ಚಂಪಾರಿಗೆ 2000 ಪತ್ರ ಬರೆದು ಸಮ್ಮೇಳನಕ್ಕೆ ಸ್ವಾಗತ ಕೋರಿದ ವಿದ್ಯಾರ್ಥಿಗಳು
ಮೈಸೂರು, ನವೆಂಬರ್ 24: 83ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ ಚಂದ್ರಶೇಖರ್ ಪಾಟೀಲರಿಗೆ 2000 ಶುಭಾಶಯ ಪತ್ರವನ್ನು ಅಂಚೆ ಮೂಲಕ ಕಳುಹಿಸುವುದರೊಂದಿಗೆ ನಗರದ ಮಹರ್ಷಿ ವಿದ್ಯಾಸಂಸ್ಥೆಯ ಮಕ್ಕಳು ಗಮನಸೆಳೆದಿದ್ದಾರೆ.
ಇಂದಿನ ಆಧುನಿಕ ಯುಗದಲ್ಲಿ ಪತ್ರ ಬರೆಯುವ ಅಭ್ಯಾಸ ಮರೆಯಾಗಿದೆ. ಶುಭಾಶಯಗಳನ್ನು ಪತ್ರಗಳಲ್ಲೇ ತಿಳಿಸುವ ಕಾಲವೊಂದಿತ್ತು. ಅದು ತೆರೆಗೆ ಸರಿದಿದೆ. ಆದರೆ, ಪತ್ರ ನೀಡುತ್ತಿದ್ದ ಸುಖ ಸಂತೋಷ ಇಂದಿಗೂ ಎಲ್ಲರ ಮನದಲ್ಲೂ ಅಚ್ಚಳಿಯದೆ ಉಳಿದಿದೆ. ಈ ಪತ್ರದ ರವಾನೆಯ ಮೂಲಕ ಆ ಕಾಲವನ್ನು ಮತ್ತೊಮ್ಮೆ ನೆನಪಿಸುವ ಮತ್ತು ಅಂಚೆಯ ಮಹತ್ವವನ್ನು ವಿದ್ಯಾರ್ಥಿಗಳು ಸಾರಿದರು.
ಚಿತ್ರಗಳು : ಸಾಂಸ್ಕೃತಿಕ ನಗರಿಯಲ್ಲಿ ಅಕ್ಷರ ಜಾತ್ರೆ

ಒಂದಾನೊಂದು ಕಾಲದಲ್ಲಿ ಪತ್ರಗಳು ಮಾನವರ ಅವಿಭಾಜ್ಯ ಅಂಗಗಳಾಗಿದ್ದವು. ಪರಸ್ವರ ವಿಚಾರ ವಿನಿಮಯಕ್ಕಾಗಿಯೇ ಇದ್ದ ಪತ್ರಗಳು ಭಾವನಾತ್ಮಕ ಸಂಬಂಧ ಹೊಂದಿದ್ದವು. ಕೆಲವೊಮ್ಮೆ ಸಾಹಿತ್ಯದ ಪ್ರಕಾರವಾಗಿಯೂ, ಪುಟ್ಟಪುಟ್ಟ ಕಾವ್ಯಗಳಾಗಿಯೂ, ಇತಿಹಾಸದ ಆಕಾರಗಳಾಗಿಯೂ ಗಮನಸೆಳೆಯುತ್ತಿದ್ದವು.
ಇಂದಿನ ವಾಟ್ಸಪ್, ಫೇಸ್ಬುಕ್ ಗಳಂತಹ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಇಂತಹ ಪತ್ರಗಳು ನೆಲೆ ಕಳೆದುಕೊಂಡಿವೆ. ಹೀಗಾಗಿ ಅಂದಿನ ಆ ಪತ್ರ ವೈಭವ ನೆನಪಿಸುವ ಮತ್ತು ಮಕ್ಕಳಿಗೆ ಪತ್ರದ ಮಹತ್ವ ಅರಿಯುವಂತೆ ಮಾಡುವ ಸಲುವಾಗಿ ವಿದ್ಯಾಸಂಸ್ಥೆಯ ಸುಮಾರು 2000 ಮಕ್ಕಳು ಅಂಚೆ ಕಾರ್ಡಿನ ಮೂಲಕ ಸಮ್ಮೇಳನಾಧ್ಯಕ್ಷರಿಗೆ ಶುಭಾಶಯ ತಿಳಿಸಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ.
ಈ ಸಂದರ್ಭ ಮಹರ್ಷಿ ವಿದ್ಯಾಸಂಸ್ಥೆಯ ಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥರಾದ ಭವಾನಿಶಂಕರ್, ವಿಶ್ವಸ್ಥರಾದ ಕೇದಾರ್ ನಾಥ್, ಪ್ರಾಚಾರ್ಯರುಗಳಾದ ಕೆ.ಆರ್. ಗೋಪಾಲಸ್ವಾಮಿ, ವಿ. ಗಿರೀಶ್, ಲಕ್ಷ್ಮಿ, ಮಹಾದೇವಸ್ವಾಮಿ, ಉಷಾಸಿಂಗ್, ವಾಣಿಶ್ರೀ ಹಾಗೂ ಸಂಸ್ಥೆಯ ಶಿಕ್ಷಕ-ಶಿಕ್ಷಕಿಯರು ಇದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications