ಸ್ವಚ್ಛ ಸರ್ವೇಕ್ಷಣೆ ರಾಯಭಾರಕ್ಕೆ ಪ್ರಮೋದಾ ದೇವಿ ಒಡೆಯರ್ ಗೆ ಮನವಿ
ಮೈಸೂರು, ಡಿಸೆಂಬರ್ 27: ಮೈಸೂರು ಈ ಬಾರಿಯೂ ಸ್ವಚ್ಛ ನಗರಿ ಪಟ್ಟಕ್ಕೆ ಟೊಂಕಕಟ್ಟಿ ನಿಂತಿದೆ. ನಗರಪಾಲಿಕೆ ಸ್ವಚ್ಛ ಭಾರತ ಅಭಿಯಾನಕ್ಕೆ ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಮೈಸೂರು ಅರಮನೆಯಲ್ಲಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ಸ್ವಚ್ಛ ಸರ್ವೇಕ್ಷಣೆ ರಾಯಭಾರಿಗಳಾಗುವಂತೆ ಮನವಿ ಮಾಡಿದೆ.
ಈ ಸಂದರ್ಭ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಾತನಾಡಿ ಕೆಲವೇ ದಿನ ಗಳಲ್ಲಿ ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣೆ ಆರಂಭವಾಗಲಿದ್ದು, ಸಾರ್ವಜನಿಕರ ಸಹ ಭಾಗಿತ್ವ ತುಂಬಾ ಮುಖ್ಯವಾಗಿದೆ. ಮೈಸೂರನ್ನು ಮತ್ತೆ ನಂಬರ್ ವನ್ ಸ್ಥಾನಕ್ಕೆ ಕೊಂಡೊಯ್ಯಲು ಸಹರಿಸಬೇಕು ಎಂದು ಮನವಿ ಮಾಡಿದರು.
ಸ್ವಚ್ಛ ಸರ್ವೇಕ್ಷಣೆ ರಾಯಭಾರಿಯಾಗ ಬೇಕೆಂದು ಕೇಳಿದ್ದು, ನಾನು ಕೆಲವು ದಿನಗಳು ಮೈಸೂರಲ್ಲಿ ಇರುವುದಿಲ್ಲ. ನಾನು ರಾಯ ಭಾರಿ ಆಗಲಿ, ಆಗದಿರಲಿ. ನನಗೆ ಬೇರೆ ಊರುಗಳಿಗಿಂತ ಮೈಸೂರೆಂದರೆ ಹೆಚ್ಚು ಪ್ರೀತಿ. ಹಾಗಾಗಿ ಮೈಸೂರಿನ ಯಾವುದೇ ಕೆಲಸಕ್ಕಾದರೂ ಸಹಕಾರ ನೀಡಲು ಸಿದ್ಧವಿದ್ದೇನೆ ಎಂದು ಹೇಳಿದರು.

ನಗರಪಾಲಿಕೆ ಪ್ರತಿ ವರ್ಷವೂ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಆದರೆ, ಪ್ಲಾಸ್ಟಿಕ್ ಬಳಕೆ ಇನ್ನೂ ಕಡಿಮೆಯಾಗಿಲ್ಲ. ಸಾರ್ವಜನಿಕರು ಪ್ಲಾಸ್ಟಿಕ್ ಬಳಸುವುದನ್ನು ಬಿಟ್ಟು ಪೇಪರ್, ಬಟ್ಟೆ ಬ್ಯಾಗ್ಗಳನ್ನು ಉಪಯೋಗಿಸಬೇಕು ಎಂದರು.
ಮೇಯರ್ ಪುಷ್ಪಲತಾ ಜಗನ್ನಾಥ್ ಮಾತನಾಡಿ, 2020ರ ಜ.4ರಿಂದ ಸ್ವಚ್ಛ ಸರ್ವೇ ಕ್ಷಣೆ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು ರಾಜಮಾತೆ ಪ್ರಮೋದಾದೇವಿ ಒಡೆ ಯರ್ ಅವರನ್ನು ಭೇಟಿ ಮಾಡಿ ಸ್ವಚ್ಛ ಸರ್ವೇಕ್ಷಣೆ ರಾಯಭಾರಿಗಳಾಗುವಂತೆ ಮನವಿ ಮಾಡಿದ್ದೇವೆ. ಅವರು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಿ ಕಳೆದ ಬಾರಿಯಂತೆ ಸಹಕಾರ ನೀಡಬೇಕೆಂದು ಮನವಿ ಮಾಡಲಾಗುವುದು. ಕಳೆದ ಬಾರಿ ಸ್ವಚ್ಛತೆಯಲ್ಲಿ 3ನೇ ಸ್ಥಾನದಲ್ಲಿರುವ ಮೈಸೂರನ್ನು ಮೊದಲ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ (ರಮಣಿ), ಆರೋಗ್ಯಾಧಿಕಾರಿ ಗಳಾದ ಡಾ.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications