ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವಿವಿ ಪರೀಕ್ಷೆ ಮುಂದೂಡಿಕೆ
ಮೈಸೂರು, ನವೆಂಬರ್ 15: ಮೈಸೂರಿನಲ್ಲಿ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ತಿಳಿಸಿದ್ದಾರೆ.
ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗಲಾರದು. ಅದರಿಂದ ಸಾಹಿತ್ಯ ಸಮ್ಮೇಳನದ ಸಮಯದಲ್ಲಿ ಪರೀಕ್ಷೆ ಮುಂದೂಡುವಂತೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ. ನ.24,25,26 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಸಮ್ಮೇಳನ ನಡೆಯುವುದುರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಕಾಲೇಜುಗಳಲ್ಲಿ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳೂ ಕೂಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅನುವು ಮಾಡಿಕೊಡಬೇಕೆಂದು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳಿಂದ ಕಸರತ್ತು
ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನ ಇಲ್ಲಿನ ಅರಮನೆ ಆವರಣದಲ್ಲಿ ನ.20ರಂದು ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಕಸರತ್ತುಗಳು ನಡೆಯಲಿವೆ.
ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು 'ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನ' ಇಲ್ಲವೇ 'ರಾಮಾಯಣ ದರ್ಶನಂ-50' ಎಂದು ಅಕ್ಷರಗಳಲ್ಲಿ ವಿನ್ಯಾಸ ರೂಪಿಸಲಿದ್ದಾರೆ. ಕುವೆಂಪು ಅವರ 'ರಾಮಾಯಣ ದರ್ಶನಂ' ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆತು ಈಗ 50 ವರ್ಷಗಳಾಗಿವೆ. ಹೀಗಾಗಿ, 'ರಾಮಾಯಣ ದರ್ಶನಂ-50' ಎಂದು ಅಕ್ಷರಗಳಲ್ಲಿ ವಿನ್ಯಾಸ ರೂಪಿಸುವ ಉದ್ದೇಶ ಜಿಲ್ಲಾಡಳಿತಕ್ಕೆ ಇದೆ. ಇದನ್ನು ಡ್ರೋಣ್ ನೆರವಿನಿಂದ ಫೋಟೋ ತೆಗೆಯಲಾಗುವುದು.
ಸಮ್ಮೇಳನದ ಸ್ಥಳದ ಮೇಲೆ ಬಲೂನ್
ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಇಲ್ಲಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸೋಮವಾರ ರಾತ್ರಿ ಬೃಹತ್ ಬಲೂನ್ ಅನ್ನು ಹಾರಿ ಬಿಡಲಾಗಿದೆ.
ಈ ಬಲೂನ್ಗೆ ಸುಮಾರು 50 ಸಾವಿರ ರೂ.ವೆಚ್ಚವಾಗಿದೆ. ಎರಡು ದಿನಕ್ಕೊಮ್ಮೆ ಈ ಬಲೂನ್ ಕೆಳಗಿಳಿಸಿ ಮತ್ತೆ ಗಾಳಿ ತುಂಬಿ ಹಾರಿ ಬಿಡಲಾಗುತ್ತದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ್ ತಿಳಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications