MUDA Site: ಮುಡಾ ಸೈಟು ಹಂಚಿಕೆ ವಿವಾದ: ತನಿಖೆ ಆರಂಭಿಸಿದ ಸಮಿತಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ನಿವೇಶನ ಹಂಚಿಕೆ ವಿವಾದ ಇದೀಗ ರಾಜ್ಯದ ಗಮನ ಸೆಳೆದಿದೆ. ಅಕ್ರಮಗಳ ಕುರಿತಂತೆ ಸರಕಾರ ನೇಮಿಸಿರುವ ತನಿಖಾ ಸಮಿತಿ ಗುರುವಾರ ಮುಡಾ ಕಚೇರಿಗೆ ಆಗಮಿಸಿ ತನಿಖೆ ಆರಂಭಿಸಿದೆ.
ಮೊದಲ ದಿನವೇ ತನಿಖಾಧಿಕಾರಿಗಳು 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ವಿಚಾರ, ಹಲವು ಪ್ರಕರಣಗಳಲ್ಲಿ ಭೂ ಮಾಲೀಕರಿಗೆ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆ ಮಾಡಿರುವುದು ಸೇರಿದಂತೆ ಸದ್ಯ ಕೇಳಿಬಂದಿರುವ ಆರೋಪಗಳ ಕುರಿತು ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿದರು. ಕಡತಗಳಲ್ಲಿ ದಾಖಲಾಗಿರುವ ಮಾಹಿತಿಗಳ ವ್ಯತ್ಯಾಸಗಳ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮುಡಾ ಅಕ್ರಮಗಳ ಕುರಿತು ಪ್ರಾಧಿಕಾರಕ್ಕೆ ಬರೆದಿರುವ 15 ಪತ್ರಗಳಿಗೆ ಉತ್ತರ ನೀಡದಿರಲು ಕಾರಣವೇನು? ಜಿಲ್ಲಾಧಿಕಾರಿಗಳು ಎತ್ತಿರುವ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಈವರೆಗೆ ಏಕೆ ಸಾಧ್ಯವಾಗಿಲ್ಲ ಎಂಬುದರ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ತನಿಖಾ ಸಮಿತಿಯು ಅಧಿಕಾರಿಗಳಿಗೆ ತಾಕೀತು ಮಾಡಿದೆ.
ವಿಚಾರಣೆಗೆ ಬೇಕಾದ ಎಲ್ಲ ರೀತಿ ಕಡತಗಳನ್ನು ಒದಗಿಸಿಕೊಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಮುಡಾ ಕಚೇರಿಯಲ್ಲೇ ಉಳಿದುಕೊಂಡು ಕಡತಗಳನ್ನು ಪರಿಶೀಲಿಸಲಾಗಿದೆ. ಕ್ಷೇತ್ರ ಕಾರ್ಯಕ್ಕೆ ತೆರಳಿ ಪರಿಶೀಲಿಸಿಲ್ಲ. ಮುಡಾ ಅಕ್ರಮಗಳ ಕುರಿತು ಕಾಲಮಿತಿಯಲ್ಲಿ ವರದಿ ತಯಾರಿಸಬೇಕಿದೆ. ಗುರುವಾರವೂ ತನಿಖೆ ಮುಂದುವರಿಯುತ್ತದೆ. ತಂಡಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ನೂತನ ಮುಡಾ ಆಯುಕ್ತ ರಘುನಂದನ್ ತಿಳಿಸಿದ್ದಾರೆ.
ಮುಡಾ ಕಚೇರಿ ಮುತ್ತಿಗೆಗೆ ಯತ್ನ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಬಹುಕೋಟಿ ಹಗರಣ ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನಗರದ ಬಿಜೆಪಿ ಕಚೇರಿ ಬಳಿ ಸಮಾವೇಶಗೊಂಡ ಬಳಿಕ ಮುಡಾ ಕಚೇರಿಗೆ ಕಾಲ್ನಡಿಗೆಯಲ್ಲಿ ಸಾಗಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ರಾಮಸ್ವಾಮಿ ವೃತ್ತದ ಸಮೀಪವಿರುವ ಮಹಾರಾಜ ಹೋಟೆಲ್ ಬಳಿ ಪೊಲೀಸರು ತಡೆದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿ, ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಕಚೇರಿವರೆಗೆ ಕಾಲ್ನಡಿಗೆಯಲ್ಲಿ ತೆರಳಲು ಅವಕಾಶ ಕೊಡಿ ಎಂದು ಕೇಳಿದರೂ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದೊಯ್ದರು. ಬಳಿಕ ಡಿಆರ್ ಮೈದಾನದಲ್ಲಿ ಬಿಡುಗಡೆ ಮಾಡಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ರಾಮಸ್ವಾಮಿ ವೃತ್ತದಿಂದ ಮುಡಾ ಕಚೇರಿಗೆ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications