ಪತ್ನಿ, ಮಕ್ಕಳನ್ನು ನಾಲೆಗೆ ನೂಕಿ ಕೊಲೆಗೈದ ಪತಿ
ಮೈಸೂರು, ಸೆಪ್ಟೆಂಬರ್, 16: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ನಾಲೆಗೆ ತಳ್ಳಿದ ಘಟನೆ ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಹೊಳೆನರಸೀಪುರದ ಬಾಗೇವಾಳು ಗ್ರಾಮದ ನಿವಾಸಿ ಪರಮೇಶ್ ತನ್ನ ಪತ್ನಿ ಅನುಷಾ (28) ಪುತ್ರಿಯರಾದ ಪೂರ್ವಿಕಾ (6) ಲಿಖಿತಾ (2) ರನ್ನು ಚಾಮರಾಜ ಬಲದಂಡೆ ನಾಲೆಗೆ ತಳ್ಳಿ ಕೊಲೆ ಮಾಡಿದ್ದಾನೆ. ನಂತರ ಬಂದು ಕೆ.ಆರ್. ಪೋಲೀಸ್ ಠಾಣೆ ಪೊಲೀಸರೆದುರು ತಾನೇ ಹತ್ಯೆಗೈದಿದ್ದನ್ನು ಒಪ್ಪಿಕೊಂಡಿದ್ದಾನೆ.

ಪೂರ್ವಿಕ ಶವ ಸೌತನಹಳ್ಳಿ ಗ್ರಾಮದ ಬಳಿ ನಾಲೆಯಲ್ಲಿ ಪತ್ತೆಯಾಗಿದೆ. ಇನ್ನು ಇಬ್ಬರ ಶವಕ್ಕಾಗಿ ಶೋಧ ಕಾರ್ಯ ಚುರುಕುಗೊಂಡಿದೆ.
ಸಾರ್ವಜನಿಕ ಸ್ಥಳದಲ್ಲೇ ಏಕಾಏಕಿ ಮನಬಂದಂತೆ ಗುಂಡು ಹಾರಿಸಿದ ಭೂಪ
ಮೈಸೂರಿನಲ್ಲಿ ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿಯೋರ್ವ ಗುಂಡು ಹಾರಿಸಿದ ಘಟನೆ ನಡೆದಿದ್ದು, ಜನತೆ ಇದರಿಂದ ಬೆಚ್ಚಿ ಬಿದ್ದಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರಂ ಬಡಾವಣೆಯ ನಿವಾಸಿ ಗಣೇಶ್ ಪ್ರಸಾದ್ ಎಂಬ ವ್ಯಕ್ತಿ ಅಭ್ಯಾಸಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗಣೇಶ್ ಪ್ರಸಾದ್ ಗುಂಡು ಹಾರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮೈಸೂರಿನ ಜೆ.ಎಲ್.ಬಿ ರಸ್ತೆಯಲ್ಲಿರುವ ಪಾಳು ಮನೆಯಲ್ಲಿ ಗುಂಡು ಹಾರಿಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಗಣೇಶ್ ಪ್ರಸಾದ್ ಗುಂಡು ಹಾರಿಸುವ ವೇಳೆ ಅಲ್ಲಿ ಒಂದು ಕಾರು ನಿಂತಿತ್ತು ಎನ್ನಲಾಗಿದೆ. ಮತ್ತೊಂದು ಕಾರು ಅದೇ ಮಾರ್ಗದಲ್ಲಿ ಸಾಗಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಎಲ್ಲ ದೃಶ್ಯಗಳನ್ನು ಗಣೇಶ್ ಪ್ರಸಾದ್ ಸ್ನೇಹಿತರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications