ಮೈಸೂರು: ಪೌರ ಕಾರ್ಮಿಕನನ್ನು ಮ್ಯಾನ್ ಹೋಲಿಗಿಳಿಸಿದ್ದ ಗ್ರಾ.ಪಂ ಅಧ್ಯಕ್ಷೆ ವಜಾ
ಮೈಸೂರು, ಜೂನ್ 28 : ಮ್ಯಾನ್ ಹೋಲ್ ನೊಳಗೆ ಪೌರಕಾರ್ಮಿಕನನ್ನು ಮ್ಯಾನ್ ಹೋಲ್ ಗೆ ಇಳಿಸಿ ಶುಚಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.
ಗ್ರಾ.ಪಂ ಅಧ್ಯಕ್ಷೆ ಎಸ್.ಗೀತಾ ಎಂಬವರೇ ತಮ್ಮ ಸ್ಥಾನದಿಂದ ವಜಾಗೊಂಡವರು. ಜೂನ್ 7 ರಂದು ಗಣೇಶ್ ಎಂಬ ಪೌರಕಾರ್ಮಿಕನನ್ನು ಒತ್ತಾಯಪೂರ್ವಕವಾಗಿ ಮ್ಯಾನ್ ಹೋಲ್ ಗೆ ಇಳಿಸಿದ್ದರು. ಈ ಕುರಿತು ಭಾರೀ ಚರ್ಚೆಯಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು.

ಪ್ರಕರಣ ಸಂಬಂಧಿಸಿದಂತೆ ಪಿಡಿಓ ಆನಂದನನ್ನು ಬಂಧಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್, ಅಧ್ಯಕ್ಷೆಯನ್ನು ವಜಾ ಮಾಡುವಂತೆ ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆದಿದ್ದರು. ಹೀಗಾಗಿ ಅಧ್ಯಕ್ಷೆ ಗೀತಾರನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರಿನಲ್ಲೊಂದು ವಿನೂತನ ಪ್ರತಿಭಟನೆ
ನಗರದಲ್ಲೆಡೆ ದಿನೇ ದಿನೇ ಪರವಾನಗಿ ಪಡೆಯದೆ ಮುಖ್ಯರಸ್ತೆಗಳಲ್ಲಿ ಅಶ್ಲೀಲ ಜಾಹೀರಾತು ಫಲಕಗಳು ರಾರಾಜಿಸುತ್ತಿದೆ. ಈ ಹಿನ್ನೆಲೆ ಮೈಸೂರು ನಗರಪಾಲಿಕೆ ವತಿಯಿಂದ ಪರವಾನಿಗೆ ಪಡೆದು ಅಶ್ಲೀಲ ರೀತಿಯಲ್ಲಿ ಅಳವಡಿಸಲಾಗಿರುವ ಪುರುಷರ ಒಳ ಉಡುಪಿನ ಜಾಹಿರಾತು ಫಲಕವನ್ನು ಮರೆಮಾಚಿಸಲು ಬಟ್ಟೆಯಿಂದ ಮುಚ್ಚುವುದರ ಮೂಲಕ ಬೆಳಕು ಸಂಸ್ಥೆಯ ಸದಸ್ಯರು ಪಾಲಿಕೆಯ ಗಮನ ಸೆಳೆದರಲ್ಲದೇ ಪ್ರತಿಭಟನೆ ನಡೆಸಿದರು.

ಕೂಡಲೇ ಜಾಹಿರಾತು ಫಲಕ ತೆರವುಗೊಳಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿಯ ಜಾಹಿರಾತು ಫಲಕಗಳಿಗೆ ಪರವಾನಿಗೆಯನ್ನು ನೀಡಬೇಡಿ ಎಂದು ಒತ್ತಾಯಿಸಿದರಲ್ಲದೇ ಪಾಲಿಕೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಕೆ.ದೇವರಾಜ್, ಬೆಳಕು ಸಂಸ್ಥೆಯ ಸಹ ಸಂಚಾಲಕ ಧನುಷ್, ವಿನಯ್,ಸುಭಾಷ್ ಮತ್ತಿತರರು ಪಾಲ್ಗೊಂಡಿದ್ದರು
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications