ಎನ್ ಆರ್ ಐಗಳು ಕೃಷಿ ಭೂಮಿ ನುಂಗ್ತಾರೆ, ಹುಷಾರ್!
ಮೈಸೂರು, ಜು. 03: ಭಾರತದಲ್ಲಿ ಏನೂ ಬೇಕಾದರೂ ಮಾಡಬಹುದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದೇಶದ ಪ್ರಜೆ ಅಲ್ಲದವರು ನಕಲಿ ಆರ್ ಟಿಸಿ, ಆಧಾರ್ ಕಾರ್ಡ್ ಎಲ್ಲವನ್ನು ಪಡೆದುಕೊಂಡು ಜಮೀನು ಖರೀದಿ ಮಾಡುತ್ತಾರೆ. ಅದು ನಮ್ಮ ರಾಜ್ಯದಲ್ಲಿಯೇ!
ನಕಲಿ ದಾಖಲೆ ಸೃಷ್ಟಿ ಮಾಡಿ ಮೈಸೂರಿನ ಹೊರವಲಯದ ರಮ್ಮನಹಳ್ಳೀ ಬಳಿ ಭೂಮಿ ಖರೀದಿ ಮಾಡಿದ್ದ ಎನ್ ಆರ್ ಐ ಒಬ್ಬರನ್ನು ಮೈಸೂರು ನಜರ್ ಬಾದ್ ಪೊಲೀಸರು ಬಂಧಿಸಿದ್ದಾರೆ.[ಕಳೆದ 59 ವರ್ಷಗಳಿಂದ ಇಲ್ಲಿ 'ಕಾಂಗ್ರೆಸ್' ನದ್ದೇ ಆಡಳಿತ!]

ಅಮೆರಿಕ ನಿವಾಸಿ ತಿಮೋತಿ ಜಾನ್ ಎಂಬುವರನ್ನು ಬಂಧಿಸಲಾಗಿದೆ. ರಮ್ಮನಹಳ್ಳಿ ಬಳಿ ಸುಮಾರಿ 2 ಕೋಟಿ ಮೌಲ್ಯದ ಜಮೀನು ಖರೀದಿ ಮಾಡಿದ್ದರು. ಅಲ್ಲದೇ ನಕಲಿ ಆಧಾರ್ ಕಾರ್ಡ್ ಸಹ ಹಾಜರುಪಡಿಸಿದ್ದರು.
ನಕಲಿ ದಾಖಲೆ ಸೃಷ್ಟಿಗೆ ಸಹಕಾರ ನೀಡಿದ ಆರೋಪದಲ್ಲಿ ಕಂದಾಯ ನಿರೀಕ್ಷಕರನ್ನು ಅವರನ್ನು ಅಮಾನತು ಮಾಡಲಾಗಿದೆ. ಆರ್ ಟಿಐ ಕಾರ್ಯಕರ್ತ ನಾಗೇಂದ್ರ ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಪಡೆದುಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಮೀನು ಖರೀದಿ ಮಾಡಲು ಆಗಮಿಸಿದ ಜಾನ್ ಅಮೆರಿಕದ ಪ್ರಜೆಯಾಗಿದ್ದರಿಂದ ಅದು ಸಾಧ್ಯವಿಲ್ಲ ಎಂದು ಮನಗಂಡರು. ನಂತರ ಕಂದಾಯ ಇಲಾಖೆ ಅಧಿಕಾರಿಗಳ ನೆರವು ಪಡೆದುಕೊಂಡು ನಕಲಿ ಸೃಷ್ಟಿ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣ ಕಂದಾಯ ಇಲಾಖೆ ಕಚೇರಿಗೆ ನಕಲಿ ಆರ್ ಟಿಸಿಯನ್ನು ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರಿನಲ್ಲಿ ಹುಟ್ಟಿದ್ದ ತಿಮೋತಿ ಜಾನ್ ಅಮೆರಿಕದಲ್ಲಿ ವಾಸವಿದ್ದ. ಆದರೆ ಭಾರತದಲ್ಲಿ ಕೃಷಿ ಜಮೀನು ಕೊಳ್ಳಲು ಮುಂದಾಗಿದ್ದ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications