ಕುಮಾರಸ್ವಾಮಿ ಬಜೆಟ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತಪಡಿಸಿದ ಮೈಸೂರಿಗರು
ಮೈಸೂರು, ಫೆಬ್ರವರಿ 8: 3 ಗಂಟೆಯ ಸುದೀರ್ಘ ಅವಧಿಯ ಬಜೆಟ್ ಗೆ ಮೈಸೂರಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮೈಸೂರಿಗರ ಬಹುನಿರೀಕ್ಷಿತ ಕನಸಾಗಿದ್ದ ಡಬ್ಬಲ್ ಡೆಕ್ಕರ್ ಬಸ್ ಸೇವೆಗೆ 5 ಕೋಟಿ ಮೀಸಲಿಟ್ಟಿದ್ದು, ಸಾಂಸ್ಕೃತಿಕ ನಗರಿ ಮಂದಿಗೆ ಸಂತಸ ತಂದಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್ ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಾಯಕವಾಗಿದೆ.
ಸಾಲಮನ್ನಾ ಕುರಿತಾಗಿ ಕೆಲ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ಕುಟುಂಬದಲ್ಲಿ ಒಬ್ಬರ ಸಾಲಮನ್ನಾ ಮಾಡಲು ಮೈತ್ರಿ ಸರ್ಕಾರ ಮುಂದಾಗಿದೆ. ಆದರೆ ನಮ್ಮ ಕುಟುಂಬದಲ್ಲೇ ಇಬ್ಬರು ಮೂವರು ಸಾಲ ಮಾಡಿದ್ದೇವೆ. ಅದು ಬೆಳೆ ಬೆಳೆಯಲು , ಅದಕ್ಕೆ ಏನು ಮಾಡಬೇಕು ಹೇಳಿ ? ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದು ರೈತರ ವಿಚಾರವಾದರೆ ಇತ್ತ ಮಂಡ್ಯ ಸೇರಿದಂತೆ ಮೈಸೂರಿಗೂ ಸೇರಿ ಜಲಧಾರಾ ಯೋಜನೆಗೆ 4 ಸಾವಿರ ಕೋಟಿ ಯೋಜನೆಗೆ ತೆಗೆದಿರಸಲಾಗಿದೆ. ಇದು ಮೈಸೂರಿನ ಕೆಲವು ಭಾಗಕ್ಕೂ ಸಹ ಸಹಕಾರಿಯಾಗಲಿದೆ.

ಹೊಸ ಕೊಡುಗೆಗಳನ್ನೇನೂ ಕೊಟ್ಟಿಲ್ಲ
ಮೈಸೂರಿಗೆ ಈ ಬಾರಿ ಒಟ್ಟಾರೆ ಬಜೆಟ್ ನಲ್ಲಿ 150 ಕೋಟಿ ರೂ. ಘೋಷಣೆ ಮಾಡಲಾಗಿದೆ.ಮೆಟ್ರೋ ರೈಲು ಯೋಜನೆಯ ಸಾಧ್ಯತಾ ವರದಿ ತಯಾರಿಕೆ ಅಸ್ತು ಎನ್ನಲಾಗಿದೆ. ಭಾಷಾ ಕೌಶಲ್ಯ ತರಬೇತಿಗೆ ಅನುದಾನ, ಮೈಸೂರು ಸೇರಿದಂತೆ 4 ಜಿಲ್ಲೆಗಳಲ್ಲಿ ವಿಭಾಗಮಟ್ಟದ ತರಬೇತಿ ಕೇಂದ್ರ ಸ್ಥಾಪನೆ, ಜೆ ಎಸ್ ಎಸ್ ಪ್ರಾಯೋಜಕತ್ವದಲ್ಲಿ ಅರ್ಬನ್ ಹಾತ್ ಗೆ 5 ಕೋಟಿ ಅನುದಾನ, ಡಬ್ಬಲ್ ಡಕ್ಕರ್ ಸೇವೆಗೆ 5 ಕೋಟಿ ಮೀಸಲಿಟ್ಟಿದ್ದು ಹೊರತು ಪಡಿಸಿದರೆ ಹೊಸ ಅಭಿವೃದ್ಧಿಕಾರಕ ಕೊಡುಗೆಗಳನ್ನೇನೂ ಕೊಟ್ಟಿಲ್ಲ.

ಮೈಸೂರು ಮೇಯರ್ ಪ್ರತಿಕ್ರಿಯೆ
ಮೈಸೂರು ಮಹಾನಗರ ಪಾಲಿಕೆಗೆ ಈ ಹಿಂದೆ ಯಡಿಯೂರಪ್ಪ ಅವರ ಅವಧಿಯಿಂದ ಅಭಿವೃದ್ಧಿಗಾಗಿ 100 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ಈ ಬಾರಿ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಅದರ ಪ್ರಮಾಣವನ್ನು 50 ಕೋಟಿ ಏರಿಸಿದ್ದಾರೆ. ಅಂದರೆ ಸದ್ಯ 150 ಕೋಟಿ ಅನುದಾನ ಮೈಸೂರಿಗರಿಗೆ ದೊರಕಿದೆ. ಇದೊಂದು ಸಂತಸದಾಯಕ ವಿಷಯ ಎಂದು ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ತಿಳಿಸಿದ್ದಾರೆ.

ಕುರುಬೂರು ಶಾಂತಕುಮಾರ್ ಅನಿಸಿಕೆ
ಇನ್ನು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ , ಸಮ್ಮಿಶ್ರ ಸರ್ಕಾರ ಮಂಡಿಸಿರುವ ಬಜೆಟ್ ಸಿಹಿನೂ ಅಲ್ಲ, ಕಹಿನೂ ಅಲ್ಲ. ಬಜೆಟ್ನಲ್ಲಿ ಸಮರ್ಪಕವಾಗಿ ಅನುದಾನ ನೀಡಿಲ್ಲ ಎಂದರು.

ಹಲವು ರೈತರ ಸಾಲ ಮನ್ನಾ ಆಗಿಲ್ಲ
ಕಳೆದ ಬಾರಿಯೇ ರೈತರು ಸಾಲಮನ್ನಾ ಮಾಡುತ್ತೇವೆ ಎಂದು ಹೇಳಿ ಷರತ್ತುಗಳನ್ನು ವಿಧಿಸಿದರು. ಆದರೆ ಇಂದಿಗೂ ಹಲವು ರೈತರ ಸಾಲ ಮನ್ನಾ ಆಗಿಲ್ಲ. ಲೋಕಸಭಾ ಚುನಾವಣೆ ದೃಷ್ಠಿಕೋನದಿಂದ ಬಜೆಟ್ ಮಂಡಿಸಿದ್ದಾರೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.
ಒಟ್ಟಾರೆಯಾಗಿ ಮೈಸೂರು ಜನರು ಈ ಬಾರಿಯ ಬಜೆಟ್ ಅನ್ನು ಸಮಾಧಾನಕಾರ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಅಷ್ಟೇ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications