ಪ್ರತಾಪ್ ಸಿಂಹ ಹೇಳಿಕೆ ಸತ್ಯಕ್ಕೆ ದೂರ: ಮೈಸೂರು ಮೇಯರ್
ಮೈಸೂರು, ಜೂನ್ 15: ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿರುವಂತೆ ಮಹಾನಗರ ಪಾಲಿಕೆಯಲ್ಲಿ ಅನುದಾನ ಹಂಚಿಕೆ ವಿಚಾರವಾಗಿ ಯಾವುದೇ ಮಾಫಿಯಾ ನಡೆದಿಲ್ಲ. ಎಲ್ಲೋ ನಿಂತು ಮಾತನಾಡುವ ಬದಲು ಅವರು ಕೌನ್ಸಿಲ್ ಸಭೆಗೆ ಹಾಜರಾಗಿ ವಾಸ್ತವ ಸಂಗತಿ ಅರಿಯಬೇಕು ಎಂದು ಮೈಸೂರು ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯಲ್ಲಿ ಹಣಕಾಸು ಯೋಜನೆ ಅನುದಾನದ ಹಂಚಿಕೆಯಲ್ಲಿ ಯಾವುದೇ ರೀತಿಯ ತಾರತಮ್ಯ ನಡೆದಿಲ್ಲ .65 ಸದಸ್ಯರಿಗೂ ವಾರ್ಡ್ ಅಭಿವೃದ್ಧಿಗೆ ತಲಾ 75 ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗಿದೆ. ಅದರಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ವಾರ್ಡ್ ಗಳಿಗೆ ಸ್ವಲ್ಪ ಮಟ್ಟಿಗಿನ ಹೆಚ್ಚು ಅನುದಾನ ನೀಡಿದೆ ಎಂದರು.
ಸೂಕ್ತ ಮಾಹಿತಿ ಪಡೆದುಕೊಳ್ಳದೇ ಪ್ರತಾಪ್ ಸಿಂಹ ಅವರು, ಪಾಲಿಕೆಯ ಅನುದಾನದಲ್ಲಿ ಮಾಫಿಯಾ ನಡೆದಿದೆ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ವಾಸ್ತವವೆಂದರೆ, ಅನುದಾನ ಹಂಚಿಕೆಯಲ್ಲಿ ಬಿಜೆಪಿಯ ಕಾರ್ಪೊರೇಟರ್ ಗಳಿಗೆ ಹೆಚ್ಚಿನ ಅನುದಾನ ಹೋಗಿದೆ. ಈ ಕುರಿತು ಸಂಸದರು ದಾಖಲಾತಿ ಪರಿಶೀಲನೆ ನಡೆಸಲಿ ಎಂದು ತಿಳಿಸಿದರು.

ತಪ್ಪು ಮಾಹಿತಿಯಿಂದಾಗಿ ಸಂಸದ ಪ್ರತಾಪ್ ಸಿಂಹ ಅವರು ನಗರ ಪಾಲಿಕೆ ವಿರುದ್ಧ ಆರೋಪಿಸಿರಬಹುದು. ಅವರೂ ಕೌನ್ಸಿಲ್ ಸದಸ್ಯರಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಿ ಪ್ರಶ್ನಿಸುವ ಅಧಿಕಾರ ಅವರಿಗಿದೆ. ಆದರೆ ಈವರೆಗಿನ ಏಳರಲ್ಲಿ ಒಂದೇ ಒಂದು ಕೌನ್ಸಿಲ್ ಸಭೆಯಲ್ಲೂ ಪಾಲ್ಗೊಂಡಿಲ್ಲ. ಹೀಗೆ ಸಮರ್ಪಕ ಮಾಹಿತಿಯಿಲ್ಲದೆ ಪಾಲಿಕೆ ವಿರುದ್ಧ ಆರೋಪಿಸುವುದು ಉಚಿತವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಉಪ ಮೇಯರ್ ಶಫಿ ಅಹಮದ್ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಎಷ್ಟು ಅನುದಾನ ನೀಡಬೇಕು ಎಂಬುದನ್ನು ಸರ್ಕಾರವೇ ನಿಗದಿಪಡಿಸಿರುತ್ತದೆ. ಇದರಲ್ಲಿ ಪಾಲಿಕೆಯ ಪಾತ್ರವಿರುವುದಿಲ್ಲ. ಪಾಲಿಕೆಯ ಅನುದಾನ ಹಂಚಿಕೆ ಕುರಿತು ಸಂಸದರು ಆರೋಪ ಮಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications