹೇರ್ ಸ್ಟ್ರೈಟ್ನಿಂಗ್, ಹೇರ್ ಕಲ್ಲರಿಂಗ್, ಕರ್ಲಿ ಹೇರ್ಸ್ ಹೀಗೆ ವಿವಿಧ ವಿನ್ಯಾಸದ ಹೇರ್ ಸ್ಟೈಲ್ ಮಾಡಿಕೊಳ್ಳುವ ಹಾಗೂ ಕೂದಲಿನ ಆರೈಕೆ ಮಾಡುವ ಹುಡುಗಿಯರನ್ನು ನೋಡಿದ್ದೇವೆ. ಆದರೆ ಮೈಸೂರಿನ ಯುವತಿಯೊಬ್ಬಳು ದಟ್ಟವಾಗಿ ಬೆಳೆದಿದ್ದ ಕೂದಲನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾಳೆ.
ಹೆಣ್ಣುಮಕ್ಕಳಿಗೆ ಕೇಶರಾಶಿಯೇ ಸೌಂದರ್ಯ ಎಂದು ಗೊತ್ತಿದ್ದರೂ, ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಉದ್ದನೆ ಕೂದಲನ್ನು ದಾನ ಮಾಡಿರುವ ಮೈಸೂರಿನ ನಿವಾಸಿ ಸ್ವರ್ಣ, ತನ್ನ ಕೆಲಸದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾಳೆ.
ಈಗಷ್ಟೇ ಸ್ನಾತಕೋತ್ತರ ಪದವಿ ಪೂರೈಸಿರುವ ಸ್ವರ್ಣ, ಮೈಸೂರಿನ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಸದಾಕಾಲ ನೊಂದವರಿಗೆ ಕೈಲಾದಷ್ಟು ಸಹಾಯ ಮಾಡಬೇಕೆಂಬ ಬಯಕೆ ಹೊಂದಿರುವ ಈಕೆ, ಚಿಕ್ಕ ವಯಸ್ಸಿನಲ್ಲೇ ಕ್ಯಾನ್ಸರ್ ಪೀಡಿತರಿಗೆ ತನ್ನ ಕೂದಲನ್ನು ದಾನ ಮಾಡಿ ಆದರ್ಶ ಮೆರೆದಿದ್ದಾರೆ. ಇನ್ನೂ ಮಗಳ ಈ ಸಮಾಜಮುಖಿ ಕೆಲಸಕ್ಕೆ ಸ್ವರ್ಣ ಪೋಷಕರು ಸಹ ಸಮ್ಮತಿ ಕೊಟ್ಟಿದ್ದಾರೆ.

ಹೀಗಾಗಿ ಕಳೆದೊಂದು ವರ್ಷದಿಂದ ಕೂದಲಿನ ಪೋಷಣೆ ಮಾಡಿ ಉದ್ದನೆಯ ಕೂದಲು ಬೆಳೆಸಿದ್ದ ಸ್ವರ್ಣ, ಬೆಂಗಳೂರಿನ ಜಯನಗರದಲ್ಲಿರುವ ಬೆಂಗಳೂರು ಹೇರ್ ಡೊನೇಷನ್ ಸೆಂಟರ್ ಎಂಬ ಎನ್ಜಿಓ ಸಂಸ್ಥೆಗೆ ಕೂದಲನ್ನು ದಾನ ಮಾಡಿದ್ದಾರೆ. ಈ ಸಂಸ್ಥೆ ಕೂದಲನ್ನು ಸಂಗ್ರಹಿಸಿ ವಿಗ್ ತಯಾರಿಸಿ ಕ್ಯಾನ್ಸರ್ ಪೀಡಿತರಿಗೆ ಉಚಿತವಾಗಿ ನೀಡುತ್ತಿದೆ.
ಕೂದಲು ದಾನ ಮಾಡಲು ಕಾರಣ?; ಯುವತಿ ಸ್ವರ್ಣ ಕೂದಲು ದಾನ ಮಾಡಲು ಆಕೆಯ ಪಕ್ಕದ ಮನೆಯಲ್ಲಿರುವ ಕ್ಯಾನ್ಸರ್ ಪೀಡಿತರೊಬ್ಬರು ಸ್ಪೂರ್ತಿಯಾಗಿದ್ದಾರೆ. ತನ್ನ ನೆರೆ ಮನೆಯಲ್ಲಿರುವ ಕ್ಯಾನ್ಸರ್ ಪೀಡಿತರನ್ನು ಕಂಡ ಸ್ವರ್ಣ, ಕ್ಯಾನ್ಸರ್ ಪೀಡಿತರಿಗಾಗಿ ಕೂದಲು ದಾನ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ನಮಗೆ ಕೂದಲು ಬೆಳೆಯುವ ಸಾಧ್ಯತೆ ಇರುವಾಗ ಸಂಪೂರ್ಣವಾಗಿ ಕೂದಲನ್ನು ಡೊನೇಟ್ ಮಾಡಿದ್ದಾರೆ. ಅಲ್ಲದೇ ಪ್ರತಿಯೊಬ್ಬರು ಯಾವುದೇ ಭಯವಿಲ್ಲದೆ ಕೂದಲನ್ನು ದಾನ ಮಾಡುವ ಮೂಲಕ ಕ್ಯಾನ್ಸರ್ ಪೀಡಿತರ ನೋವನ್ನು ದೂರಾವಾಗಿಸಿ ಎಂದು ಮನವಿ ಮಾಡಿದ್ದಾರೆ.
Recommended Video
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications