ಈದ್ ಸಾಮೂಹಿಕ ಪ್ರಾರ್ಥನೆಗೆ ಮನವಿ ಮಾಡಿದ ಮೈಸೂರು ಮೇಯರ್
ಮೈಸೂರು, ಮೇ 23; ಇಡೀ ದೇಶವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾವನ್ನು ಹೊಡೆದೋಡಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಜನರು ಒಂದೆಡೆ ಸೇರುವುದನ್ನು ತಪ್ಪಿಸಲೆಂದೇ ಭಾನುವಾರ ಕರ್ಫ್ಯೂ ವಿಧಿಸಲಾಗಿದೆ.
Recommended Video
ರಂಜಾನ್,ಹೊಸ ಬಟ್ಟೆ ಯಾವ್ದೂ ಬೇಡ,ದೇಶಕ್ಕಾಗಿ ತ್ಯಾಗ ಮಾಡಿ ಎಂದ ಮುಸ್ಲಿಂ ಮುಖಂಡ | Oneindia Kannada
ಎಲ್ಲ ಪ್ರಾರ್ಥನಾ ಮಂದಿರ, ಹೋಟೆಲ್, ಚಿತ್ರಮಂದಿರ, ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಆದರೆ ಇದೀಗ ಮೈಸೂರಿನ ಮೇಯರ್ ತಸ್ನೀಂ ಭಾನು ಅವರು ಸೋಮವಾರ ಈದ್ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಸೋಮವಾರ ರಂಜಾನ್ ಹಬ್ಬ ಇದೆ. ಈದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು. ಮೈಸೂರಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಆಯಾ ಭಾಗದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಭೀತಿಯ ಸಂದರ್ಭದಲ್ಲಿ ಮೇಯರ್ ಅವರು ಈ ರೀತಿಯ ಮನವಿ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.












Click it and Unblock the Notifications