ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಭಕ್ತಿಭಾವದ ವೈಕುಂಠ ಏಕಾದಶಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 6: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಮೈಸೂರಿನಲ್ಲಿಯೂ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿತ್ತು. ವೆಂಕಟರಮಣ ದೇಗುಲಗಳಲ್ಲಿ, ಲಕ್ಷ್ಮಿ ನರಸಿಂಹ, ಯೋಗಾ ನರಸಿಂಹ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ವೈಕುಂಠ ಏಕಾದಶಿ, ಮೋಕ್ಷಕ್ಕಾಗಿ ಪ್ರಾರ್ಥಿಸುವ ದಿನ: ದೇಗುಲಗಳ ವಿಶೇಷ ವೈಕುಂಠ ಏಕಾದಶಿ, ಮೋಕ್ಷಕ್ಕಾಗಿ ಪ್ರಾರ್ಥಿಸುವ ದಿನ: ದೇಗುಲಗಳ ವಿಶೇಷ

Mysuru People Celebrate Vaikunta Ekadashi

ಟಿ.ನರಸೀಪುರದ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರ ಹರಿದುಬಂದಿದ್ದು, ವಿವಿಧ ಪುಷ್ಪಾಲಂಕಾರದಿಂದ ಶ್ರೀ ಗುಂಜಾನರಸಿಂಹ ಸ್ವಾಮಿ ಕಂಗೊಳಿಸುತ್ತಿದ್ದಾನೆ. ಬ್ರಾಹ್ಮಿ ಮುಹೂರ್ತದಲ್ಲಿ ದೇವಸ್ಥಾನದಲ್ಲಿ ನಿರ್ಮಿಸಲಾದ ಸ್ವರ್ಗದ ಬಾಗಿಲನ್ನು ಸಹಸ್ರಾರು ಭಕ್ತರು ಪ್ರವೇಶ ಮಾಡಿದ್ದಾರೆ. ಈ ಬಾಗಿಲನ್ನು ಪ್ರವೇಶ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗಲಿದೆ ಎನ್ನುವುದು ಭಕ್ತರ ನಂಬಿಕೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಲಡ್ಡು ವಿತರಿಸಲಾಗುತ್ತಿದೆ. ವಿಷ್ಣು ಸಹಸ್ರ ನಾಮ ಚಾರಿಟಬಲ್ ಟ್ರಸ್ಟ್ ಸದಸ್ಯರು ಲಡ್ಡು ವಿತರಿಸುತ್ತಿದ್ದಾರೆ. ವಿಶೇಷ ಪೂಜೆ ಪುನಸ್ಕಾರದಿಂದ ದೇಗುಲದಲ್ಲಿ ಸಂಭ್ರಮ ಮನೆ ಮಾಡಿದೆ

ವೈಕುಂಠ ಏಕಾದಶಿಯ ದಿನ ಬಹಳಷ್ಟು ಭಕ್ತರು ಉಪವಾಸವಿದ್ದು, ದೇವರ ಪೂಜೆ ಕೈಗೊಳ್ಳುತ್ತಾರೆ.

English summary
special worship was held in various temples in Mysuru on behalf of Vaikuntha Ekadashi.Venkataramana, Lakshmi Narasimha and Yoga Narasimha temples performed special puja,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X