ವಿವಾದಾತ್ಮಕ ಹೇಳಿಕೆ ನೀಡದಂತೆ ಭಗವಾನ್ ಗೆ ವಾರ್ನ್ ಮಾಡಿದ ಪೊಲೀಸರು
ಮೈಸೂರು, ಜನವರಿ 3: ಮೈಸೂರಿನಲ್ಲಿ ಕಳೆದೊಂದು ವಾರದಿಂದಲೂ ಕೇಳಿಬರುತ್ತಿರುವ ಚರ್ಚೆ ಭಗವಾನ್ ರವರದ್ದು. 'ರಾಮಮಂದಿರ ಏಕೆ ಬೇಡ?' ಎಂಬ ಪುಸ್ತಕದಲ್ಲಿ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಭಗವಾನ್ ಗೆ ವಿವಾದಾತ್ಮಕ ಹೇಳಿಕೆ ನೀಡದಂತೆ ವಾರ್ನ್ ಮಾಡಿದ್ದಾರೆ.
ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡುವುದಾಗಲಿ, ಮಾಧ್ಯಮಗಳಿಗೆ ಸಂದರ್ಶನ ನೀಡುವುದಾಗಲಿ ಮಾಡದಂತೆ ಮೈಸೂರು ನಗರ ಪೊಲೀಸ್ ಆಯುಕ್ತರು ಭಗವಾನ್ ಗೆ ಮೌಖಿಕವಾಗಿ ಆದೇಶ ನೀಡಿದ್ದಾರೆ.
ಮಾಧ್ಯಮಗಳು ಭಗವಾನ್ ಸಂದರ್ಶನಕ್ಕೆ ಹೋದಾಗ ಅಲ್ಲಿದ್ದ ಪೊಲೀಸರೂ ಯಾವುದೇ ರೀತಿಯ ಸಂದರ್ಶನ ನೀಡದಂತೆ ನಿರ್ಬಂಧ ವಿಧಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕುವೆಂಪುನಗರ ಪೊಲೀಸರು ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ಎಫ್ಐಅರ್ ದಾಖಲಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುವೆಂಪುನಗರದಲ್ಲಿರುವ ಭಗವಾನ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೆ ಅವರ ಮನೆಯಲ್ಲಿದ್ದ ಹಳೆಯ ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆದು ನಾಲ್ಕು ಹೊಸ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಮತ್ತೊಂದು ಸಿಸಿ ಕ್ಯಾಮೆರಾ ಮನೆಯ ಒಳಗೆ ಹಾಕಲಾಗಿದ್ದು, ಇನ್ನೆರೆಡು ಕ್ಯಾಮೆರಾಗಳನ್ನು ಮನೆಯ ಮೇಲ್ಭಾಗ ಅಳವಡಿಸಲಾಗಿದೆ. ಈ ಎಲ್ಲಾ ಸಿಸಿ ಟಿವಿಗಳ ಕಂಟ್ರೋಲ್ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಸಂಪರ್ಕವಿದೆ. ಈ ಮೂಲಕ ಭಗವಾನ್ ಮನೆಯ ಮುಂಭಾಗದ ಪ್ರಮುಖ ರಸ್ತೆಯ ಸುತ್ತಮುತ್ತಲಿನ ಪ್ರದೇಶವನ್ನು ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿಡಲಾಗಿದೆ.

ಸಶಸ್ತ್ರ ಮೀಸಲು ಪಡೆಯ ಮೂವರು ಪೊಲೀಸರು ಮತ್ತು ಓರ್ವ ಪೊಲೀಸ್ ಅಧಿಕಾರಿ ಭಗವಾನ್ ಮನೆಯನ್ನು ಕಾಯುತ್ತಿದ್ದಾರೆ. ಜೊತೆಗೆ ಭಗವಾನ್ ಹೋದ ಬಂದ ಕಡೆಯೆಲ್ಲಾ ಓರ್ವ ಗನ್ ಮ್ಯಾನ್ ಇರುತ್ತಾರೆ. ಅದರ ನಿರ್ವಹಣೆಯನ್ನೂ ಸರ್ಕಾರವೇ ಮಾಡುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications