ಕ್ಲಬ್ ಹೆಸರಿನಲ್ಲಿ ಜೂಜು ದಂಧೆ: ಮೈಸೂರಿನಲ್ಲಿ 37 ಮಂದಿ ಬಂಧನ
ಮೈಸೂರು, ಜುಲೈ 20: ಕ್ಲಬ್ ಹೆಸರಿನಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 37 ಮಂದಿಯನ್ನು ಮೈಸೂರು ಸಿಸಿಬಿ ಮತ್ತು ದೇವರಾಜ ಠಾಣಾ ಪೊಲೀಸರು ಕಳೆದ ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು: ಮುಂಚಿತವಾಗಿ ತೆರೆವ ಬಾರ್ ಮೇಲೆ ಅಧಿಕಾರಿಗಳ ದಾಳಿ
ಬಂಧಿತರಿಂದ 1,51,630 ರೂ. ನಗದು ಹಣ, 33 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕೆ.ಆರ್. ಸರ್ಕಲ್ನಲ್ಲಿರುವ ವಿಶ್ವೇಶ್ವರಯ್ಯ ಕಟ್ಟಡದಲ್ಲಿನ 2ನೇ ಮಹಡಿಯಲ್ಲಿರುವ ನ್ಯೂ ಮಾಡರ್ನ್ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಕ್ಲಬ್ ಅಧ್ಯಕ್ಷರಾದ ಆನಂದ್ ಹಾಗೂ ಎಂ.ಎಲ್. ರಾಮಲಿಂಗಯ್ಯ ಸೇರಿದಂತೆ 37 ಮಂದಿಯನ್ನು ಬಂಧಿಸಿದ್ದಾರೆ.

ಆನಂದ್ ಮತ್ತು ರಾಮಲಿಂಗಯ್ಯ ಅವರು ಕ್ಲಬ್ ನ ನಿಯಮಾವಳಿಗಳನ್ನು ಉಲ್ಲಂಘಿಸಿ ಸದಸ್ಯರಲ್ಲದವರಿಗೆ ಕ್ಲಬ್ ಗೆ ಪ್ರವೇಶ ನೀಡಿದ್ದರು. ಕ್ಲಬ್ ಗೆ ಬರುವ ಇತರರಿಂದಲೂ ಹಣವನ್ನು ಗೆಲ್ಲಬಹುದೆಂಬ ಅಮಿಷವೊಡ್ಡಿ ಅವರಿಂದ ಹಣವನ್ನು ಪಡೆದು ಜೂಜಾಟ ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರೋರಾತ್ರಿ ಮಳಿಗೆಗೆ ಕನ್ನ
ಜುಲೈ 19 ರ ರಾತ್ರಿ ಮೈಸೂರಿನ ಅಶೋಕರಸ್ತೆಯಲ್ಲಿರುವ ಡರ್ಲಾ ಸೆರಾಮಿಕ್ಸ್ ಮಳಿಗೆಗೆ ನುಗ್ಗಿದ ಕಳ್ಳರು 2 ಲಕ್ಷ ರೂಪಾಯಿಯನ್ನು ಲಪಟಾಯಿಸಿದ್ದಾರೆ.
ಮಳಿಗೆಯ ಕಟ್ಟಡದ ಮೇಲ್ಛಾವಣಿ ಬಳಿಯಿಂದ ಇಳಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನಲ್ಲಿದ್ದ ಎರಡು ಲಕ್ಷ ರೂ. ಕದ್ದೊಯ್ದಿದ್ದು, ಗುರುವಾರ ಬೆಳಿಗ್ಗೆ ಮಳಿಗೆಯ ಬಾಗಿಲು ತೆರದಾಗ ಮಾಲೀಕರ ಗಮನಕ್ಕೆ ಬಂದಿದೆ.
ಮೇಲಿನಿಂದ ಇಳಿದು ಬರಲಾಗುತ್ತದೆ ಎಂದು ಯಾರಿಗೂ ತಿಳಿದಿರಲಿಲ್ಲ.
ಈ ಕೃತ್ಯವನ್ನು ಯಾರೋ ತಿಳಿದವರೇ ಮಾಡಿರಬೇಕೆಂಬ ಶಂಕೆಯನ್ನು ಮಾಲೀಕರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಲಷ್ಕರ್ ಠಾಣೆಯ ಇನ್ಸಪೆಕ್ಟರ್ ಭೇಟಿ ನೀಡಿದ್ದು, ಬೆರಳಚ್ಚು ಮತ್ತು ಶ್ವಾನದಳ ದ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications