ಆಹಾರ ಕಿಟ್ ಲೆಕ್ಕ ಕೇಳಿ ಮುಜುಗರಕ್ಕೀಡಾದ ಮೈಸೂರು ಮೇಯರ್
ಮೈಸೂರು, ಮೇ 14: ಮೈಸೂರು ನಗರದ ಬಡವರಿಗೆ ವಿತರಿಸಲು ವಿವಿಧ ಸಂಘ-ಸಂಸ್ಥೆಗಳು ನೀಡಿದ ಪಡಿತರ ಕಿಟ್ ಗಳ ಸಮಗ್ರ ಮಾಹಿತಿ ನೀಡುವಂತೆ ಮೇಯರ್ ಕೇಳಿದರು. ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ತೀವ್ರ ತರಾಟೆಗೆ ಒಳಗಾದ ಮೇಯರ್ ತಸ್ನೀಂ ಮುಜುಗರಕ್ಕೀಡಾಗಿದ್ದಾರೆ.
ನಗರ ಪಾಲಿಕೆಯಲ್ಲಿ ಬುಧವಾರ ಕೊರೊನಾ ಸೋಂಕು ನಿವಾರಣೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಕಿಟ್ ನ ಮಾಹಿತಿ ನೀಡುವಂತೆ ಮೇಯರ್ ತಸ್ನೀಂ ಅವರು, ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಅವರಿಗೆ ಸೂಚಿಸಿದರು. ಈ ಸಂದರ್ಭ ಬಿಜೆಪಿ ಸದಸ್ಯರು ಮೇಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಆಡಳಿತಾರೂಢ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಕೂಡ ಮೇಯರ್ ಬೆಂಬಲಕ್ಕೆ ಬರಲಿಲ್ಲ.

ಕಿಟ್ ಗಳ ಮಾಹಿತಿ ನೀಡುವಂತೆ ಒತ್ತಾಯಿಸಿಲ್ಲ
ಬಿಜೆಪಿ ಸದಸ್ಯ ಶಿವಕುಮಾರ್ ಮಾತನಾಡಿ, ""ಕಿಟ್ ಗಳ ಮಾಹಿತಿ ನೀಡುವಂತೆ ಪಾಲಿಕೆಯ 65 ಸದಸ್ಯರು ಒತ್ತಾಯಿಸುತ್ತಿದ್ದಾರೆಂದು ನೀವು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ, ಆದರೆ ಸದಸ್ಯರು ಎಂದೂ ಕಿಟ್ ಗಳ ಮಾಹಿತಿ ನೀಡುವಂತೆ ಒತ್ತಾಯಿಸಿಲ್ಲ. ಕೊರೋನಾ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳ ಪರಿಶ್ರಮ ಅಪಾರವಾದದ್ದು. ಅವರ ಬಳಿ ಲೆಕ್ಕ ಕೇಳಿ ಅಪಮಾನ ಮಾಡುವುದು ಸರಿಯಲ್ಲ'' ಎಂದರು.
""ಪಾಲಿಕೆ ಆಯುಕ್ತರು ಬಿಜೆಪಿ ಸದಸ್ಯರು ಹೇಳಿದಂತೆ ಕೇಳುತ್ತಾರೆಂಬ ಗಂಭೀರ ಆರೋಪ ಮಾಡಿದ್ದೀರಿ, ಈ ಕುರಿತು ಕ್ಷಮೆಯಾಚಿಸಿ ಎಂದು ಅವರು ಪಟ್ಟು ಹಿಡಿದರು. ಆಗ ಮೇಯರ್ ತಾವು ಹೇಳಿದ ಮಾತನ್ನು ಹಿಂಪಡೆದರು. ಕೇವಲ ಆಯುಕ್ತರ ಬಳಿ ಲೆಕ್ಕ ಕೇಳುವುದು ಸರಿಯಲ್ಲ.

ಮೇಯರ್ ನ್ನು ತರಾಟೆಗೆ ತೆಗೆದುಕೊಂಡ ಸದಸ್ಯರು
ನಿಮಗೂ ಕೆಲವು ಸಂಘ-ಸಂಸ್ಥೆಗಳು ಕಿಟ್ ಗಳನ್ನು ನೀಡಿದ್ದಾರೆ. ಅವುಗಳ ಕುರಿತೂ ನೀವು ಮಾಹಿತಿ ನೀಡುತ್ತೀರಾ? ಅದರ ಮಾಹಿತಿ ನೀಡಿ'' ಎಂದು ಪಟ್ಟು ಹಿಡಿದಾಗ, ಒಟ್ಟು 150 ಕಿಟ್ ಗಳು ಬಂದಿತ್ತು. ನನ್ನ ವಾರ್ಡ್ ಸೇರಿದಂತೆ ಮೂರು ವಾರ್ಡ್ ಗೆ ಹಂಚಿಕೆ ಮಾಡಿದ್ದೇನೆ ಎಂದು ಮೇಯರ್ ತಸ್ನೀಂ ತಿಳಿಸಿದರು.
ಸದಸ್ಯರನ್ನು ಕೇಳದೆ ನಿಮಗೆ ಬೇಕಾದ ವಾರ್ಡ್ ಗೆ ಮಾತ್ರ ಯಾವ ರೀತಿ ಕಿಟ್ ಹಂಚಿಕೆ ಮಾಡಿದ್ದೀರೆಂದು ತರಾಟೆಗೆ ತೆಗೆದುಕೊಂಡರು. ಕೊರೊನಾ ಸಂದರ್ಭದಲ್ಲಿ ಮೇಯರ್ ಮನೆಯಲ್ಲಿ ಕುಳಿತು ಲೆಕ್ಕ ಕೇಳುವುದು ಸರಿಯಲ್ಲ.

ಕೊರೊನಾ ನಿಯಂತ್ರಣವಾಗಲು ಅಧಿಕಾರಿಗಳ ಪರಿಶ್ರಮ ಕಾರಣ
ನಗರದ ವಿವಿಧ ಸಂಘ-ಸಂಸ್ಥೆಗಳಿಗೆ ಭೇಟಿ ನೀಡಿ ಹೆಚ್ಚಿನ ಪ್ರಮಾಣದಲ್ಲಿ ನೆರವು ಬರುವಂತೆ ಮಾಡಬೇಕು. ಆದರೆ ಮೇಯರ್ ತಮ್ಮ ಕರ್ತವ್ಯವನ್ನು ಮರೆತಿದ್ದಾರೆಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯವೇ ಮೆಚ್ಚುವ ರೀತಿಯಲ್ಲಿ ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಅಧಿಕಾರಿಗಳ ಪರಿಶ್ರಮವೇ ಕಾರಣ. ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಲೆಕ್ಕ ಕೇಳುವುದು ಸರಿಯಲ್ಲ ಎಂದು ಆಡಳಿತ ಪಕ್ಷದ ನಾಯಕ ಅಯೂಬ್ ಖಾನ್ ಅಭಿಪ್ರಾಯಪಟ್ಟರು.

ಅಭಿವೃದ್ಧಿ ಕುರಿತು ಚರ್ಚಿಸಲು ಸದಸ್ಯರ ಒಲವು
ಈ ಘಟನೆಯಿಂದ ಅಸಮಾಧಾನಗೊಂಡ ಮೇಯರ್, ನಿಮಗ್ಯಾರಿಗೂ ಲೆಕ್ಕ ಬೇಡದಿದ್ದಲ್ಲಿ ಸಭೆ ಮುಗಿಸೋಣ, ಎಂದು ಸಭೆ ಮುಕ್ತಾಯಗೊಳಿಸಿ ಹೊರಡಲು ಸಜ್ಜಾಗುತ್ತಿದ್ದಂತೆ, ಸದಸ್ಯರು ಯಾರೂ ಹೊರಡದೇ ನಗರದ ಅಭಿವೃದ್ಧಿ ಕುರಿತು ಚರ್ಚಿಸಲು ಮುಂದಾದರು. ಆಗ ಅನಿವಾರ್ಯವಿಲ್ಲದೇ ಮೇಯರ್ ಸಭೆ ಮುಂದುವರಿಸಬೇಕಾಗಿ ಬಂತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications