ಮೈಸೂರಿನ ಮನಕಲುಕುವ ಘಟನೆ: ಜೀವವಿತ್ತ ತಾಯಿಯಿಂದ ಮರುಜೀವ ಪಡೆದ ಮಗ
ಮೈಸೂರು, ಫೆಬ್ರವರಿ 17: ಜೀವ ಕೊಟ್ಟ ತಾಯಿಯೇ, ಮೃತ್ಯುವಿನ ಸನಿಹದಲ್ಲಿರುವ ಮಗನಿಗೆ ಮರುಜೀವ ಕೊಟ್ಟಿರುವ ಮನಕಲುಕುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಖಾಯಿಲೆಯಿಂದ ವರ್ಷಗಳಿಂದ ನರಳುತ್ತಿರುವ ಮಗನಿಗೆ ಮರುಜೀವ ನೀಡಲು ತನ್ನ ಅಂಗವನ್ನೇ ದಾನ ಮಾಡಲು ತಾಯಿ ತಯಾರಾಗಿ ನಿಂತಿದ್ದಾಳೆ.
ಮೈಸೂರಿನ ದಾಸಪ್ಪನಕೊಪ್ಪಲಿನಲ್ಲಿ 38 ವರ್ಷದ ವಿನಯ್ ಎಂಬಾತ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೂರು ವರ್ಷದಿಂದ ಪ್ರತಿನಿತ್ಯ ನರಕ ಅನುಭವಿಸುತ್ತಿದ್ದಾರೆ. ಮಗನ ದಯನೀಯ ಸ್ಥಿತಿ ನೋಡಲಾಗದೆ ತಾಯಿ ಲಕ್ಷ್ಮಮ್ಮ ತನ್ನ ಕಿಡ್ನಿಯನ್ನು ಮಗನಿಗೆ ನೀಡಲು ಸಿದ್ಧಳಾಗಿದ್ದಾಳೆ.

ತೀವ್ರ ಬಡತನದಲ್ಲಿ ಬದುಕು ಸವೆಸುತ್ತಿರುವ ಲಕ್ಷ್ಮಮ್ಮ ಮತ್ತು ಕುಟುಂಬಕ್ಕೆ ಖಾಯಿಲೆ ಎಂಬುದು ಶಾಪವಾಗಿ ಎರಗಿದೆ. ಲಕ್ಷ್ಮಮ್ಮನ ಮಗ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದರೆ. ಲಕ್ಷ್ಮಮ್ಮನ ಪತಿ ಸಕ್ಕರೆ ಖಾಯಿಲೆಗೆ ತುತ್ತಾಗಿ ಕಾಲನ್ನೇ ಕಳೆದುಕೊಂಡಿದ್ದಾರೆ.
ವಿನಯ್ ಅವರಿಗೆ ನಿಯಮಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದೆ. ಸರ್ಕಾರಿ ಯೋಜನೆಗಳನ್ನು ಬಳಸಿಕೊಂಡಿದ್ದರೂ ಸಹ ಆಸ್ಪತ್ರೆ ವೆಚ್ಚ ಇವರ ಕುಟುಂಬಕ್ಕೆ ಹೊರೆಯೇ ಆಗಿದೆ.
ಕೊನೆಗೆ ವೈದ್ಯರ ಸಲಹೆಯಂತೆ ಈಗ ತನ್ನ ಕಿಡ್ನಿಯನ್ನೇ ಮಗನಿಗೆ ನೀಡಲು ಲಕ್ಷ್ಮಮ್ಮ ಮುಂದಾಗಿದ್ದಾಳೆ. ಈಗ ಶಸ್ತ್ರಚಿಕಿತ್ಸೆಗೆ ಹಣ ಹೊಂದಿಸುವ ಮತ್ತೊಂದು ಸವಾಲು ಆಕೆಯ ಎದುರಿಗಿದೆ. ಸರ್ಕಾರದಿಂದ ಏನಾದರೂ ನೆರವು ಸಿಗಬಹುದಾ ಎಂದು ಕಾಯುತ್ತಿದ್ದಾಳೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications