ಆರ್ ಟಿಐ ಕಾರ್ಯಕರ್ತ ಕೊಲೆ, ಮುಡಾ ಎಂಜಿನಿಯರ್ ಸೇರಿ 6 ಮಂದಿ ವಶಕ್ಕೆ
ಮೈಸೂರು, ಜನವರಿ 1: ಮಾಹಿತಿ ಹಕ್ಕು ಕಾರ್ಯಕರ್ತ ಶ್ರೀನಾಥ್ ಕೊಲೆ ಪ್ರಕರಣದಲ್ಲಿ ಮೈಸೂರು ಪೊಲೀಸರು ಸರಕಾರಿ ಅಧಿಕಾರಿಯೂ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ. ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ಕೂಡ ಇದರಲ್ಲಿ ಸೇರಿದ್ದಾರೆ. ಮೃತರ ಕುಟುಂಬದವರ ಹೇಳಿಕೆಯನ್ನು ಆಧರಿಸಿ, ಈ ಕ್ರಮ ತೆಗೆದುಕೊಳ್ಳಲಾಗಿದೆ.
ಶ್ರೀರಂಗಪಟ್ಟಣದ ಕಾವೇರಿ ನದಿ ಬಳಿ ಶುಕ್ರವಾರ ಸಂಜೆ 36 ವರ್ಷದ ಶ್ರೀನಾಥ್ ಮೃತದೇಹವನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದಕ್ಕೆ ಒಂದು ದಿನ ಮುಂಚೆ ಶ್ರೀನಾಥ್ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಮೃತರ ಕುಟುಂಬದವರು ಹೇಳುವ ಪ್ರಕಾರ, ಶ್ರೀನಾಥ್ ಗೆ ಎಂಜಿನಿಯರ್ ಮತ್ತಿತರ ಖಾಸಗಿ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯವರಿಂದ ಬೆದರಿಕೆ ಇತ್ತು.[ಹೊಸ ವರ್ಷಾಚರಣೆ ತಕರಾರಿಗೆ ಜತೆಯಲ್ಲಿದ್ದವನದೇ ಕೊಲೆ]

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪ ಇದ್ದ ಹಲವು ಸರಕಾರಿ ಅಧಿಕಾರಿಗಳ ಬಗ್ಗೆ ಶ್ರೀನಾಥ್ ಮಾಹಿತಿ ನೀಡಿದ್ದರಂತೆ. ಈ ಬಗ್ಗೆ ಅವರ ಮನೆಯಿಂದ ಅನೇಕ ದಾಖಲಾತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಶ್ರೀನಾಥ್ ಕುಟುಂಬದವರು ನಾಪತ್ತೆ ದೂರು ಸಲ್ಲಿಸಿದ್ದರು.[ಕೆಆರ್ ಪೇಟೆ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ]
ದೇಹಕ್ಕೆ ಹಲವು ಬಾರಿ ಚುಚ್ಚಿದ ಗಾಯದೊಂದಿಗೆ, ಬೆಡ್ ಶೀಟ್ ನಲ್ಲಿ ಸುತ್ತಿದ್ದ ಶ್ರೀನಾಥ್ ಮೃತದೇಹವು ಪೊಲೀಸರಿಗೆ ಸಿಕ್ಕಿತ್ತು. ಬೇರೆಡೆ ಕೊಲೆ ಮಾಡಿ, ಇಲ್ಲಿಗೆ ತಂದು ಎಸೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications