ಮೈಸೂರು ಮೇಯರ್ ಚುನಾವಣೆ: ಸ್ವಪಕ್ಷದಲ್ಲೇ ಶುರುವಾಯ್ತು ಲಾಬಿ
ಮೈಸೂರು, ಜನವರಿ 10 : ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಸ್ಥಾನದ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಪಾಲಿಕೆಯಲ್ಲಿನ ಕಾಂಗ್ರೆಸ್ ಸದಸ್ಯರಲ್ಲಿ ಸಂಚಲನ ಉಂಟಾಗಿದೆ. ಉಪ ಮಹಾಪೌರ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದ್ದು, ಜಾ.ದಳದ ಇಂದಿರಾ ಮಹೇಶ್ (ವಾರ್ಡ್ ನಂ.61) ಅವರು ಮಾತ್ರವೇ ಅರ್ಹ ಅಭ್ಯರ್ಥಿಯಾಗಿದ್ದಾರೆ. ಅವರ ಆಯ್ಕೆ ಖಚಿತವಾಗಿದೆ.
ಆದರೆ, ಮಹಾಪೌರರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಮಹಾಪೌರ ಸ್ಥಾನಕ್ಕೆ ಜಾ.ದಳ, ಬಿಜೆಪಿಯಲ್ಲಿ ಅಭ್ಯರ್ಥಿಗಳೇ ಇಲ್ಲ. ಆದರೆ, ಕಾಂಗ್ರೆಸ್ ನಲ್ಲಿ ಇಬ್ಬರಿಗೆ ಪ್ರಥಮ ಪ್ರಜೆಯಾಗುವ ಅರ್ಹತೆ ಇರುವುದರಿಂದ ಪೈಪೋಟಿ ಶುರುವಾಗಿದೆ.
ಪೈಪೋಟಿ ಯಾರ ನಡುವೆ ?
ಕಾಂಗ್ರೆಸ್ ಸದಸ್ಯರಾದ ಕಮಲಾ ಉದಯ್ (ವಾರ್ಡ್ ನಂ.50) ಹಾಗೂ ಭಾಗ್ಯವತಿ (ವಾರ್ಡ್ ನಂ.23) ನಡುವೆ ಮಹಾಪೌರ ಸ್ಥಾನಕ್ಕೆ ತೀವ ಪೈಪೋಟಿ ಏರ್ಪಟ್ಟಿದೆ. ಇಬ್ಬರೂ ಸದಸ್ಯರು ನಗರಪಾಲಿಕೆ ಸದಸ್ಯರನ್ನು, ಶಾಸಕರನ್ನು ಹಾಗೂ ಮುಖಂಡರನ್ನು ಭೇಟಿ ಮಾಡಲು ಆರಂಭಿಸಿ ಬೆಂಬಲ ಕೋರುತ್ತಿದ್ದಾರೆ.

ಈವರೆಗೆ ಗಾಂಧಿ ನಗರ ವಾರ್ಡ್ ಗೆ ಮಹಾಪೌರರ ಸ್ಥಾನ ದೊರೆತೇ ಇಲ್ಲ. ಅವಕಾಶ ದೊರೆತರೆ ಈ ಭಾಗದ ಜತೆಗೆ ಇಡೀ ನಗರದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕಮಲಾ ಉದಯ್ ಅವರು ಹೇಳುತ್ತಿದ್ದಾರೆ. ಅವರ ಪತಿ ಉದಯ್, ಹೇಗಾದರೂ ಮಾಡಿ ಮಹಾಪೌರ ಸ್ಥಾನವನ್ನು ತಮ್ಮ ಪತ್ನಿಗೇ ದೊರಕಿಸಿಕೊಡಬೇಕೆಂದು ಲಾಬಿ ಆರಂಭಿಸಿದ್ದಾರೆ. ಈ ಮಧ್ಯೆ ಭಾಗ್ಯವತಿ ಅವರೂ ತಮ್ಮ ಪ್ರಯತ್ನ ಆರಂಭಿಸಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಅವರು ಪಡುವಾರಹಳ್ಳಿ ನಿವಾಸಿ. ಬೋವಿ ಸಮುದಾಯಕ್ಕೆ ಸೇರಿದ ಅವರು, ಶಾಸಕ ವಾಸು ಅವರ ಬೆಂಬಲಿಗರು. ಕಳೆದ ಅವಧಿಯ ಕೊನೆ ವರ್ಷ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲು ಕಲ್ಪಿಸಿದ್ದರಿಂದ ದಲಿತ ಮಹಿಳೆಗೆ ಪ್ರಥಮ ಪ್ರಜೆಯಾಗುವ ಅವಕಾಶ ಸಿಕ್ಕಿತ್ತು. ಈಗ ಬೋವಿ ಮಹಿಳೆಗೆ ಅವಕಾಶ ನೀಡಬೇಕು. ಆ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ಮಹಾಪೌರ, ಉಪ ಮಹಾಪೌರರ ಸ್ಥಾನಗಳಿಗೆ ಜ.24ರ ಬುಧವಾರ ಚುನಾವಣೆ ನಡೆಯಲಿದೆ. ಅಧಿಸೂಚನೆ ಹೊರಡಿಸಲಾದ ಜ.8ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಜ.24ರ ಬೆಳಿಗ್ಗೆ 9.30ರವರೆಗೂ ಕಾಲಾವಕಾಶ ನೀಡಲಾಗಿದೆ. ಅಪರ ಜಿಲ್ಲಾಧಿಕಾರಿ ಟಿ.ಯೋಗೀಶ್ ಸಹಾಯಕ ಚುನಾವಣಾಧಿಕಾರಿಯಾಗಿದ್ದು, ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ಕಚೇರಿಯಲ್ಲಿ ಪ್ರತಿದಿನ ಕಚೇರಿ ವೇಳೆಯಲ್ಲಿ ನಾಮಪತ್ರ ಸ್ವೀಕರಿಸುವರು ಎಂದು ಪಾಲಿಕೆ ಆಯುಕ್ತ ಜಿ.ಜಗದೀಶ್ ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications