ಪ್ರತಾಪ್ ಸಿಂಹ ಹೇಳಿಕೆ ಸತ್ಯಕ್ಕೆ ದೂರ: ಮೈಸೂರು ಮೇಯರ್
ಮೈಸೂರು, ಜೂನ್ 15: ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿರುವಂತೆ ಮಹಾನಗರ ಪಾಲಿಕೆಯಲ್ಲಿ ಅನುದಾನ ಹಂಚಿಕೆ ವಿಚಾರವಾಗಿ ಯಾವುದೇ ಮಾಫಿಯಾ ನಡೆದಿಲ್ಲ. ಎಲ್ಲೋ ನಿಂತು ಮಾತನಾಡುವ ಬದಲು ಅವರು ಕೌನ್ಸಿಲ್ ಸಭೆಗೆ ಹಾಜರಾಗಿ ವಾಸ್ತವ ಸಂಗತಿ ಅರಿಯಬೇಕು ಎಂದು ಮೈಸೂರು ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯಲ್ಲಿ ಹಣಕಾಸು ಯೋಜನೆ ಅನುದಾನದ ಹಂಚಿಕೆಯಲ್ಲಿ ಯಾವುದೇ ರೀತಿಯ ತಾರತಮ್ಯ ನಡೆದಿಲ್ಲ .65 ಸದಸ್ಯರಿಗೂ ವಾರ್ಡ್ ಅಭಿವೃದ್ಧಿಗೆ ತಲಾ 75 ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗಿದೆ. ಅದರಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ವಾರ್ಡ್ ಗಳಿಗೆ ಸ್ವಲ್ಪ ಮಟ್ಟಿಗಿನ ಹೆಚ್ಚು ಅನುದಾನ ನೀಡಿದೆ ಎಂದರು.
ಸೂಕ್ತ ಮಾಹಿತಿ ಪಡೆದುಕೊಳ್ಳದೇ ಪ್ರತಾಪ್ ಸಿಂಹ ಅವರು, ಪಾಲಿಕೆಯ ಅನುದಾನದಲ್ಲಿ ಮಾಫಿಯಾ ನಡೆದಿದೆ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ವಾಸ್ತವವೆಂದರೆ, ಅನುದಾನ ಹಂಚಿಕೆಯಲ್ಲಿ ಬಿಜೆಪಿಯ ಕಾರ್ಪೊರೇಟರ್ ಗಳಿಗೆ ಹೆಚ್ಚಿನ ಅನುದಾನ ಹೋಗಿದೆ. ಈ ಕುರಿತು ಸಂಸದರು ದಾಖಲಾತಿ ಪರಿಶೀಲನೆ ನಡೆಸಲಿ ಎಂದು ತಿಳಿಸಿದರು.

ತಪ್ಪು ಮಾಹಿತಿಯಿಂದಾಗಿ ಸಂಸದ ಪ್ರತಾಪ್ ಸಿಂಹ ಅವರು ನಗರ ಪಾಲಿಕೆ ವಿರುದ್ಧ ಆರೋಪಿಸಿರಬಹುದು. ಅವರೂ ಕೌನ್ಸಿಲ್ ಸದಸ್ಯರಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಿ ಪ್ರಶ್ನಿಸುವ ಅಧಿಕಾರ ಅವರಿಗಿದೆ. ಆದರೆ ಈವರೆಗಿನ ಏಳರಲ್ಲಿ ಒಂದೇ ಒಂದು ಕೌನ್ಸಿಲ್ ಸಭೆಯಲ್ಲೂ ಪಾಲ್ಗೊಂಡಿಲ್ಲ. ಹೀಗೆ ಸಮರ್ಪಕ ಮಾಹಿತಿಯಿಲ್ಲದೆ ಪಾಲಿಕೆ ವಿರುದ್ಧ ಆರೋಪಿಸುವುದು ಉಚಿತವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಉಪ ಮೇಯರ್ ಶಫಿ ಅಹಮದ್ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಎಷ್ಟು ಅನುದಾನ ನೀಡಬೇಕು ಎಂಬುದನ್ನು ಸರ್ಕಾರವೇ ನಿಗದಿಪಡಿಸಿರುತ್ತದೆ. ಇದರಲ್ಲಿ ಪಾಲಿಕೆಯ ಪಾತ್ರವಿರುವುದಿಲ್ಲ. ಪಾಲಿಕೆಯ ಅನುದಾನ ಹಂಚಿಕೆ ಕುರಿತು ಸಂಸದರು ಆರೋಪ ಮಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications