ಸಿಂಹ, ಸಿಂಗಳೀಕ, ಅನಕೊಂಡ ಮೈಸೂರು ಮೃಗಾಲಯದ ಹೊಸ ಅತಿಥಿಗಳು
ಮೈಸೂರಿನ ವಿಶ್ವವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಅತಿಥಿಗಳು ಸದ್ಯದಲ್ಲೇ ಆಗಮಿಸಲಿದ್ದಾರೆ. ಗುಜರಾತಿನಿಂದ ಸಿಂಹ, ಶ್ರೀಲಂಕಾದಿಂದ ಸಿಂಗಳೀಕ, ಅನಕೊಂಡ ಹಾವುಗಳು ಬರಲಿರುವ ಹೊಸ ಅತಿಥಿಗಳ ಪಟ್ಟಿಯಲ್ಲಿವೆ.
ಮೈಸೂರು, ಫೆಬ್ರವರಿ 7: ಮೈಸೂರಿನ ವಿಶ್ವವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಅತಿಥಿಗಳು ಸದ್ಯದಲ್ಲೇ ಆಗಮಿಸಲಿದ್ದಾರೆ. ಗುಜರಾತಿನಿಂದ ಸಿಂಹ, ಶ್ರೀಲಂಕಾದಿಂದ ಸಿಂಗಳೀಕ, ಅನಕೊಂಡ ಹಾವುಗಳು ಬರಲಿರುವ ಹೊಸ ಅತಿಥಿಗಳ ಪಟ್ಟಿಯಲ್ಲಿವೆ.
ಪ್ರಾಣಿಗಳ ವಿನಿಮಯ ಯೋಜನೆಯಡಿ ಹಲವು ಪ್ರಾಣಿಗಳನ್ನು ಮೃಗಾಲಯಕ್ಕೆ ಕರೆತರಲಾಗುತ್ತಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಕಮಲ ಕರಿಕಾಳನ್ ತಿಳಿಸಿದ್ದಾರೆ. ಗುಜರಾತಿನಿಂದ ಒಂದು ಸಿಂಹ, ತಮಿಳುನಾಡಿನಿಂದ ಎರಡು ಸಿಂಗಳೀಕ, ಶ್ರೀಲಂಕಾದಿಂದ 6 ಹಸಿರು ಅನಕೊಂಡ ಹಾವುಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.[ಮೈಸೂರು ಮೃಗಾಲಯ ಪ್ರವೇಶ ಮುಕ್ತ: ಹರಿದ ಜನಸಾಗರ]

ಇವುಗಳ ಜತೆಗೆ ಹಿಮಾಲಯನ್ ಕರಡಿ, ತೋಳ, ಕಪ್ಪು ಬಣ್ಣದ ಹಂಸ ಹಾಗೂ ಇತರೆ ಪಕ್ಷಿಗಳನ್ನು ಮೃಗಾಲಯಕ್ಕೆ ತರಲಿದ್ದಾರೆ. ಇದಕ್ಕಾಗಿ ಗುಜರಾತಿನ ಸಕ್ಕರ್ ಬಾಗ್ ಮೃಗಾಲಯದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಚೆನ್ನೈಗೆ ಸಮೀಪದಲ್ಲಿರುವ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಹೆಣ್ಣು ಮತ್ತು ಗಂಡು ಸಿಂಗಳೀಕಗಳನ್ನು, ಶ್ರೀಲಂಕದ ರಾಷ್ಟ್ರೀಯ ಮೃಗಾಲಯದಿಂದ ಅನಕೊಂಡಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.[ಫೆ.3 ರಿಂದ ಮೈಸೂರು ಮೃಗಾಲಯ ಪ್ರವೇಶ ಮುಕ್ತ]
ಇವುಗಳ ಬದಲಿಗೆ ಮೃಗಾಲಯವು ಕೃಷ್ಣ ಮೃಗಗಳನ್ನು ನೀಡಲಿದೆ. ಅಂದುಕೊಂಡಂತೆ ಆಗಿದ್ದರೆ ಹೊಸ ಅತಿಥಿಗಳು ಕಳೆದ ತಿಂಗಳೇ ಬರಬೇಕಾಗಿತ್ತು. ಆದರೆ ಹಕ್ಕಿ ಜ್ವರದ ಭೀತಿಯಿಂದಾಗಿ ಮೃಗಾಲಯ ಒಂದು ತಿಂಗಳ ಅವಧಿ ಮುಚ್ಚಿದ್ದರಿಂದ ಈಗ ಹೊಸ ಸ್ವಲ್ಪ ವಿಳಂಬವಾಗಿ ಪ್ರಾಣಿಗಳನ್ನು ಕರೆಸಿಕೊಳ್ಳಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಅನಕೊಂಡ ಹಾವುಗಳಿರುವ ಮೊದಲ ಮೃಗಾಲಯ ಶ್ರೀಚಾಮರಾಜೇಂದ್ರ ಮೃಗಾಲಯವಾಗಲಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications