ಮೈಸೂರು: ಮಾವು ಹಲಸು ಮೇಳಕ್ಕೆ ಚಾಲನೆ
ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಮಾವು ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡಲು ತೋಟಗಾರಿಕೆ ಇಲಾಖೆ ಶುಕ್ರವಾರದಿಂದ ಮೈಸೂರು ನಗರದ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಿರುವ ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮೈಸೂರು, ಮಂಡ್ಯ, ರಾಮನಗರ, ಉತ್ತರ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಿಗುವಂತಹ ಮಾವಿನ ಹಣ್ಣುಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಾಗುತ್ತಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಬರುತ್ತಿರುವುದರಿಂದ ಹೆಚ್ಚಿನ ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಕುಪ್ಪಣ್ಣ ಪಾರ್ಕ್ನಲ್ಲಿ ಮಾವು ಮೇಳ ಆಯೋಜಿಸಲಾಗಿದ್ದು, ಒಂದೇ ಸೂರಿನಡಿ ತರಹೇವಾರಿ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ನೈಸರ್ಗಿಕವಾಗಿ ಹಾಗೂ ರೈತರೇ ನೇರವಾಗಿ ಮಾವು ತರುವುದರಿಂದ ಹೆಚ್ಚು ಬೆಲೆ ಇರುವುದಿಲ್ಲ. ಗ್ರಾಹಕರು ರೈತರನ್ನು ಪ್ರೋತ್ಸಾಹಿಸಲು ಮಾವು ಮೇಳಕ್ಕೆ ಆಗಮಿಸಿ ಖರೀದಿಸಿ ಎಂದು ಮಾಹಿತಿ ನೀಡಿದರು.
35 ಮಳಿಗೆ ವ್ಯವಸ್ಥೆ
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅಂಗಡಿ, ಮಾತನಾಡಿ, ಮಾವು ಮಾರಾಟ ಮತ್ತು ಪ್ರದರ್ಶನಕ್ಕೆ 35 ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯ ಮಾವು ಮೇಳದಲ್ಲಿ 150 ಟನ್ ಮಾವಿನ ಹಣ್ಣ ಮಾರಾಟವಾಗಿತ್ತು. ಈ ಬಾರಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದರು.
ನೈಸರ್ಗಿಕ ಹಣ್ಣುಗಳಿಗೆ ಆದ್ಯತೆ
ಮೇಳದಲ್ಲಿ ಭಾಗವಹಿಸುವ ರೈತರಿಗೆ ನೈಸರ್ಗಿಕವಾಗಿ ಹಣ್ಣಾದವುಗಳನ್ನು ತರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಉತ್ಕೃಷ್ಟ ದರ್ಜೆಯ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯು ವಂತೆ ಮಾಡಲಾಗಿದೆ.
ಶೇ.50ರಷ್ಟು ಫಸಲು ನಾಶ
ಮೈಸೂರು ಜಿಲ್ಲೆಯಲ್ಲಿ 3047 ಹೆಕ್ಟೇರ್ನಲ್ಲಿ ಮಾವು ಬೆಳೆಯಲಾಗುತ್ತಿದ್ದು, ಪ್ರತಿವರ್ಷ 30 ರಿಂದ 35 ಸಾವಿರ ಟನ್ ಮಾವು ಉತ್ಪಾದನೆಯಾಗುತ್ತಿತ್ತು. ಆದರೆ, ಈ ಬಾರಿ ವಾತಾವರಣದಲ್ಲಿನ ಉಷ್ಣತೆ ಹೆಚ್ಚಳ ಹಾಗೂ ಬಿಸಿ ಗಾಳಿಯ ಪರಿಣಾಮ ಮಾವಿನ ಹೂ ಉದುರಿದ್ದು ಶೇ.50 ರಷ್ಟು ಫಸಲು ನಾಶವಾಗಿದೆ ಎಂದು ತಿಳಿಸಿದರು.
ಮಾರುಕಟ್ಟೆಗ ಹೋಲಿಕೆ ಮಾಡಿದರೆ ಕಡಿಮೆ ದರಕ್ಕೆ ಇಲ್ಲಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ. ರೈತರೇ ಇಲ್ಲಿ ಮಾರಾಟಗಾರರಾಗಿದ್ದು, ಲಾಭ ಕೂಡ ಅವರಿಗೆ ಸೇರಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ರೈತರಿಂದಲೇ ಹಣ್ಣುಗಳನ್ನು ಖರೀದಿಸಲು ಮನವಿ ಮಾಡಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications