ಮೈಸೂರಿನಲ್ಲಿ ಸಂಚರಿಸುವವರಿಗೆ ಗೂಗಲ್ ನಲ್ಲಿ ಬಸ್ ಮಾಹಿತಿ
ಮೈಸೂರು, ಜುಲೈ 18: ಸಾಂಸ್ಕೃತಿಕ ನಗರಿ ಹಾಗೂ ಪ್ರವಾಸಿಗರ ಸ್ವರ್ಗ ಎಂದೇ ಹೆಸರಾದ ಮೈಸೂರಿನಲ್ಲಿ ಸಂಚರಿಸುವವರಿಗೆ ಹೊಸ ಸುದ್ದಿಯೊಂದು ಇಲ್ಲಿದೆ. ಇನ್ನು ಮುಂದೆ ತಾವು ಪ್ರಯಾಣಿಸುವ ಬಸ್ ಎಷ್ಟು ಹೊತ್ತಿಗೆ, ಎಲ್ಲಿಗೆ ತಲುಪಲಿದೆ? ಎಷ್ಟು ಗಂಟೆಗೆ ಬರಲಿದೆ ಎಂಬ ನಿಖರವಾದ ಮಾಹಿತಿ ಅಂಗೈಯಲ್ಲೇ ಸಿಗಲಿದೆ.
ಹೌದು, ಗೂಗಲ್ ಇಂತಹ ಸೇವೆಯನ್ನು ನೀಡಲು ಮುಂದಾಗುತ್ತಿದ್ದು, ಸ್ಮಾರ್ಟ್ ಫೋನ್ ಗಳಲ್ಲಿ ಗೂಗಲ್ ಮ್ಯಾಪ್ ಅನ್ನು ಆನ್ ಮಾಡಿಕೊಂಡರೆ ಸಾಕು, ಕಾಯುತ್ತಿರುವ ಸಿಟಿ ಬಸ್ ಯಾವ ನಿಲ್ದಾಣಕ್ಕೆ, ಯಾವ ಸಮಯಕ್ಕೆ ಬಂದು ಸೇರಲಿದೆ ಎಂಬುದನ್ನು ತಿಳಿಸುತ್ತದೆ.
ಕೆಎಸ್ ಆರ್ ಟಿಸಿ ಈ ವ್ಯವಸ್ಥೆಯನ್ನು ನಗರದ ನಾಗರಿಕರಿಗೆ ಈಗಾಗಲೇ ಕಲ್ಪಿಸಿಕೊಟ್ಟಿದೆ. ಈ ಮೂಲಕ ತಮ್ಮ ಪ್ರಯಾಣವನ್ನು ಸುಲಭವಾಗಿ ಪ್ಲಾನ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕರು ಬಸ್ ಆಗಮನದ ಮಾಹಿತಿಯನ್ನು ಪಡೆಯುವ ಮೂಲಕ ಪ್ರಯಾಣದ ಸಮಯವನ್ನು ನಿಗದಿ ಮಾಡಿಕೊಳ್ಳಬಹುದಾಗಿದೆ.

ಉದಾಹರಣೆಗೆ, ಬಲ್ಲಾಳ್ ವೃತ್ತದಿಂದ, ಆಂದೋಲನ ವೃತ್ತದವರೆಗೆ ಪ್ರಯಾಣ ಮಾಡಬೇಕಾದರೆ ಗೂಗಲ್ ಮ್ಯಾಪ್ ನಲ್ಲಿ ಎರಡೂ ಸ್ಥಳಗಳನ್ನು ಟೈಪ್ ಮಾಡಿ, ಬಸ್ ಬರುವ ನಿಖರವಾದ ಸಮಯವನ್ನು ತಿಳಿದುಕೊಳ್ಳಬಹುದು.
ಈ ವಿಚಾರಕ್ಕೆ ಕೆಎಸ್ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಪ್ರತಿಕ್ರಿಯಿಸಿ, "ಗೂಗಲ್ ಮ್ಯಾಪ್ ನೊಂದಿಗೆ ರಿಯಲ್ ಟೈಂ ಟ್ರಾನ್ಸಿಟ್ ಇನ್ಫರ್ಮೇಷನ್ ಅನ್ನು ಹಂಚಿಕೊಳ್ಳುವ ಮೂಲಕ ಪ್ರಯಾಣಿಕರಿಗೆ ಉನ್ನತ ಮಟ್ಟದ ಪ್ರಯಾಣದ ಅನುಭವ ನೀಡಲು ಕೆಎಸ್ ಆರ್ ಟಿಸಿ ಬಯಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅನುಕೂಲಕ್ಕೆ ತಕ್ಕಂತೆ ಯೋಜಿಸಿಕೊಳ್ಳಬಹುದಾಗಿದೆ" ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications