ಮೈಸೂರು ದಸರಾ: ಕುದುರೆ ಏರಿ ನಗರ ಪ್ರದಕ್ಷಿಣೆ ಹಾಕಿದ ಮೇಯರ್
ಮೈಸೂರು, ಸೆಪ್ಟೆಂಬರ್ 18: ಸ್ವಚ್ಛತೆ ಕುರಿತಾಗಿ ಜನರಲ್ಲಿ ಅರಿವು ಮೂಡಿಸಲು ಇಂದು ಮಹಾನಗರಪಾಲಿಕೆ ಕಾರ್ಯಾಚರಣೆ ಆರಂಭಿಸಿದ್ದು, ಸ್ವತಃ ಮೇಯರ್ ಎಂ.ಜೆ.ರವಿಕುಮಾರ್ ಕುದುರೆ ಸವಾರಿಯಲ್ಲಿ ಪ್ರದಕ್ಷಿಣೆ ನಡೆಸಿದರು.
ನಗರದಲ್ಲಿ ಸ್ವಚ್ಛತೆಗಾಗಿ ಈಗಾಗಲೇ ಹಲವು ಕಾರ್ಯಗಳನ್ನು ರೂಪಿಸಲಾಗಿದ್ದು, ನಗರದ ಸ್ವಚ್ಛವಾಗಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸಲು ಕುದುರೆ ಸವಾರಿ ನಡೆಸಿದರು.
ದಸರಾ ಜಂಬೂ ಸವಾರಿಯ ವೇಳೆ ಅವರು ಕುದುರೆಯ ಮೇಲೆ ಕುಳಿತಕೊಂಡು ಸವಾರಿ ಮಾಡಬೇಕಾಗಿರುವುದರಿಂದ ಅದರ ತಾಲೀಮು ಕೂಡಾ ನಡೆಸಿದಂತಾಯಿತು ಎನ್ನುವ ಉದ್ದೇಶದಿಂದ ಮೇಯರ್ ಕುದುರೆ ಸವಾರಿ ನಡೆಸಿದರು.

ಮೇಯರ್ ಚಿತ್ರದ ವಿವಾದ
ಏತನ್ಮಧ್ಯೆ ದಸರಾ ಪ್ರಯುಕ್ತ ನಗರದ ಸೌಂದರ್ಯ ಹೆಚ್ಚಿಸಲು ಪೇಂಟಿಂಗ್ಸ್ ಗಳನ್ನು ಮಾಡಲಾಗುತ್ತಿದೆ. ಆದರೆ ಮೇಯರ್ ಎಂ.ಜೆ.ರವಿಕುಮಾರ್ ಅವರು ಕುದುರೆಯ ಮೇಲೆ ಕುಳಿತ ಚಿತ್ರವನ್ನು ನಗರದಲ್ಲಿ ಒಂದು ಕಡೆ ಬರೆಯಲಾಗಿದ್ದು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ರಾಜ ಮಹಾರಾಜರದ್ದನ್ನು ಮಾತ್ರ ಈ ರೀತಿ ಚಿತ್ರ ಬರೆಯಲಾಗುತ್ತಿತ್ತು.

ಆದರೆ ಮೇಯರ್ ಅವರು ತಮ್ಮ ಚಿತ್ರವನ್ನು ಬರೆಸಿಕೊಂಡಿದ್ದಾರೆ. ಹಾಗೆ ಬರೆಯುವುದಿದ್ದರೆ ಜಿಲ್ಲಾ ಪಂಚಾಯತ್ ಅಧ್ಯಕ್ಷರೂ, ಆಯುಕ್ತ ಚಿತ್ರಗಳನ್ನು ಕೂಡಾ ಬರೆಯಬೇಕಿತ್ತು. ಅವರೂ ಕೂಡ ದಸರಾ ಜಂಬೂ ಸವಾರಿಯಲ್ಲಿ ಕುದುರೆ ಮೇಲೆ ಕುಳಿತು ಹೊರಡುತ್ತಾರೆ. ಈ ಕುರಿತು ಜಿಲ್ಲಾಡಳಿತ ಹಾಗೂ ಪಾಲಿಕೆಯ ಆಯುಕ್ತರು ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications