Muda: ಸಿಎಂ ಪತ್ನಿಯನ್ನು 4 ಗಂಟೆ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು
ಮೈಸೂರು, ಅಕ್ಟೋಬರ್ 25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಪಡೆದ ನಿವೇಶನ ಪಡೆಯುವಾಗ ದೊಡ್ಡ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಅದರ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೆ ಮೈಸೂರು ಪೊಲೀಸ್ ಲೋಕಾಯುಕ್ತ ಅಧಿಕಾರಿಗಳು ನತಿಖೆ ಚುರುಕಗೊಳಿಸಿದ್ದಾರೆ. ಶುಕ್ರವಾರ (ಅಕ್ಟೋಬರ್ 25) ಸಿಎಂ ಸಿದ್ದರಾಮಯ್ಯ ಅವರ ಪತ್ನಿಯಲ್ಲೂ ಸುಮಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ಮುಡಾ ಅಕ್ರಮ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ಮೈಸೂರಿನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಿದರು. ಬೆಳಗ್ಗೆ ಸುಮಾರು 8 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ಮುಡಾ ಅಕ್ರಮ, ನಿವೇಶನ ವಾಪಾಸ್, ಸಿದ್ದರಾಮಯ್ಯ ಅವರಿಗೆ ನಿವೇಶನ ಪಡೆದಿದ್ದರ ಬಗ್ಗೆ ವಿಚಾರಿಸಿದ್ದರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ತನಿಖಾಧಿಕಾರಿಗಳು ಗುರುವಾರ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾರಜಾಗುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ತನಿಖಾಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಒಂದಷ್ಟು ದಾಖಲೆಗಳನ್ನು ಅವರು ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಪತ್ನಿಗೆ ನೋಟಿಸ್, ವಿಚಾರಣೆಗೆ ಸೂಚನೆ
ಸಿದ್ದರಾಮಯ್ಯ ಅವರಿಗೆ ಸೇರಿದ್ದ ಜಾಗ ಸ್ವಾಧೀನ ಮಾಡಿಕೊಂಡು ಪಯಾರ್ಯವಾಗಿ ಮೈಸೂರಿನ ವಿಜಯನಗರ ಮೂರು ಮತ್ತು ನಾಲ್ಕನೇ ಹಂತದಲ್ಲಿ 14 ಸೈಟ್ಗಳನ್ನು ನೀಡಲಾಗಿತ್ತು. ಈ ನಿವೇಶನ ಪಡೆಯುವಾಗ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಬಳಸಿಕೊಂಡು ಅಕ್ರಮ ವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಎಲ್ಲ ಸೈಟುಗಳನ್ನು ಅವರು ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಪಡೆದಿದ್ದಾರೆ. ಹೀಗಾಗಿ ಪತ್ನಿ ಪಾರ್ವತಿ ಅವರಿಗೂ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಾಗಿದೆ.
ಮುಡಾಗೆ ಸೈಟ್ ವಾಪಾಸ್ ನೀಡಿದ್ದ ಸಿಎಂ ಪತ್ನಿ
ಈ ಮುಡಾ ಪ್ರಕರಣದಲ್ಲಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹೀಗಾಗಿ ಇತ್ತೀಚೆಗೆ ಸಿಎಂ ಪತ್ನಿ ಪಾರ್ವತಿ ಅವರು, ಮುಡಾ ಎಲ್ಲ ಸೈಟು ವಾಪಾಸ್ ನೀಡಿದ್ದರು. ನನಗೆ ನನ್ನ ಪತಿಯ ಗೌರವ, ಹಿತಕ್ಕಿಂತ ಬೇರೇನೂ ಬೇಕಿಲ್ಲ. ಅವರ ಗೌರವಕ್ಕಿಂತ ಬೇರೇನು ದೊಡ್ಡದಲ್ಲ ಎಂದು ತಿಳಿಸಿದ್ದರು.
ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸೆಪ್ಟೆಂಬರ್ 27 ರಂದು ಎಫ್ಐಆರ್ ದಾಖಲಿಸಲಾಗಿತ್ತು. ಅದಕ್ಕು ಮೊದಲು ರಾಜ್ಯಪಾಲರ ಬಳಿಕ ಈ ಸೈಟ್ ಅಕ್ರಮ ಪ್ರಕರಣದ ತನಿಖೆಗೆ ಅನುಮತಿ ನೀಡುವಂತೆ ಸಿಎಂ ವಿರುದ್ಧ ಸಾಮಾಜಿಕ ಕಾರ್ಯಕರ್ತ ದೂರು ನೀಡಿದ್ದರು.
ಮುಡಾ ತನಿಖೆ ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲು
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಿಚಾರಣೆ ನಡೆದು, ರಾಜ್ಯಪಾರ ತನಿಖೆಗೆ ಅನುಮತಿ ನೀಡಿ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು. ಕೂಡಲೇ ಸಿಎಂ ವಿರುದ್ಧ ಎಫ್ಐಆರ್ ದಾಖಲಾಯಿತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದ ತನಿಖೆ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸದ್ಯ ಈ ಪ್ರಕರಣ ಹೈಕೋರ್ಟ್ನಲ್ಲಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications