ಎನ್ ಆರ್ ಐಗಳು ಕೃಷಿ ಭೂಮಿ ನುಂಗ್ತಾರೆ, ಹುಷಾರ್!
ಮೈಸೂರು, ಜು. 03: ಭಾರತದಲ್ಲಿ ಏನೂ ಬೇಕಾದರೂ ಮಾಡಬಹುದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದೇಶದ ಪ್ರಜೆ ಅಲ್ಲದವರು ನಕಲಿ ಆರ್ ಟಿಸಿ, ಆಧಾರ್ ಕಾರ್ಡ್ ಎಲ್ಲವನ್ನು ಪಡೆದುಕೊಂಡು ಜಮೀನು ಖರೀದಿ ಮಾಡುತ್ತಾರೆ. ಅದು ನಮ್ಮ ರಾಜ್ಯದಲ್ಲಿಯೇ!
ನಕಲಿ ದಾಖಲೆ ಸೃಷ್ಟಿ ಮಾಡಿ ಮೈಸೂರಿನ ಹೊರವಲಯದ ರಮ್ಮನಹಳ್ಳೀ ಬಳಿ ಭೂಮಿ ಖರೀದಿ ಮಾಡಿದ್ದ ಎನ್ ಆರ್ ಐ ಒಬ್ಬರನ್ನು ಮೈಸೂರು ನಜರ್ ಬಾದ್ ಪೊಲೀಸರು ಬಂಧಿಸಿದ್ದಾರೆ.[ಕಳೆದ 59 ವರ್ಷಗಳಿಂದ ಇಲ್ಲಿ 'ಕಾಂಗ್ರೆಸ್' ನದ್ದೇ ಆಡಳಿತ!]

ಅಮೆರಿಕ ನಿವಾಸಿ ತಿಮೋತಿ ಜಾನ್ ಎಂಬುವರನ್ನು ಬಂಧಿಸಲಾಗಿದೆ. ರಮ್ಮನಹಳ್ಳಿ ಬಳಿ ಸುಮಾರಿ 2 ಕೋಟಿ ಮೌಲ್ಯದ ಜಮೀನು ಖರೀದಿ ಮಾಡಿದ್ದರು. ಅಲ್ಲದೇ ನಕಲಿ ಆಧಾರ್ ಕಾರ್ಡ್ ಸಹ ಹಾಜರುಪಡಿಸಿದ್ದರು.
ನಕಲಿ ದಾಖಲೆ ಸೃಷ್ಟಿಗೆ ಸಹಕಾರ ನೀಡಿದ ಆರೋಪದಲ್ಲಿ ಕಂದಾಯ ನಿರೀಕ್ಷಕರನ್ನು ಅವರನ್ನು ಅಮಾನತು ಮಾಡಲಾಗಿದೆ. ಆರ್ ಟಿಐ ಕಾರ್ಯಕರ್ತ ನಾಗೇಂದ್ರ ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಪಡೆದುಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಮೀನು ಖರೀದಿ ಮಾಡಲು ಆಗಮಿಸಿದ ಜಾನ್ ಅಮೆರಿಕದ ಪ್ರಜೆಯಾಗಿದ್ದರಿಂದ ಅದು ಸಾಧ್ಯವಿಲ್ಲ ಎಂದು ಮನಗಂಡರು. ನಂತರ ಕಂದಾಯ ಇಲಾಖೆ ಅಧಿಕಾರಿಗಳ ನೆರವು ಪಡೆದುಕೊಂಡು ನಕಲಿ ಸೃಷ್ಟಿ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣ ಕಂದಾಯ ಇಲಾಖೆ ಕಚೇರಿಗೆ ನಕಲಿ ಆರ್ ಟಿಸಿಯನ್ನು ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರಿನಲ್ಲಿ ಹುಟ್ಟಿದ್ದ ತಿಮೋತಿ ಜಾನ್ ಅಮೆರಿಕದಲ್ಲಿ ವಾಸವಿದ್ದ. ಆದರೆ ಭಾರತದಲ್ಲಿ ಕೃಷಿ ಜಮೀನು ಕೊಳ್ಳಲು ಮುಂದಾಗಿದ್ದ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications