ರಸ್ತೆ ಬದಿಯಲ್ಲಿ ಮೂತ್ರ ಮಾಡಿದವರಿಗೆ ಹೂವಿನ ಹಾರ ಹಾಕಿ ಸನ್ಮಾನ!
Recommended Video

ಮೈಸೂರು, ನವೆಂಬರ್ 2: ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಎಷ್ಟು ಬೊಬ್ಬೆ ಹೊಡೆದರೂ, ದಂಡ ವಿಧಿಸಿದರೂ ನಮ್ಮ ಜನ ಕ್ಯಾರೇ ಅನ್ನುತ್ತಿಲ್ಲ. ಸುಲಭ ಶೌಚಾಲಯದ ವ್ಯವಸ್ಥೆಯಿದ್ದರೂ ನಮ್ಮ ಮಂದಿ ಅದರ ಬಗ್ಗೆ ಅರಿವೇ ಇಲ್ಲವೇನೂ ಎಂಬಂತೆ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಲೇ ಇರುತ್ತಾರೆ.
ಇಂತಹವರಿಗೆ ತಕ್ಕ ಶಾಸ್ತಿ ಮಾಡಲು ಮೈಸೂರಿನ ಯುವ ಭಾರತ್ ಸಂಘಟನೆ ಇಂದು ಹೊಸ ಪ್ಲಾನ್ ಹಾಕಿತ್ತು. ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವವರಿಗೆ ಸನ್ಮಾನ ಮಾಡಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಅರಿವು ಮೂಡಿಸಲಾಯಿತು.

ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ರಘಲಾಲ್ ಮೆಡಿಕಲ್ ಸ್ಟೋರ್ ನ ಮುಂಭಾಗ ತಗಡು ಶೀಟ್ ಗಳ ಸುತ್ತಲೂ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸಾರ್ವಜನಿಕರಿಗೆ ಹೂವಿನ ಹಾರ ಹಾಕಿ, ನಿಂಬೆಹಣ್ಣು ನೀಡಿ, ಗುಲಾಬಿ ಹೂ ಕೊಟ್ಟು ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ನಂತರ ಮಾತನಾಡಿದ ಸಂಘಟನೆಯ ಸಂಚಾಲಕ ಜೋಗಿ ಮಂಜು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅನೇಕ ಕಲ್ಪನೆಗಳಲ್ಲಿ ಬಯಲು ಮುಕ್ತ ಶೌಚಾಲಯವೂ ಒಂದು. ಸಾರ್ವಜನಿಕರು ರಸ್ತೆ ಬದಿಯಲ್ಲಿ ಈ ರೀತಿ ಮೂತ್ರ ವಿಸರ್ಜನೆ ಮಾಡುವುದರಿಂದ ಸ್ವಚ್ಛತೆ ಹದಗೆಡುತ್ತದೆ. ಇದನ್ನು ಸಾರ್ವಜನಿಕರಾದ ನಾವು ಅರಿತು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡದೆ ಸ್ವಚ್ಛತೆಯನ್ನು ಕಾಪಾಡಿ ಮೈಸೂರು ನಗರ ಸ್ವಚ್ಛ ನಗರಿ ಬಿರುದನ್ನು ಪಡೆದುಕೊಳ್ಳುವಂತೆ ಮಾಡಬೇಕು ಎಂದು ಹೇಳಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications