ಕ್ಷಣಾರ್ಧದಲ್ಲಿ ಮೈಸೂರು ಪಾಕ್ ಗಬಗಬನೆ ತಿಂದ ಭೂಪ
ಮೈಸೂರು, ಸೆಪ್ಟೆಂಬರ್ 23 : ಬಾಯಿಯಲ್ಲಿ ನೀರೂರಿಸುವ ಮೈಸೂರು ಪಾಕ್ ತಿಂದ ಕಾಲೇಜು ಯುವಕರು ನಗದು ಬಹುಮಾನ ಸಹ ಪಡೆದರು. ದಸರಾ ನವರಾತ್ರಿಯ ಅಂಗವಾಗಿ ಜೆ.ಕೆ.ಮೈದಾನದ ಆಹಾರ ಮೇಳದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮೈಸೂರು ಪಾಕ್ ತಿನ್ನುವ ಸ್ಪರ್ಧೆಗೆ ಆಭೂತಪೂರ್ವ ಸ್ಪಂದನೆ ದೊರೆಯಿತು.
6 ಮೈಸೂರು ಪಾಕ್ ತಿಂದು ನೀರು ಕುಡಿದ ಸ್ಪರ್ಧಾಳುಗಳು ಪ್ರೇಕ್ಷಕರಿಂದ ಚಪ್ಪಾಳೆಯ ಬಹುಮಾನ ಗಿಟ್ಟಿಸಿಕೊಂಡರು. ದಸರಾ ಮಹೋತ್ಸವದ ಆಹಾರ ಮೇಳದಲ್ಲಿ ಮೈಸೂರು ಪಾಕ್ ತಿನ್ನುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಗಬಗಬನೆ ತಿಂದು ಬಹುಮಾನಕ್ಕೆ ಪಾತ್ರರಾದರು.

ಶುಕ್ರವಾರ ನಡೆದ ಉಪ್ಪಿಟ್ಟು ತಿನ್ನುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಕ್ಕೆ ಪಾತ್ರರಾಗಿದ್ದ ಮಹಾರಾಜ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ಬಾಬುರಾಯನ ಕೊಪ್ಪಲಿನ ಕೌಶಿಕ್ ಮೈಸೂರು ಪಾಕ್ ತಿನ್ನುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು, ವಿಜಯ ಯಾತ್ರೆಯನ್ನು ಮುಂದುವರಿಸಿದರು. 5 ನಿಮಿಷಗಳಲ್ಲಿ 6 ಪೀಸ್ ಮೈಸೂರು ಪಾಕ್ ತಿನ್ನಬೇಕಿದ್ದ ಸ್ಪರ್ಧೆಯಲ್ಲಿ, ಕೇವಲ 1 ನಿಮಿಷ 38 ಸೆಕೆಂಡ್ಗಳಲ್ಲಿ ತಿನ್ನುವ ಮೂಲಕ ಗೆಲುವಿನ ಹಸಿವನ್ನು ನೀಗಿಸಿಕೊಂಡನು.

ಆದರ್ಶ ಅತ್ತೆ - ಸೊಸೆ ಸ್ಪರ್ಧೆ
ನಗರದ ಜೆ.ಕೆ ಮೈದಾನದಲ್ಲಿ 20 ಕ್ಕೂ ಹೆಚ್ಚು ಅತ್ತೆ-ಸೊಸೆಯರು ಸ್ಪರ್ಧೆಯಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅತ್ತೆ-ಸೊಸೆಯರಿಗೆ ಸಂಗೀತ, ನೃತ್ಯ, ನಟನೆ ಮತ್ತು ಇನ್ನಿತರೆ ಸ್ಪರ್ಧೆಗಳನ್ನ ಸಹ ಏರ್ಪಡಿಸಲಾಗಿತ್ತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications