ಮೈಸೂರು: ಮಾವು ಹಲಸು ಮೇಳಕ್ಕೆ ಚಾಲನೆ
ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಮಾವು ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡಲು ತೋಟಗಾರಿಕೆ ಇಲಾಖೆ ಶುಕ್ರವಾರದಿಂದ ಮೈಸೂರು ನಗರದ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಿರುವ ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮೈಸೂರು, ಮಂಡ್ಯ, ರಾಮನಗರ, ಉತ್ತರ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಿಗುವಂತಹ ಮಾವಿನ ಹಣ್ಣುಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಾಗುತ್ತಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಬರುತ್ತಿರುವುದರಿಂದ ಹೆಚ್ಚಿನ ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಕುಪ್ಪಣ್ಣ ಪಾರ್ಕ್ನಲ್ಲಿ ಮಾವು ಮೇಳ ಆಯೋಜಿಸಲಾಗಿದ್ದು, ಒಂದೇ ಸೂರಿನಡಿ ತರಹೇವಾರಿ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ನೈಸರ್ಗಿಕವಾಗಿ ಹಾಗೂ ರೈತರೇ ನೇರವಾಗಿ ಮಾವು ತರುವುದರಿಂದ ಹೆಚ್ಚು ಬೆಲೆ ಇರುವುದಿಲ್ಲ. ಗ್ರಾಹಕರು ರೈತರನ್ನು ಪ್ರೋತ್ಸಾಹಿಸಲು ಮಾವು ಮೇಳಕ್ಕೆ ಆಗಮಿಸಿ ಖರೀದಿಸಿ ಎಂದು ಮಾಹಿತಿ ನೀಡಿದರು.
35 ಮಳಿಗೆ ವ್ಯವಸ್ಥೆ
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅಂಗಡಿ, ಮಾತನಾಡಿ, ಮಾವು ಮಾರಾಟ ಮತ್ತು ಪ್ರದರ್ಶನಕ್ಕೆ 35 ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯ ಮಾವು ಮೇಳದಲ್ಲಿ 150 ಟನ್ ಮಾವಿನ ಹಣ್ಣ ಮಾರಾಟವಾಗಿತ್ತು. ಈ ಬಾರಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದರು.
ನೈಸರ್ಗಿಕ ಹಣ್ಣುಗಳಿಗೆ ಆದ್ಯತೆ
ಮೇಳದಲ್ಲಿ ಭಾಗವಹಿಸುವ ರೈತರಿಗೆ ನೈಸರ್ಗಿಕವಾಗಿ ಹಣ್ಣಾದವುಗಳನ್ನು ತರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಉತ್ಕೃಷ್ಟ ದರ್ಜೆಯ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯು ವಂತೆ ಮಾಡಲಾಗಿದೆ.
ಶೇ.50ರಷ್ಟು ಫಸಲು ನಾಶ
ಮೈಸೂರು ಜಿಲ್ಲೆಯಲ್ಲಿ 3047 ಹೆಕ್ಟೇರ್ನಲ್ಲಿ ಮಾವು ಬೆಳೆಯಲಾಗುತ್ತಿದ್ದು, ಪ್ರತಿವರ್ಷ 30 ರಿಂದ 35 ಸಾವಿರ ಟನ್ ಮಾವು ಉತ್ಪಾದನೆಯಾಗುತ್ತಿತ್ತು. ಆದರೆ, ಈ ಬಾರಿ ವಾತಾವರಣದಲ್ಲಿನ ಉಷ್ಣತೆ ಹೆಚ್ಚಳ ಹಾಗೂ ಬಿಸಿ ಗಾಳಿಯ ಪರಿಣಾಮ ಮಾವಿನ ಹೂ ಉದುರಿದ್ದು ಶೇ.50 ರಷ್ಟು ಫಸಲು ನಾಶವಾಗಿದೆ ಎಂದು ತಿಳಿಸಿದರು.
ಮಾರುಕಟ್ಟೆಗ ಹೋಲಿಕೆ ಮಾಡಿದರೆ ಕಡಿಮೆ ದರಕ್ಕೆ ಇಲ್ಲಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ. ರೈತರೇ ಇಲ್ಲಿ ಮಾರಾಟಗಾರರಾಗಿದ್ದು, ಲಾಭ ಕೂಡ ಅವರಿಗೆ ಸೇರಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ರೈತರಿಂದಲೇ ಹಣ್ಣುಗಳನ್ನು ಖರೀದಿಸಲು ಮನವಿ ಮಾಡಲಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications