ಮೈಸೂರಿನಲ್ಲಿ ಸಂಚರಿಸುವವರಿಗೆ ಗೂಗಲ್ ನಲ್ಲಿ ಬಸ್ ಮಾಹಿತಿ
ಮೈಸೂರು, ಜುಲೈ 18: ಸಾಂಸ್ಕೃತಿಕ ನಗರಿ ಹಾಗೂ ಪ್ರವಾಸಿಗರ ಸ್ವರ್ಗ ಎಂದೇ ಹೆಸರಾದ ಮೈಸೂರಿನಲ್ಲಿ ಸಂಚರಿಸುವವರಿಗೆ ಹೊಸ ಸುದ್ದಿಯೊಂದು ಇಲ್ಲಿದೆ. ಇನ್ನು ಮುಂದೆ ತಾವು ಪ್ರಯಾಣಿಸುವ ಬಸ್ ಎಷ್ಟು ಹೊತ್ತಿಗೆ, ಎಲ್ಲಿಗೆ ತಲುಪಲಿದೆ? ಎಷ್ಟು ಗಂಟೆಗೆ ಬರಲಿದೆ ಎಂಬ ನಿಖರವಾದ ಮಾಹಿತಿ ಅಂಗೈಯಲ್ಲೇ ಸಿಗಲಿದೆ.
ಹೌದು, ಗೂಗಲ್ ಇಂತಹ ಸೇವೆಯನ್ನು ನೀಡಲು ಮುಂದಾಗುತ್ತಿದ್ದು, ಸ್ಮಾರ್ಟ್ ಫೋನ್ ಗಳಲ್ಲಿ ಗೂಗಲ್ ಮ್ಯಾಪ್ ಅನ್ನು ಆನ್ ಮಾಡಿಕೊಂಡರೆ ಸಾಕು, ಕಾಯುತ್ತಿರುವ ಸಿಟಿ ಬಸ್ ಯಾವ ನಿಲ್ದಾಣಕ್ಕೆ, ಯಾವ ಸಮಯಕ್ಕೆ ಬಂದು ಸೇರಲಿದೆ ಎಂಬುದನ್ನು ತಿಳಿಸುತ್ತದೆ.
ಕೆಎಸ್ ಆರ್ ಟಿಸಿ ಈ ವ್ಯವಸ್ಥೆಯನ್ನು ನಗರದ ನಾಗರಿಕರಿಗೆ ಈಗಾಗಲೇ ಕಲ್ಪಿಸಿಕೊಟ್ಟಿದೆ. ಈ ಮೂಲಕ ತಮ್ಮ ಪ್ರಯಾಣವನ್ನು ಸುಲಭವಾಗಿ ಪ್ಲಾನ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕರು ಬಸ್ ಆಗಮನದ ಮಾಹಿತಿಯನ್ನು ಪಡೆಯುವ ಮೂಲಕ ಪ್ರಯಾಣದ ಸಮಯವನ್ನು ನಿಗದಿ ಮಾಡಿಕೊಳ್ಳಬಹುದಾಗಿದೆ.

ಉದಾಹರಣೆಗೆ, ಬಲ್ಲಾಳ್ ವೃತ್ತದಿಂದ, ಆಂದೋಲನ ವೃತ್ತದವರೆಗೆ ಪ್ರಯಾಣ ಮಾಡಬೇಕಾದರೆ ಗೂಗಲ್ ಮ್ಯಾಪ್ ನಲ್ಲಿ ಎರಡೂ ಸ್ಥಳಗಳನ್ನು ಟೈಪ್ ಮಾಡಿ, ಬಸ್ ಬರುವ ನಿಖರವಾದ ಸಮಯವನ್ನು ತಿಳಿದುಕೊಳ್ಳಬಹುದು.
ಈ ವಿಚಾರಕ್ಕೆ ಕೆಎಸ್ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಪ್ರತಿಕ್ರಿಯಿಸಿ, "ಗೂಗಲ್ ಮ್ಯಾಪ್ ನೊಂದಿಗೆ ರಿಯಲ್ ಟೈಂ ಟ್ರಾನ್ಸಿಟ್ ಇನ್ಫರ್ಮೇಷನ್ ಅನ್ನು ಹಂಚಿಕೊಳ್ಳುವ ಮೂಲಕ ಪ್ರಯಾಣಿಕರಿಗೆ ಉನ್ನತ ಮಟ್ಟದ ಪ್ರಯಾಣದ ಅನುಭವ ನೀಡಲು ಕೆಎಸ್ ಆರ್ ಟಿಸಿ ಬಯಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅನುಕೂಲಕ್ಕೆ ತಕ್ಕಂತೆ ಯೋಜಿಸಿಕೊಳ್ಳಬಹುದಾಗಿದೆ" ಎಂದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications